ಮಧುಗಿರಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ತುಮಕೂರು ಇವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಯಿತು. ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಆಲಿಸಲಾಯಿತು.
ಪುಟ್ಟರಂಗಮ್ಮ ಎಂಬವರು ಮಾತನಾಡಿ, ಲೋ ಬಿಪಿಯಿಂದಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ತಾನು ದಾಖಲಾಗಿದ್ದು, ಮುಂಚೆ ನನಗೆ ಚಿಕಿತ್ಸೆ ನೀಡಿದ ವೈದ್ಯರು ರಜೆಯಲ್ಲಿದ್ದ ಕಾರಣದಿಂದ ಇತರೆ ವೈದ್ಯರು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಲೋಕಾಯುಕ್ತರಿಗೆ ದೂರು ನೀಡಿದರು.
ಇದೇ ವೇಳೆ ಮಾತನಾಡಿದ ಲೋಕಾಯುಕ್ತ ಎಸ್.ಪಿ.ವಲಿಬಾಷ, ಸಾರ್ವಜನಿಕರು ಲೋಕಾಯುಕ್ತ ಕುಂದು ಕೊರತೆ ಸಭೆಗೆ ದೂರು ನೀಡುವಾಗ, ಸೂಕ್ತ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಿದರೆ ವಿಚಾರಣೆ ಮಾಡಿ ನ್ಯಾಯ ಒದಗಿಸಲು ಅನುಕೂಲವಾಗುತ್ತದೆ. ಕಂದಾಯ ಇಲಾಖೆಗೆ ಸಂಬಂಧ ಪಟ್ಟ ಕೆಲಸ ಮಾಡಿಕೊಡಲು ನಿಮ್ಮನ್ನು ಪದೇ ಪದೇ ಕಚೇರಿಗೆ ಅಲೆದಾಡಿಸಿದಾಗ ಮೊದಲು ಕಾರಣ ತಿಳಿದು ದಾಖಲೆಗಳ ಸಮೇತ ದೂರು ಸಲ್ಲಿಸಿ ಎಂದು ತಿಳಿಸಿದರು.
ತಾಲ್ಲೂಕಿನ ಸಾರ್ವಜನಿಕರಿಂದ ಲೋಕಾಯುಕ್ತರ ಸಬೆಗೆ ಸುಮಾರು 45 ಅರ್ಜಿಗಳು ಬಂದಿದ್ದು, ಅದರಲ್ಲಿ ಕಂದಾಯ ಇಲಾಖೆಯ ಸಂಬಂಧ ಪಟ್ಟ ಅರ್ಜಿಗಳು ಹೆಚ್ಚು ಬಂದಿದೆ ಹಾಗೂ ಖಾತೆ ಬದಲಾವಣೆ, ಗ್ರಾಮ ಪಂಚಾಯಿತಿ, ಆರೋಗ್ಯ ಇಲಾಖೆ, ಸರ್ವೆ ವಿಚಾರವಾಗಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಹೆಚ್ಚಿನದಾಗಿ ಐಡಿಹಳ್ಳಿ ಮತ್ತು ರೆಡ್ಡಿಹಳ್ಳಿ ಗ್ರಾಮಪಂಚಾಯಿತಿಗಳಿಂದ ಹೆಚ್ಚು ದೂರು ಅರ್ಜಿಗಳು ಸಲ್ಲಿಕೆಯಾಗಿದ್ದು ಕಂಡು ಬಂದಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕರು ಲೋಕಾಯುಕ್ತ ರವೀಶ್, ಪೊಲೀಸ್ ಅಧಿಕಾರಿ ಕೆ.ರಾಮರೆಡ್ಡಿ ಹಾಗೂ ಅರ್ಜಿದಾರರು ಮುಂತಾದವರು ಹಾಜರಿದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy