nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ ನಮ್ಮ ಆದರ್ಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
    ರಾಜ್ಯ ಸುದ್ದಿ October 15, 2022

    ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ ನಮ್ಮ ಆದರ್ಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    By adminOctober 15, 2022No Comments2 Mins Read

    Provided by
    Provided by

    ಬೆಂಗಳೂರು : ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ನಮಗೆ  ಆದರ್ಶ ಹಾಗೂ ಪ್ರೇರಣೆ. ನಮ್ಮ ತೀರ್ಮಾನಗಳಿಗೆ ಈ ಮಹನೀಯರ ಬದುಕು, ವಿಚಾರಧಾರೆಯನ್ನು ಕೇಳಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ನಾಗಸೇನಾ ವಿದ್ಯಾಲಯದಲ್ಲಿ ಬುದ್ಧ, ಅಂಬೇಡ್ಕರ್ ಮಂಟಪ  ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಸ್ತುಸಂಗ್ರಹಾಲಯಕ್ಕೆ  ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,  ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ತಮ್ಮ ಬದುಕನ್ನೇ ತ್ಯಾಗ ಮಾಡಿದ್ದರಿಂದ ಅವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಡದವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಟ್ಟವರು ಕಾಲಸೀಮಿತವಾಗಿರುತ್ತಾರೆ ಎಂದರು.

    ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನ:


    Provided by
    Provided by

    ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನವನ್ನು ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದ ಮುಖ್ಯಮಂತ್ರಿಗಳು ನಾನು ಒಬ್ಬ  ಅಂಬೇಡ್ಕರ್, ಬುದ್ದ, ಬಸವ, ವಾಲ್ಮೀಕಿ ಭಕ್ತ. ಅಂಬೇಡ್ಕರ್ ಅವರ ಇಚ್ಛೆಯಂತೆ ಸಂಸ್ಥೆ  ಬೆಳೆದಿದೆ. ಇದು ಇನ್ನಷ್ಟು ಬೆಳೆಯಬೇಕು. ಇಲ್ಲಿ  ಪ್ರಸ್ತಾಪಿಸಿರುವ 2-3 ವಿಚಾರಗಳಿಗೆ ಸಂಪೂರ್ಣ ಸಹಮತ ಮತ್ತು ಬೆಂಬಲ ನೀಡಲಾಗುವುದು ಸಂಸ್ಥೆಗೆ ಅಗತ್ಯವಿರುವ  ಅನುದಾನವನ್ನು  ಮುಂದಿನ ವರ್ಷ ಪಿಯುಸಿ ಅದರ ಮುಂದಿನ ವರ್ಷ ಪದವಿ ಕೋರ್ಸುಗಳು ಪ್ರಾರಂಭ ಮಾಡಬೇಕೆಂಬ  ಷರತ್ತಿ ಮೇಲೆ ಬಿಡುಗಡೆ ಮಾಡಲಾಗುವುದು ಎಂದರು.

    ಬೆಂಗಳೂರಿನ ಕೇಂದ್ರ ಸ್ಥಾನದಲ್ಲಿರುವ ಸಂಸ್ಥೆ ಇನ್ನೂ ಬೆಳೆಯಬೇಕು. ಕೇಂದ್ರ ಸಚಿವ ರಾಮದಾಸ್ ಅಟಾವಳೆ ಅವರು ಸಹ ಇದಕ್ಕೆ ಬೆಂಬಲ ನೀಡುವರು ಎಂದರಲ್ಲದೆ, ಸರ್ಕಾರ ಎಸ್.ಸಿ. ಎಸ್.ಪಿ ಟಿ.ಎಸ್ಪಿ ಯೋಜನೆಯಡಿ 100 ಅಂಬೇಡ್ಕರ್ ಹಾಸ್ಟೆಲ್ ಗಳನ್ನು ನಿರ್ಮಿಸಲು ತೀರ್ಮಾನ ಮಾಡಲಾಗಿದೆ. ಈ ಪೈಕಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲ ಮಾಡಿಕೊಡುವುದಾದರೆ ಒಂದು ಹಾಸ್ಟೆಲ್ ನ್ನು ಈ ಆವರಣದಲ್ಲಿ  ನಿರ್ಮಿಸಲಾಗುವುದು. ಅಂಬೇಡ್ಕರ್ ಅವರ ಜೀವನಚರಿತ್ರೆ ಬಿಂಬಿಸುವ ವಸ್ತುಸಂಗ್ರಹಾಲಯ ನಿರ್ಮಿಸುವ ಯೋಜನೆಗೆ ರಾಜ್ಯ ಸರ್ಕಾರದ ಯೋಜನೆಯಡಿ  ಅಂಬೇಡ್ಕರ್ ಭೇಟಿ ನೀಡಿದ ಹತ್ತು ಸ್ಥಳಗಳ ಅಭಿವೃದ್ದಿ ಪಡಿಸುತ್ತಿದ್ದು, ಅದರಲ್ಲಿ ನಾಗಸೇನಾ  ವಿದ್ಯಾಲಯಕ್ಕೂ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಆದರ್ಶ ಜೀವನ ನಡೆಸಬೇಕೆಂದು  ತಿಳಿಸಿದರು.

