ನಾಗಪುರ: ಜನರು ತಪ್ಪು ರೀತಿಯ ಆಹಾರ ಸೇವನೆ ಮಾಡಬಾರದು ಮತ್ತು ಅತಿಯಾದ ಹಿಂಸೆಯನ್ನು ಒಳಗೊಂಡ ಆಹಾರ ಸೇವಿಸುವುದರಿಂದ ದೂರ ಇರಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ.
ಆರೆಸ್ಸೆಸ್ನ ಅಂಗ ಸಂಸ್ಥೆ ಭಾರತ್ ವಿಕಾಸ್ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವತ್ ಅವರು ವ್ಯಕ್ತಿತ್ವದ ಬಹುಮುಖ ಪ್ರಗತಿ ಕುರಿತಂತೆ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ.
“ನೀವು ತಪ್ಪು ರೀತಿಯ ಆಹಾರ ಸೇವಿಸುತ್ತಿದ್ದರೆ, ಅದು ನಿಮ್ಮನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತದೆ. ಜನರು ‘ತಾಮಸಿಕ’ ಆಹಾರ ತಿನ್ನಬಾರದು. ಅತಿಯಾದ ಹಿಂಸೆಯನ್ನು ಒಳಗೊಂಡ ಆಹಾರವನ್ನು ಸೇವನೆ ಮಾಡಬಾರದು” ಎಂದು ಸಲಹೆ ನೀಡಿದ್ದಾರೆ. ತಾಮಸಿಕ ಆಹಾರವು ಸಾಮಾನ್ಯವಾಗಿ ಮಾಂಸಾಹಾರ ಪದಾರ್ಥಗಳನ್ನು ಒಳಗೊಂಡಿರುತ್ತದೆ.
ಪಶ್ಚಿಮದ ದೇಶಗಳು ಮತ್ತು ಭಾರತದಲ್ಲಿನ ಮಾಂಸಾಹಾರಿಗಳ ನಡುವೆ ಅವರು ಹೋಲಿಕೆಯನ್ನು ಮಾಡಿದ್ದಾರೆ. “ಜಗತ್ತಿನಲ್ಲಿ ಎಲ್ಲೆಡೆ ಮಾಂಸ ಸೇವಿಸುವಂತಹ ಜನರು ಭಾರತದಲ್ಲಿ ಇದ್ದಾರೆ. ಆದರೆ ನಮ್ಮ ದೇಶದಲ್ಲಿ ಮಾಂಸಾಹಾರಿಗಳಾಗಿದ್ದರೂ ಕೂಡ ಸಂಯಮಗಳನ್ನು ಹೊಂದಿರುತ್ತಾರೆ ಮತ್ತು ಕೆಲವು ನಿಯಮಗಳನ್ನು ಪಾಲಿಸುತ್ತಾರೆ” ಎಂದು ಹೇಳಿದ್ದಾರೆ.
“ಇಲ್ಲಿ ಮಾಂಸಾಹಾರ ಸೇವನೆ ಮಾಡುವವರು ಶ್ರಾವಣದ ಇಡೀ ತಿಂಗಳು ಅದನ್ನು ತಿನ್ನುವುದಿಲ್ಲ. ಅವರು ಸೋಮವಾರ, ಮಂಗಳವಾರ, ಗುರುವಾರ ಅಥವಾ ಶನಿವಾರ ಮಾಂಸ ಸೇವನೆ ಮಾಡುವುದಿಲ್ಲ. ಅವರು ತಮ್ಮ ಮೇಲೆ ತಮಗೆ ಕೆಲವು ನಿಯಮಗಳನ್ನು ಹೇರಿಕೊಂಡಿರುತ್ತಾರೆ” ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy