nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025
    Facebook Twitter Instagram
    ಟ್ರೆಂಡಿಂಗ್
    • ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
    • ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
    • ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ
    • ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
    • ಮನೆ–ಮನೆಗೆ ಪೊಲೀಸ್‌: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
    • ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
    • ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
    • ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಶ್ವತ ನೀರಾವರಿ ಯೋಜನೆ ಎತ್ತಿನಹೊಳೆ: ಅಂತೂ ಇಂತೂ ಕೊರಟಗೆರೆಯಲ್ಲಿ ನೆಲೆಗೊಳ್ಳುವ ಸಾಧ್ಯತೆ 
    ಕೊರಟಗೆರೆ September 29, 2022

    ಶಾಶ್ವತ ನೀರಾವರಿ ಯೋಜನೆ ಎತ್ತಿನಹೊಳೆ: ಅಂತೂ ಇಂತೂ ಕೊರಟಗೆರೆಯಲ್ಲಿ ನೆಲೆಗೊಳ್ಳುವ ಸಾಧ್ಯತೆ 

    By adminSeptember 29, 2022No Comments4 Mins Read
    yettina hole

    ಕೊರಟಗೆರೆ : ಬಹುನಿರೀಕ್ಷಿತ ಶಾಶ್ವತ ನೀರಾವರಿ ಯೋಜನೆ ಎತ್ತಿನಹೊಳೆ ಅಂತೂ ಇಂತೂ ಕೊರಟಗೆರೆ ತಾಲೂಕಿನಲ್ಲಿಯೇ ನೆಲೆಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದ್ದು, ಭೂಸ್ವಾಧೀನ ಪ್ರಕ್ರಿಯೆಯ ಗೊಂದಲದ ನಡುವೆ 5.78 ಟಿಎಂಸಿ ಯಿಂದ 2ಟಿಎಂಸಿ ಸಾಮರ್ಥ್ಯದ ಬಫರ್ ಡ್ಯಾಂಗೆ ಪರಿಷ್ಕೃತ ಪ್ರಸ್ತಾವನೆ ರಾಜ್ಯ  ಸರ್ಕಾರ ಸಿದ್ಧಪಡಿಸಿದೆ ಎನ್ನಲಾಗಿದೆ.

    ತಾಲ್ಲೂಕಿನ ಬೈರಗೊಂಡ್ಲು ಬಳಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಬಫರ್ ಡ್ಯಾಮ್ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಎರಡೂ ತಾಲೂಕಿನ ಸಬ್ ರಿಜಿಸ್ಟರ್ ರೇಟ್ ವ್ಯತ್ಯಾಸದಿಂದ ಸೃಷ್ಠಿಯಾದ ಗೊಂದಲ ಕೊರಟಗೆರೆ ತಾಲೂಕಿನ ಜನತೆ ಭೂಸ್ವಾಧೀನ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರ್ಕಾರ 5.78 ಟಿ ಎಂ ಸಿ ಸಾಮರ್ಥ್ಯವನ್ನು ಹೊಸ ಪರಿಷ್ಕೃತ 2.78 ಟಿಎಂಸಿ ನೀರು ತಗ್ಗಿಸುವ ಮುಖೇನಾ 2 ಟಿಎಂಸಿ ಸಾಮರ್ಥ್ಯದ ನಿರ್ಮಾಣಕ್ಕೆ ಹೊಸ ಪ್ರಸ್ತುತ ಪ್ರಸ್ತಾವನೆ ಸರ್ಕಾರದಿಂದ ಸಿದ್ದಗೊಂಡಿದೆ.