    ಬುದ್ಧ ಅಂತ:ಕರಣದ ಪ್ರತೀಕ:

    ಪೀಪಲ್ಸ್ ಎಜುಕೇಷನ್ ಸೊಸೈಟಿಯನ್ನು ಅಂಬೇಡ್ಕರ್ ಸ್ಥಾಪನೆ ಮಾಡಿದ್ದಾರೆ‌. ಅಂತಹ ಸಂಸ್ಥೆ ನಮ್ಮ ಬೆಂಗಳೂರಿನಲ್ಲಿರುವುದು  ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಜಗತ್ತಲ್ಲಿ ಮಾನವ ಮನುಷ್ಯನಾಗಿ ಹುಟ್ಟುತ್ತಾರೆ. ಕೆಲವರು ಮಾತ್ರ ಮಾನವರಾಗುತ್ತಾರೆ. ಮನುಷ್ಯರಾಗಿ ಹುಟ್ಟಿ ಕೆಲವರು ದೇವರಾಗುತ್ತಾರೆ. ನ್ಯಾಯ ನೀತಿ, ಧರ್ಮ, ಸತ್ಯ, ಅಹಿಂಸೆ,ಪ್ರೀತಿ, ವಿಶ್ವಾಸಗಳ ಸಂಕೋಲೆಯಲ್ಲಿ ಸಿಕ್ಕವನು ಮಾನವ. ಬುದ್ಧ ಜಾಗೃತಿಯ ಪ್ರತೀಕ. ಬುದ್ಧನಿಗೆ  ಸಮಾಜದಲ್ಲಿರುವ ದು:ಖ, ದುಮ್ಮಾನಗಳನ್ನು ನೋಡಿ ಅಂತರಂಗದಲ್ಲಿ ಜಾಗೃತಿಯಾಯಿತು. ಮುಂದೆ ಆತ ತ್ಯಾಗದ ಪ್ರತೀಕ, ಜ್ಞಾನದ ಪ್ರತೀಕ, ಇಡಿ ವಿಶ್ವದಲ್ಲಿ ಅಂತ:ಕರಣದ ಪ್ರತೀಕವಾಗಿದ್ದಾನೆ. ಬುದ್ದನನ್ನು ಜಗತ್ತಿನ ಎಲ್ಲಾ ದೇಶಗಳಲ್ಲಿ ಪ್ರೀತಿಸುತ್ತಾರೆ. ಅಮೇರಿಕಾದ ಅಧ್ಯಕ್ಷರ ಕಚೇರಿಯಲ್ಲಿ ಬುದ್ಧನ ಪ್ರತಿಮೆಯಿದೆ. ಬುದ್ಧ  ಶ್ರೇಷ್ಠ ದೇವಮಾನವ ಎಂದರು.

    nagasena

    ಬಸವಣ್ಣ ಜಾಗೃತಿಯ ಪ್ರತೀಕ:

