ಬೆಂಗಳೂರು : ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಮುಖ್ಯಮಂತ್ರಿ ಬೊಮ್ಮಾಯಿ ನಿಂತಿದ್ದಾರೆ ಎಂದು ಸಚಿವ ಶ್ರೀರಾಮಲು ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು.
ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಮುಖ್ಯಮಂತ್ರಿ ಬೊಮ್ಮಾಯಿ ನಿಂತಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಅಂದು ನಾನು ಅವತ್ತೇ ಹೇಳಿದ್ದೆ. ಮೀಸಲಾತಿ ಹೆಚ್ಚಳ ಮಾಡುತ್ತೇನೆ ಎಂದು ಅದು ಈಗ ಈಡೇರಿದೆ ಎಂದರು.
ಮೀಸಲಾತಿ ಕೊಡಲು ನಮ್ಮ ಸರ್ಕಾರ ಬರಬೇಕು ಅಂದಿದ್ದೆ. ಆದರೆ ನನ್ನನ್ನು ಕೆಲವರು ಗೇಲಿ ಮಾಡಿದರು. ಆದರೂ ತಾಳ್ಮೆಯಿಂದ ಇದ್ದಿದ್ದಕ್ಕೆ ನಮ್ಮ ಸಮಾಜಕ್ಕೆ ಫಲ ಸಿಕ್ಕಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