    Provided by
    Provided by

    ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಹಾಲಿ ಶಾಸಕರಾದ ಡಾ ಜಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಎತ್ತಿನಹೊಳೆ ಯೋಜನೆಯ ಗೊಂದಲ ನಿವಾರಣೆ ಹಾಗೂ ಸರ್ಕಾರದ ನಿಲುವಿನ ಬಗ್ಗೆ ಅಧಿವೇಶನದ ಪ್ರಶ್ನೋತ್ತರ ವೇಳೆ ಡಾ. ಜಿ ಪರಮೇಶ್ವರ್  ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳಗೆ ಕೇಳಿದ ಪ್ರಶ್ನೆಯಿಂದ ದೊರೆತ ಉತ್ತರದಲ್ಲಿ ನಿಗದಿತ ಸ್ಥಳದಲ್ಲಿಯೇ 5.78 ಟಿ ಎಂ ಸಿ ಪ್ರಸ್ತಾವನೆಯಿಂದ 2 ಟಿಎಂಸಿಗೆ ನಿಲ್ಲಿಸಲಾಗಿ ಎರಡು ತಾಲೂಕಿನ ರೈತರ ಭೂಸ್ವಾಧೀನ ಪ್ರಕ್ರಿಯೆಯ ವ್ಯತ್ಯಾಸದಿಂದ 2.78 ಟಿಎಂಸಿ ನೀರಿನ್ನು ಕುಗ್ಗಿಸಿ ರಾಜ್ಯ ಸರ್ಕಾರ ಅಧಿಕೃತ ಪರಿಷ್ಕೃತ ಪಟ್ಟಿಯನ್ನು ಸಿದ್ಧಪಡಿಸಿರುವುದರ ಬಗ್ಗೆ ಪೂರ್ಣ ಮಾಹಿತಿ ಅಧಿವೇಶನದಲ್ಲಿ ನೀಡಲಾಗಿದೆ ಎನ್ನಲಾಗಿದೆ.

    ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಂತಹ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಶ್ವತ ನೀರಾವರಿ ಯೋಜನೆಯ ಕನಸೊತ್ತು ಬರಗಾಲ ಪೀಡಿತ ಪ್ರದೇಶಗಳಾದ ತುಮಕೂರು, ಚಿಕ್ಕಬಳ್ಳಾಪುರ,ಕೋಲಾರ , ಬೆಂಗಳೂರು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಕರಾವಳಿ ಪ್ರದೇಶಗಳ ವಿರೋಧದ ನಡುವೆಯೂ, ಹಲವು ಸಮಸ್ಯೆಗಳನ್ನು ಮೆಟ್ಟು ನಿಂತು ಅಂದಿನ ಸರ್ಕಾರ ಶಾಶ್ವತ ನೀರಾವರಿಗೆ ಒಂದು ಉತ್ತಮ ಯೋಜನೆಯನ್ನು ಜನರಿಗೆ ಕೊಡುಗೆಯಾಗಿ ನೀಡಿ ಅದರಲ್ಲೂ ಕೊರಟಗೆರೆ ತಾಲ್ಲೂಕಿನಲ್ಲಿ 5.78 ಟಿಎಂಸಿ ನೀರು ಶೇಖರಣೆಯ ಬಫರ್ ಡ್ಯಾಮ್ ಗೆ ಯೋಜನೆ ರೂಪಿಸಿ ಈ ಯೋಜನೆಯ ಅನುಷ್ಠಾನಕ್ಕೆ ಅಂದಿನ ಬಜೆಟ್ ನಲ್ಲಿ ನೂರಾರು ಕೋಟಿ ರೂ ಮೀಸಲಿಟ್ಟು ಅನುಷ್ಠಾನದ ತೀವ್ರತೆಯನ್ನು ಹೆಚ್ಚಿಸಿ ರೈತರ ಅಶೋತ್ತರಕ್ಕೆ ಸ್ಪಂದಿಸಿದ್ದರು.

    ಎತ್ತಿನಹೊಳೆ ಯೋಜನೆಯ ಅನುಷ್ಠಾನಕ್ಕೆ ಪ್ರಾರಂಭದಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯ ಅಡಚಣೆಯಾಗಿ, ನಂತರ ದಿನಗಳಲ್ಲಿ ರೈತರನ್ನು ಒಲೈಸಿ ಟೆಂಡರ್ ದಾರರು ದೊಡ್ಡಮಟ್ಟದ ಟ್ರಂಚ್ ಮೂಲಕ ಪೈಪ್ ಲೈನ್ ಕಾಮಗಾರಿಯ ವೇಗ ನೋಡಿ ಇಲ್ಲಿನ ರೈತರು ಇನ್ನು 2-3 ವರ್ಷಗಳಲ್ಲಿ ಎತ್ತಿನ ಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂಬ ಭರವಸೆ ಹುಸಿಕೊಂಡು, ರಾಜ್ಯ ಸರ್ಕಾರ  ಆಯವ್ಯಯದಲ್ಲಿ ನಿರೀಕ್ಷಿತ ಹಣಕಾಸಿನ ಕೊರತೆಯಿಂದ ಎತ್ತಿನ ಹೊಳೆ ಯೋಜನೆ ಕಾಮಗಾರಿ ವೇಗ ಕುಂಠಿತಗೊಂಡು ರೈತರ ನೀರಾವರಿ ಯೋಜನೆಯ ಕನಸು ಭಗ್ನಗೊಂಡು ನಿರಾಸೆ ಮೂಡಿಸಿದನ್ನು ನೆನಪಿಸಿಕೊಳ್ಳಬಹುದು.

