ಕೊರಟಗೆರೆ: ತಾಲ್ಲೂಕಿನಲ್ಲಿ ಸುಮಾರು 12 ವರ್ಷಗಳಿಂದ ಕರ್ನಾಟಕದ ರಕ್ಷಣಾ ವೇದಿಕೆ (ಟಿ.ಎ.ನಾರಾಯಣ ಗೌಡರ ಬಣ) ಕನ್ನಡ ಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಕನ್ನಡ ಪರ ಹೋರಾಟಗಳಲ್ಲಿ ತೊಡಗಿದ್ದ ಕೆ.ಎನ್.ನಟರಾಜು ತಾಲ್ಲೂಕು ಅಧ್ಯಕ್ಷನಾಗಿ ಕನ್ನಡ ನಾಡಿನ ನೆಲ,ಜಲ,ಭಾಷೆ, ವಿಚಾರವಾಗಿ ಸತತ ಹೋರಾಟಗಳನ್ನು ನಡೆಸಿಕೊಂಡು ತಾಲ್ಲೂಕಿನಲ್ಲಿ ನೂರಾರು ಹೋರಾಟಗಳನ್ನು ಮಾಡಿ ನೊಂದವರ ಪರ ಧ್ವನಿಯಾಗಿ ಕನ್ನಡ ಪರ ಸಂಘಟನೆಗಳ ಹೋರಾಟಗಳಲ್ಲಿ ಮುಂಚೂಣಿ ನಾಯಕರಾಗಿ ತಾಲ್ಲೂಕಿನಲ್ಲಿ ಹೊರಹೊಮ್ಮಿದ್ದಾರೆ.
ಆದರೆ, ಕೆಲವು ದಿನಗಳ ಹಿಂದೆ ರಾಜಕೀಯ ಪ್ರೇರಿತವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಕೆ ಎನ್ ನಟರಾಜು ರವರನ್ನು ಯಾವುದೋ ದುರುದ್ದೇಶಕ್ಕೆ ಅಧ್ಯಕ್ಷ ಸ್ಥಾನದಿಂದ ವಜಾಗೋಳಿಸಿರುವುದು ತಾಲ್ಲೂಕಿನ ಕರವೇ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ತುಮಕೂರು ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ ಕಾರಣರಾಗಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲಿಂ ವುಲ್ಲ, ಸುಮಾರು 12 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮತ್ತು ಕನ್ನಡಪರ ಕಾರ್ಯಕ್ರಮಗಳಲ್ಲಿ ನಿರಂತರವಾದ ಸೇವೆ ಸಲ್ಲಿಸಿಕೊಂಡು ಬಂದಿರುವ ಕರವೇ ಅಧ್ಯಕ್ಷ ಕೆ.ನಟರಾಜ್ ರವರನ್ನು ಯಾವುದೋ ದುರುದ್ದೇಶಕ್ಕಾಗಿ ತಾಲೂಕು ಅಧ್ಯಕ್ಷನ ಸ್ಥಾನದಿಂದ ವಜಾ ಗೊಳಿಸಿರುವುದು ನಮಗೆಲ್ಲರಿಗೂ ನೋವುಂಟು ಮಾಡಿದೆ. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯ ಗಮನಕ್ಕೆ ತಾರದೆ ಈ ಆದೇಶವನ್ನು ಹೊರಡಿಸಿರುವ ಜಿಲ್ಲಾಧ್ಯಕ್ಷರ ನಡೆ ಸರಿ ಅನಿಸುವುದಿಲ್ಲ ಎಂಬುದು ನಮ್ಮೆಲ್ಲರ ಅಭಿಪ್ರಾಯವಾಗಿದೆ. ನಾಲ್ಕು ಹೋಬಳಿಗಳಲ್ಲಿ ಸಂಘಟನೆಯನ್ನು ಕಟ್ಟಿ ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಮಾಡಿ ನಿರಂತರವಾದ ಹೋರಾಟಗಳನ್ನು ಮಾಡಿಕೊಂಡು ಬಂದಿರುವ ಮುಂಚೂಣಿ ನಾಯಕರಾದ ಕೆ.ನಟರಾಜುರವರನ್ನು ವಜಾಗೊಳಿಸುವುದರಿಂದ ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಸರಿಪಡಿಸದಿದ್ದರೆ ನಾವು ಎಲ್ಲರೂ ಒಟ್ಟಾರೆ ಸೇರಿ ಸಾಮೂಹಿಕ ರಾಜೀನಾಮೆಯನ್ನು ರಾಜ್ಯಾಧ್ಯಕ್ಷರಿಗೆ ಸಲ್ಲಿಸಲು ಮುಂದಾಗುತ್ತೇವೆಂದು ಈ ಸಂದರ್ಭದಲ್ಲಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಕರವೇ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡ್ರು ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಗೌರವಾಧ್ಯಕ್ಷ ಬಿ.ಎಚ್.ಪ್ರಸನ್ನಕುಮಾರ್ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲೀಂ ವುಲ್ಲಾ, ಸಾಮಾಜಿಕ ಹೋರಾಟಗಾರ ಜಟ್ಟಿ ಅಗ್ರಹಾರ ನಾಗರಾಜು ಹೊಳವನಹಳ್ಳಿ ಹೋಬಳಿ ಅಧ್ಯಕ್ಷ ಮಹೇಶ್ ಸಿ. ವಿ, ಸಿ.ಏನ್. ದುರ್ಗ ಹೋಬಳಿ ಅಧ್ಯಕ್ಷ ದಿನೇಶ್ ಎಂ ಎಸ್, ತುಂಬಾಡಿ ಶಾಖೆಯ ರಮೇಶ್, ಕೋದಂಡರಾಮು,ಚಿಕ್ಕನಹಳ್ಳಿ ಗೋವಿಂದರಾಜು,ಬುಕ್ಕಾಪಟ್ಟಣ ಶಾಖೆಯ ಅಧ್ಯಕ್ಷರಾದ ಸುನಿಲ್ ಶ್ರೀನಿವಾಸ್,ವಿಜಯ್ ಕುಮಾರ್, ಪ್ರೇಮ್ ಕುಮಾರ್ ,ತೀತಾ ಘಟಕದ ಮಂಜುನಾಥ್,ಗಿರೀಶ್,ಲಕ್ಷ್ಮೀಕಾಂತ, ರಕ್ಷಿತ್ ಗೌಡ್ರು,ರಾಮಮೂರ್ತಿ,ವಿನಯ್ ಕುಮಾರ್,ಮಲ್ಲೇಶ್,ಓಬಳರಾಜು ಹಾಗೂ ಶಿವಕುಮಾರ್ ಹಾಗೂ ಕಾರ್ಯಕರ್ತರು ಹಾಜರಿದ್ದರು..
ವರದಿ: ಮಂಜುಸ್ವಾಮಿ.ಎಂ.ಎನ್.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy