ಕೊರಟಗೆರೆ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮವು ಅವರ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರವರನ್ನು ಜೋಡಿಸಲು ಸಾಧ್ಯವಿಲ್ಲ ಇನ್ನು ದೇಶವನ್ನು ಜೋಡಿಸಲು ಸಾಧ್ಯವೇ? ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಟೀಕಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ರವರ ಹುಟ್ಟು ಹುಬ್ಬದ ಅಂಗವಾಗಿ ಕೊರಟಗೆರೆ ವಿಧಾನ ಸಭಾ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಡಾ.ಲಕ್ಷೀಕಾಂತ್ ಹಮ್ಮಿಕೊಂಡಿದ್ದ ವಾಲಿಬಾಲ್ ಪಂದ್ಯವಾಳಿಗಳ ಕಾರ್ಯಕ್ರಮದ ಉದ್ಘಾಟನೆಗೂ ಮುಂಚಿತವಾಗಿ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಡನೆ ಮಾತನಾಡಿದರು.
ಭಾರತ್ ಜೋಡೋ ಕಾರ್ಯಕ್ರಮ ರಾಹುಲ್ ಗಾಂಧಿಯವರು ಯಾವ ಕಾರಣಕ್ಕಾಗಿ ಮಾಡುತ್ತಿದ್ದರೂ ತಿಳಿಯುತ್ತಿಲ್ಲ,ಕರ್ನಾಟಕದಲ್ಲೇ ಕಾಂಗ್ರೆಸ್ ಪಕ್ಷನ್ನು ಜೋಡಿಸಲಾಗದ ಸ್ಥಿತಿ ಇದ್ದು ದೇಶ ಜೋಡಿಸಲು ಹೋಗುವುದು ಪ್ರಯೋಜನವಿದೆಯಾ ಎಂದು ಪ್ರಶ್ನಿಸಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಬೆಳ್ಳಿಗೆ ಎದ್ದಾಗ ಅವರು ಮೊದಲು ಜಪ ಮಾಡುವುದು ಆರ್.ಎಸ್.ಎಸ್. ಸಂಘಟನೆ ಬಗ್ಗೆಯೇ, ಈ ಸಂಘಟನೆಯನ್ನು ಕಾಂಗ್ರೆಸ್ ಪಕ್ಷ ತಮ್ಮ ಅಧಿಕಾರ ಅವಧಿಗಳಲ್ಲಿ ದುರುದ್ದೇಶ ಪೂರ್ವಕವಾಗಿ ಕಾರಣವಿಲ್ಲದೇ ನಿಷೇಧ ಮಾಡಿದ್ದರು ಎಂದು ಅವರು ಆರೋಪಿಸಿದರು.
ಪಿ.ಎಪ್.ಐ. ಸಂಘಟನೆಯನ್ನು ಎನ್.ಐ.ಎ. ಸಂಪೂರ್ಣ ತನಿಖೆ ಮಾಡಿ ಸಾಕ್ಷ್ಯ ಸಂಗ್ರಹಿಸಿ ದೇಶದ ಪ್ರಭುದ್ದ ಮುಸ್ಲಿಂ ಸಂಘಟನೆಗಳೊಂದಿಗೆ ಚರ್ಚಿಸಿ ನಿಷೇಧಿಸಲಾಗಿದೆ. ಆರ್.ಎಸ್,ಎಸ್ ಎಂದಿಗೂ ದೇಶ ದೋಹ ಕೆಲಸ ಮಾಡಿಲ್ಲ, ಸಿದ್ದರಾಮಯ್ಯ ಯಾರನ್ನೋ ಮೆಚ್ಚಿಸಲು ಆ ಸಂಘಟನೆಯನ್ನು ನಿಷೇಧಿಸಲು ಒತ್ತಾಯಿಸುತ್ತಿದ್ದಾರೆ ಎಂದರು.