    ಎತ್ತಿನಹೊಳೆ ಯೋಜನೆ ಕೊರಟಗೆರೆ ತಾಲೂಕಿನಲ್ಲಿ ಕಾಲಿಟ್ಟು, ಬೈರಗೊಂಡ್ಲು ಬಳಿ 5.78 ಟಿಎಂಸಿ ಸಾಮರ್ಥ್ಯದ ಬಫರ್ ಡ್ಯಾಮ್ ನಿರ್ಮಾಣವಾಗಲಿದೆ ಇದರಿಂದ ಕೋಳಾಲ ಭಾಗದ 8-10 ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಲಿವೆ. ಎಂಬ ಆಘಾತಕಾರಿ ಸುದ್ದಿಯಿಂದ ಇಲ್ಲಿನ ಜನರು ತಮ್ಮ ಊರು, ನೂರಾರು ವರ್ಷಗಳು ನೆಲದೊಂದಿಗೆ ಇದ್ದಂತಹ ಸಂಬಂಧ ಇಲ್ಲಿನ ಜನ ಕಳೆದುಕೊಳ್ಳದ ಮನಸ್ಥಿತಿಯಲ್ಲಿ ಇಲ್ಲದೆ ಕಾರಣ ಭೂಸ್ವಾಧೀನ ಪ್ರಕ್ರಿಯೆಗೆ ನಮ್ಮ ಜಮೀನನ್ನು ನೀಡೋದಿಲ್ಲ ಎಂದು ಹಲವು ಬಾರಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು ಸೇರಿದಂತೆ ರಾಜ್ಯಮಟ್ಟದ ಅಧಿಕಾರಿಗಳು ಸಂಧಾನ ಕೈಗೊಂಡು ಜನರ ಮನಸ್ಸನ್ನು ಒಂದು ಹಂತಕ್ಕೆ ಭೂಸ್ವಾಧೀನಕ್ಕೆ ಸಂಧಾನ ಕಾರ್ಯ ನಡೆಯುತ್ತಾದ್ರೂ ಕೊನೆಯ ಹಂತದಲ್ಲಿ ಹಣದ ವ್ಯತ್ಯಾಸಗಳಿಂದ ಸಮರ್ಪಕ ಭೂ ಸ್ವಾಧೀನ ಪ್ರಕ್ರಿಯೆಗೆ ಜನ ಸ್ಪಂದಿಸಲಿಲ್ಲ.

