ಬೆಂಗಳೂರು : ಕೃಷಿ, ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆಗಳ ಸಚಿವಾಲಯ ಮಟ್ಟದ ಉನ್ನತ ಹಾಗೂ ಹಿರಿಯ ಶ್ರೇಣಿಯ ಎರಡು ಸಾವಿರ ಹುದ್ದೆಗಳನ್ನು ರದ್ದುಪಡಿಸಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ಶಿಫಾರಸು ಮಾಡಿದೆ.
ವಿಧಾನಸೌಧದಲ್ಲಿ ಸಚಿವ ಆರ್. ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವ ಸಂಪುಟದ ಉಸಮಿತಿಯು ಈ ನಿರ್ಣಯ ತೆಗೆದುಕೊಂಡಿದ್ದು, ಕೃಷಿ ಇಲಾಖೆಯಡಿ ಬರುವ ಮೈಸೂರು ತಂಬಾಕು ಕಂಪನಿ, ಕೃಷಿ ಕೈಗಾರಿಕೆ ನಿಗಮ, ಆಹಾರ ನಿಗಮ, ರೇಷ್ಮೆ ಬೆಳೆಯದ ಜಿಲ್ಲೆಗಳಲ್ಲಿನ ಜಿಲ್ಲಾ, ತಾಲೂಕುಮಟ್ಟದ ಅಧಿಕಾರಿಗಳ ಹುದ್ದೆಗಳು, ಕೆಳಹಂತದ ಸಿಬ್ಬಂದಿ ಕೃಷಿ ಇಲಾಖೆಗೆ ಹಸ್ತಾಂತರಿಸುವ ಕುರಿತು ಶಿಫಾರಸು ಮಾಡಲಾಗಿದೆ.
ಯಾವುದೆಲ್ಲ ವಿಲೀನ?:
ಶಿಕ್ಷಣ ಇಲಾಖೆಯಲ್ಲಿ ಮುದ್ರಣ, ಲೇಖನ ಸಾಮಗ್ರಿ, ಪ್ರಕಟಣೆ ಇಲಾಖೆ.
ಪ್ರವಾಸೋದ್ಯಮ ಇಲಾಖೆಯಲ್ಲಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.
ಯಾವುದು ರದ್ದು?:
ಮೈಸೂರು ತಂಬಾಕು ಕಂಪನಿ, ಕರ್ನಾಟಕ ಕೃಷಿ ಕೈಗಾರಿಕಾ ನಿಗಮ, ಕರ್ನಾಟಕ ಆಹಾರ ನಿಗಮ.
ರೇಷ್ಮೆ ಬೆಳೆಯದ ಜಿಲ್ಲೆಗಳಲ್ಲಿನ ಜಿಲ್ಲಾ, ತಾಲೂಕುಮಟ್ಟದ ಅಧಿಕಾರಿಗಳ ಹುದ್ದೆಗಳು. ಕೆಳಹಂತದ ಸಿಬ್ಬಂದಿ ಕೃಷಿ ಇಲಾಖೆಗೆ ಹಸ್ತಾಂತರ.
ರಾಮನಗರ, ಚನ್ನಪಟ್ಟಣ, ಕನಕಪುರ, ಬೆಂಗಳೂರು ಏರ್ಪೋರ್ಟ್ ಸೇರಿ 10 ಯೋಜನಾ ಪ್ರಾಧಿಕಾರಗಳ ರದ್ದು, ಪ್ರತಿ ಜಿಲ್ಲೆಗೆ ಒಂದು ಯೋಜನಾ ಪ್ರಾಧಿಕಾರ ರಚನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