ದೇಶದಲ್ಲಿ ನಿಜವಾದ ದಲಿತ ಮತ್ತು ಸಂವಿಧಾನ ವಿರೋಧಿಗಳು ಕಾಂಗ್ರೆಸ್ ಪಕ್ಷವರು, ಆದರೆ ಅದನ್ನು ಬಿ.ಜೆ.ಪಿ ಮೇಲೆ ಹಾಕಲು ಬಹಳ ಶ್ರಮ ಪಡುತ್ತಿದ್ದಾರೆ. ದೇಶದಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಎಂ.ಪಿ. ಎ.ಎಲ್.ಎ. ಸಚಿವರು ಇರುವುದು ಬಿಜೆಪಿಯಲ್ಲಿ, ರಾಜ್ಯದಲ್ಲಿ ದಲಿತ ನಾಯಕ ಗೋವಿಂದ ಕಾರಜೋಳರವರನ್ನು ಉಪಮುಖ್ಯಮಂತ್ರಿ ಮಾಡಿದ್ದೇವೆ. ಸಂವಿದಾನ ಶಿಲ್ಪಿ ಬಾಬಾ ಸಾಹೇಬ ಅಂಬೇಡ್ಕರ್ ಅವರಿಗೆ ದುಃಖ ನೀಡಿದ್ದು, ಅವಮಾನಿಸಿದ್ದು, ಸಂವಿಧಾನ ಬದಲಾವಣೆ ಮಾಡಿದ್ದು ಕಾಂಗ್ರೆಸ್ ಪಕ್ಷ ಎನ್ನುವುದು ದಲಿತರು ಮರೆತಿಲ್ಲ ಎಂದರು.
ನಾನು ಸಚಿವನಾದ ಮೇಲೆ ನನ್ನ ಇಲಾಖೆಯಿಂದ ನ್ಯಾಷನಲ್ ಎಸ್.ಸಿ/ ಎಸ್.ಟಿ ಕಾರ್ಪರೇಷನ್ ನಿಂದ ರಾಜ್ಯಗಳ ಅಭಿವೃದ್ಧಿಗೆ ಅತಿ ಕಡಿಮೆ ಬಡ್ಡಿ ಸಾಲ ಕೊಡಲಾಗುತ್ತಿದೆ, ಕೇಂದ್ರ ಸರ್ಕಾರದ ಆದರ್ಶ ಗ್ರಾಮಗಳನ್ನು ಗುಡಿಸಲು ಮುಕ್ತ ಮಾಡುವುದು, ಅಲ್ಲಿ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಭವನ ನಿರ್ಮಾಣ, ದೇಶದಲ್ಲಿ ಪ್ರತಿ ವರ್ಷ 3,000 ವಿದ್ಯಾರ್ಥಿಗಳಿಗೆ ಉಚಿತ ಯು.ಪಿ.ಎಸ್.ಸಿ. ತರಬೇತಿ ನೀಡಲಾಗುತ್ತಿದೆ ಹಾಗೂ ಪ್ರತಿ ರಾಜ್ಯದಲ್ಲೂ ತರಬೇತಿ ಸಂಸ್ಥೆಯನ್ನು ತೆರೆಯಲಾಗುವುದು ಎಂದರು.
ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದು, ಪಕ್ಷ ನಾಯಕರು ಮುಖಂಡರು ಅದನ್ನು ಸರಿತೂಗಿಸುವರು ಮತ್ತೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ವಿಧಾನ ಸಭಾ ಆಕಾಂಕ್ಷಿ ಡಾ.ಲಕ್ಷೀಕಾಂತ್, ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್, ತಾಲೂಕು ಅಧ್ಯಕ್ಷ ಪವನ್ ಕುಮಾರ್, ಮಧುಗಿರಿ ತಾಲೂಕು ಅಧ್ಯಕ್ಷ ನರಸಿಂಹಮೂರ್ತಿ, ಮುಖಂಡರುಗಳಾದ ತಿಮ್ಮಜ್ಜ, ವಿಜಯ್ಕುಮಾರ್, ಸುಶೀಲಮ್ಮ, ಮಮತಾ, ಗುರುದತ್, ದೇವರಾಜು, ಅರುಣ್ ಕುಮಾರ್, ಸ್ವಾಮಿ, ಭಾನುಪ್ರಕಾಶ್, ಸೇರಿದಂತೆ ಇತರರು ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