    ಎತ್ತಿನಹೊಳೆ ಪ್ರಾರಂಭ ಹಂತದಲ್ಲಿ ರೈತರಿಗೆ ಮಾಹಿತಿ ಕೊರತೆ ಹಾಗೂ ಬಫರ್ ಡ್ಯಾಮ್ ನಿರ್ಮಾಣದ ಪ್ರದೇಶ ಎರಡು ತಾಲೂಕಿನ ಗಡಿಗಳಿಗೆ ಹೊಂದಿಕೊಂಡಂತಿದ್ದು, ದೊಡ್ಡಬಳ್ಳಾಪುರ ಹಾಗೂ ಕೊರಟಗೆರೆ ತಾಲೂಕಿನ ಗಡಿಯಾದರಿಂದ ಎರಡು ವಿಭಾಗವಾಗಿ ಭೂಸ್ವಾದಿನ ಪ್ರಕ್ರಿಯೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮದವರಿಗೆ  38 ಲಕ್ಷ ಹಾಗೂ ಕೊರಟಗೆರೆ ಭಾಗದ ಜಮೀನುಗಳಿಗೆ 18 ಲಕ್ಷ ನಿಗದಿ ಪಡಿಸಿದ್ದರಿಂದ ರೈತರಲ್ಲಿ ಆಕ್ರೋಶ ಕಂಡು ಬಂದು ಒಂದೇ ಬಫರ್ ಡ್ಯಾಮಿಗೆ ಎರಡೆರಡು ತರದ ದರ ಪಟ್ಟಿ ನೀಡಿ ವ್ಯತ್ಯಾಸ ಹಣ ನೀಡಿದರೆ ನಾವು ಜಮೀನು ಬಿಟ್ಟುಕೊಳ್ಳುವುದಿಲ್ಲ, ದೊಡ್ಡಬಳ್ಳಾಪುರ ಮಾದರಿಯಲ್ಲಿಯೇ ನಮಗೂ ಹಣ ಸಂಧಾಯವಾಗಬೇಕು ಎಂದು ಪಟ್ಟು ಬಿಡದ ಕೋಳಾಲ ವ್ಯಾಪ್ತಿಯ ರೈತರು  ಪಟ್ಟು ಸಡಿಲಿಸದ ಕಾರಣ ಸರ್ಕಾರ ಅನಿವಾರ್ಯವಾಗಿ ಬೇರೆಡೆಗೆ ವರ್ಗಾಯಿಸುವ ಅಥವಾ ಬಫರ್ ಡ್ಯಾಮ್ ತಗ್ಗಿಸುವ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.

    ಕೊರಟಗೆರೆ ತಾಲ್ಲೂಕಿನ ಜನತೆಗೆ ಬಫರ್ ಡ್ಯಾಮ್ ನ ಸ್ಪಷ್ಟ ಚಿತ್ರಣ ನೀಡಿ ಎಂದು  ಇತ್ತೀಚಿಗೆ ಅಧಿವೇಶನದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಡಾ. ಜಿ ಪರಮೇಶ್ವರ್ ಪ್ರಶ್ನೆಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉತ್ತರಿಸಿ ಈ ಹಿಂದಿನ 5.78 ಟಿಎಂಸಿ ಸಾಮರ್ಥ್ಯದ  ಬಫರ್ ಡ್ಯಾಮ್ ಅನ್ನು 2.78 ಟಿಎಂಸಿ ತಗ್ಗಿಸಿ 2 ಟಿಎಂಸಿ ನೀರು ಹಿಡಿಯುವಷ್ಟು ಸಾಮರ್ಥ್ಯದ ಬಫರ್ ಡ್ಯಾಮ್ ಗೆ ಹಸಿರು ನಿಶಾನೆ ತೋರಿಸಿದ್ದು ಕೊರಟಗೆರೆ ತಾಲ್ಲೂಕಿನ ಪ್ರಸಕ್ತ ಪಟ್ಟಿಯಲ್ಲಿರುವ ಎಲ್ಲಾ ಕೆರೆಗಳಿಗೂ ನೀರು ಹಾಯಿಸುವ ಭರವಸೆಯನ್ನ  ನೀಡಿದ್ದಾರೆ.

    ಒಟ್ಟಾರೆ ಶಾಶ್ವತ ನೀರಾವರಿ ಯೋಜನೆ ಎತ್ತಿನ ಹೊಳೆ ಕೊರಟಗೆರೆ ತಾಲೂಕಿನಲ್ಲಿ ನೆಲೆಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿದ್ದು, ಪ್ರಸಕ್ತ ಈ ಹಿಂದೆ ಗುರುತಿಸಲಾದ ಬೈರಗೂಂಡ್ಲು ಪ್ರದೇಶದಲ್ಲಿಯೇ ಸಾಮರ್ಥ್ಯ ಕುಗ್ಗಿಸಿ ರೈತರಿಗೂ ಸಮಸ್ಯೆ ಆಗದ ರೀತಿಯಲ್ಲಿ ಬಫರ್ ಡ್ಯಾಮ್ ನಿರ್ಮಾಣಗೊಳ್ಳುವ ಜೊತೆಗೆ ತಾಲೂಕಿನ ನಿಗದಿತ ಬಹುತೇಕ ಕೆರೆಗಳಿಗೆ ನೀರು ತುಂಬಿಸುವಂತಹ ಕಾರ್ಯ ನಡೆದಿದ್ದು ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ.