    ಬಸವಣ್ಣ ಕೂಡ ಜಾಗೃತಿಯ ಪ್ರತೀಕ. ಜಾಗೃತಿಯ ಜೊತೆಗೆ   ವ್ಯವಸ್ಥೆಯ ವಿರುದ್ದ ಸಿಡಿದೆದ್ದು, ಹೊಸ  ಮನ್ವಂತರವನ್ನು ಹಾಡಿದರು. ಸಮಾಜದಲ್ಲಿ ಸಮಾನತೆಯ ಪ್ರತೀಕ ಬಸವಣ್ಣ. ಧರ್ಮಕ್ಕೆ ಅತ್ಯಂತ ಸೂಕ್ತ ವ್ಯಾಖ್ಯಾನವಾದ ದಯವೇ ಧರ್ಮದ ಮೂಲ ಎಂದು ವಿಶ್ವ ಮಾನವರಾದರು. ಅಂಬೇಡ್ಕರ್ ಅವರು ಜ್ಞಾನ, ಜಾಗೃತಿ, ಸಮಾನತೆ,  ತ್ಯಾಗದ ಹಾಗೂ ಭಾರತ ದೇಶದ ಭವ್ಯ ಭವಿಷ್ಯವನ್ನು ಬರೆದ ಧೀಮಂತ. ಅಂಬೇಡ್ಕರ್ ಅವರು ಸಂವಿಧಾನ ಬರೆಯದಿದ್ದರೆ, ಈ ಸಮಾಜದಲ್ಲಿ ಶಾಂತಿ ಸೌಹಾರರ್ದತೆ ಇರುತ್ತಿರಲಿಲ್ಲ. ಶಾಂತಿ, ಸೌಹಾರ್ದತೆ ಇದ್ದರೆ ಮಾತ್ರ ಪ್ರಗತಿಯಾಗಲು ಸಾಧ್ಯ. ಅದಕ್ಕೆ ಸಂಪೂರ್ಣವಾದ,  ಅದ್ಭುತವಾದ ಕಾನೂನಿನ ಸ್ವರೂಪದ ಸಂವಿಧಾನವನ್ನು ನಮಗೆ ಕೊಟ್ಟಿದ್ದು. ಇದನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ, ಸೂರ್ಯಚಂದ್ರ ಇರುವವರೆಗೂ ಅಂಬೇಡ್ಕರ್ ಹೆಸರು ಶಾಶ್ವತವಾಗಿರುತ್ತದೆ ಎಂದರು.

    ಪರಿವರ್ತನೆಯ ಪ್ರತೀಕ:

    ವಾಲ್ಮಿಕಿ ಪರಿವರ್ತನೆಯ ಪ್ರತೀಕ. ತನ್ನ ಹಿಂದಿನ ಜೀವನವನ್ನು ಬದಲಾಯಿಸಿಕೊಂಡು ಮರ್ಹರ್ಷಿಯಾದರು. ವಾಲ್ಮೀಕಿ ರಾಮಾಯಣದ ಮುಖಾಂತರ ನ್ಯಾಯ, ನೀತಿ, ಧರ್ಮವನ್ನು ಸ್ವಷ್ಟವಾಗಿ ವ್ಯಾಖ್ಯಾನ ಮಾಡಿದ್ದಾರೆ. ವಾಲ್ಮೀಕಿ ಇರದಿದ್ದರೆ ರಾಮಾಯಣ ಇಷ್ಟು ಸುಂದರವಾದ, ಆದರ್ಶವಾದ ರಾಮಾಯಣ ಇರುತ್ತಿರಲಿಲ್ಲ. ಭೂಮಿಯ ಮೇಲೆ ಮಾನವನ ಜನ್ಮವಿರುವವರೆಗೂ ಶಾಶ್ವತವಾಗಿ ಎಲ್ಲರ ಮನದಾಳದಲ್ಲಿ ಈ ನಾಲ್ಕೂ ಜನ ಇರುತ್ತಾರೆ ಎಂದರು.

    ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಂದಾಸ್ ಅಠವಳೆ, ನಾಗಸೇನಾ ವಿದ್ಯಾಲಯದ ಅಧ್ಯಕ್ಷ ಡಾ: ಎಂ.ವೆಂಕಟಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.