     

    ಶಾಶ್ವತ ನೀರಾವರಿ ಯೋಜನೆ ವಿಚಾರದಲ್ಲಿ ನಾನು ಮೊದಲಿನಿಂದಲೂ ಆಸಕ್ತಿ ವಹಿಸುತ್ತಿದ್ದು, ರೈತರ ಪರ ನಿರ್ಧಾರಗಳ ಜೊತೆಗೆ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ವಿಚಾರದಲ್ಲಿ ಬಫರ್ ಡ್ಯಾಮ್ ಇಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು, ರೈತರ ಭೂ ಸ್ವಾಧೀನ ಪ್ರಕ್ರಿಯೆ ವಿಚಾರದಲ್ಲಿ ದೊಡ್ಡಬಳ್ಳಾಪುರ ಹಾಗೂ ಕೊರಟಗೆರೆ ಭಾಗಗಳಲ್ಲಿ ಸಬ್ ರಿಜಿಸ್ಟ್ರಾರ್ ರೇಟ್ ವ್ಯತ್ಯಾಸಗಳಿಂದ ರೈತರು ಆ ಭಾಗದ ರೈತರ ಹಣಕ್ಕಿಂತ ಕಡಿಮೆ ಹಣವನ್ನು ನಾವು ತೆಗೆದುಕೊಳ್ಳಬಾರದು ಎಂದು ಮನಸ್ಥಿತಿಯಲ್ಲಿದ್ದ ರೈತರಿಗೆ ಬಫರ್ ಡ್ಯಾಮ್ ಸಾಮರ್ಥ್ಯ ಮಟ್ಟ ಕುಗ್ಗಿಸಿ ನಿಯೋಜಿತ ಸ್ಥಳದಲ್ಲಿಯೇ ಕಾಮಗಾರಿ ಪ್ರಾರಂಭಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತಾರ್ಹ ಎಂದು  ಉಪಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.

     

    ರೈತರ ಜೀವನಾಡಿಗಳಾದ ಶಾಶ್ವತ ನೀರಾವರಿ ಯೋಜನೆಗಳ  ಅನುಷ್ಠಾನಗಳ ವಿಚಾರದಲ್ಲಿ ಸರ್ಕಾರಗಳಿಗೆ ಬದ್ಧತೆ ಇರಬೇಕು, ಇಲ್ಲಿನ ರೈತರಿಗೆ ಭೂ ಸ್ವಾಧೀನ ಪ್ರಕ್ರಿಯೆ ವಿಚಾರದಲ್ಲಿ ಉತ್ತಮವಾಗಿ ಸ್ಪಂದಿಸಿದ್ದರೆ ರೈತರು ಯಾವುದೇ ವಿರೋಧ ವ್ಯಕ್ತಪಡಿಸುತ್ತಿರಲಿಲ್ಲ, ಒಂದೇ ಸ್ಥಳಕ್ಕೆ ಎರಡೆರಡು ದರ ನಿಗದಿ ಮಾಡಿದರೆ ಯಾವ ನ್ಯಾಯ? ಅನಾವಶ್ಯಕ ವೆಚ್ಚಗಳಿಗೆ ಸರ್ಕಾರ ಕಡಿವಾಣ ಹಾಕಿ ಇಂತಹ ಉತ್ತಮ ನೀರಾವರಿ ಯೋಜನೆಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡದಿರುವುದು ದುರದೃಷ್ಟಕರ, ಆದರೂ ಕೊರಟಗೆರೆ ತಾಲೂಕಿನಲ್ಲಿ ರೈತರಲ್ಲಿ ಸ್ವಲ್ಪಮಟ್ಟಿನ ತೃಪ್ತಿ ತಂದಿದ್ದು ತಾಲೂಕಿನ ಎಲ್ಲಾ ಕೆರೆಗಳು ನೀರು ಹಾಯಿಸುವಂತ ಕೆಲಸವಾಗಬೇಕು ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸಿದ್ಧರಾಜು ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಕೇಳಿದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ತಿಪಟೂರು ವಿಭಾಗದ…

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025

    ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!

    November 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.