nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    • ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಕ್ಕಿಪಿಕ್ಕಿ, ದಲಿತರ ಮನೆ ತೆರವು; ಜೆಸಿಬಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ, ಆತ್ಮಹತ್ಯೆಗೆ ಯತ್ನ!
    ರಾಜ್ಯ ಸುದ್ದಿ October 19, 2022

    ಹಕ್ಕಿಪಿಕ್ಕಿ, ದಲಿತರ ಮನೆ ತೆರವು; ಜೆಸಿಬಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ, ಆತ್ಮಹತ್ಯೆಗೆ ಯತ್ನ!

    By adminOctober 19, 2022No Comments2 Mins Read
    hakkipikki

    ಬೆಂಗಳೂರಿನ ನಗರದ ಮಲ್ಲಿಗೇನಹಳ್ಳಿ ಸಮೀಪದ ತುಂಗಾ ಮೇಲ್ದಂಡೆ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಕಟ್ಟಿಕೊಂಡಿರುವ ಮನೆಗಳನ್ನು ನೀರಾವರಿ ಇಲಾಖೆಯವರು ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಿದರು.

    ಈ ವೇಳೆ ಪ್ರತಿಭಟನಾನಿರತ ನಿವಾಸಿಗಳು ಪ್ರತಿಭಟನೆ ನಡೆಸಿದರು ಕೆಲವರು ತುಂಗಾ ಮೇಲ್ದಂಡೆ ಮೇಲಿಂದ ಹಾರಲೂ ಸಹ ಪ್ರಯತ್ನ ಪಟ್ಟರು. ಆದರೆ ಅಧಿಕಾರಿಗಳು ಮಾತ್ರ ಕೆಲ ಮನೆಗಳನ್ನ ಒಡೆದು ಇನ್ನುಳಿದವರಿಗೆ ವಾರ್ನಿಂಗ್ ಮಾಡಿ ತೆರಳಿದರು.


    Provided by
    Provided by

    ಮಲ್ಲಿಗೇನಹಳ್ಳಿ ಸಮೀಪದ ಅಂಬೇಡ್ಕರ್ ಕಾಲೋನಿಯಲ್ಲಿ ನೀರಾವರಿ ಇಲಾಖೆಯ ತುಂಗಾ ಮೇಲ್ದಂಡೆ ಯೋಜನೆಯ ಬಫರ್ ಜೋನ್ ನಲ್ಲಿ ಸುಮಾರು 5 ಎಕರೆ 3 ಗುಂಟೆ ಜಾಗ ಒತ್ತುವರಿ ಆಗಿದ್ದೆ. ಹೈಕೋರ್ಟ್ ಇತ್ತೀಚೆಗೆ ಆದೇಶ ನೀಡಿ ನೀರಾವರಿ ಇಲಾಖೆಯ ಜಮೀನಿನ ಒತ್ತುವರಿ ತೆರವು ಮಾಡಬೇಕೆಂದು ಆದೇಶ ನೀಡಿತ್ತು. ಈ ಹಿನ್ನಲೆ ಸೋಮವಾರ ಮನೆ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಕಾರ್ಯಪ್ರವೃತ್ತರಾದರು.

    ನೀರಾವರಿ ಇಲಾಖೆಗೆ ಸೇರಿದ 5 ಎಕರೆ 3 ಗುಂಟೆ ಜಾಗದಲ್ಲಿ ಸುಮಾರು 200 ಮನೆಗಳನ್ನು ಹಕ್ಕಿಪಿಕ್ಕಿ, ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ಜನಾಂಗದವರು ನಿರ್ಮಿಸಿಕೊಂಡಿದ್ದರು. ಇದರಲ್ಲಿ 120 ಮನೆಗಳು ಅನಧಿಕೃತ ಜಾಗದಲ್ಲಿವೆ. ಈ ಹಿಂದೆ ಜಾಗ ತೆರವುಗೊಳಿಸುವಂತೆ ನೀರಾವರಿ ಇಲಾಖೆ ನೋಟೀಸ್ ನೀಡಿದ್ದರೂ ಯಾವುದೇ ಉತ್ತರ ನೀಡಿಲ್ಲದ್ದ ಕಾರಣ ಅಧಿಕಾರಿಗಳು ಪೊಲೀಸ್ ಇಲಾಖೆ ನೆರವಿನೊಂದಿಗೆ ತೆರವು ಕಾರ್ಯಾಚರಣೆ ನಡೆಸಿದರು.

    ಮಾತಿನ ಚಕಮಕಿ:

    ಮನೆ ತೆರವು ಕಾರ್ಯಾಚರಣೆ ವಿರೋಧಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಸ್ಥಳದಲ್ಲಿ ಧರಣಿ ನಡೆಸಿದರು. ಈಗಾಗಲೇ ಈ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದ್ದು, ಕಳೆದ 7-8 ವರ್ಷಗಳಿಂದ ವಿದ್ಯುತ್ ನೀಡಲಾಗಿದೆ. ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರ ಚೀಟಿ ನೀಡಿದ್ದು, ಇಲ್ಲಿ ಸರ್ಕಾರದ ಅಂಗನವಾಡಿ ಕೂಡ ಇದೆ ಎಂದು ಸ್ಥಳೀಯರು ಹೇಳಿದರು. ಆದರೂ, ನಿರಾವರಿ ಇಲಾಖೆ ಸುಮಾರು ಪೊಲೀಸರ ನೆರವಿನೊಂದಿಗೆ ತೆರವಿಗೆ ಮುಂದಾದಾಗ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನಾನಿರತರ ಜೊತೆ ಮಾತನಾಡಿದ ಎಕ್ಸಿಕ್ಯೂಟಿವ್ ಇಂಜಿನಿಯರ್ ಸುರೇಶ್, ನೀವು ತಡೆ ನೀಡಲು ಕೋರ್ಟ್‌ನಿಂದ ತಡೆಯಾಜ್ಣೆ ತಂದಿಲ್ಲ. ಹಾಗಾಗಿ ತೆರವುಗೊಳಿಸುತ್ತಿದ್ದೇವೆ. ಕರ್ತವ್ಯಕ್ಕೆ ಅಡ್ಡಿಪಡಿಸಬೇಡಿ ಎಂದು ಮನವಿ ಮಾಡಿದರು.

    20 ನಿಮಿಷ ಕಾಲಾವಕಾಶ ಕೊಟ್ಟ ಅಧಿಕಾರಿಗಳು:

    ಮನೆ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಪ್ರತಿಭಟನಾನಿರತ ಸ್ಥಳೀಯ ನಿವಾಸಿಗಳಿಗೆ 20 ನಿಮಿಷ ಕಾಲಾವಕಾಶ ನೀಡಿದರು. ಆದರೆ ಸ್ಥಳೀಯ ಜೆಸಿಬಿ ಯಂತ್ರಗಳ ಮುಂದೆ ಮಲಗಿ ಕಾರ್ಯಾಚರಣೆಗೆ ಅಡ್ಡಿಪಡಿಸಿದರು. ಅಧಿಕಾರಿಗಳು ಯಾವುದಕ್ಕೂ ಬಗ್ಗದೆ ಮನೆ ತೆರವು ಕಾರ್ಯಾಚರಣೆ ನಡೆಸಿದರು. ಖಾಲಿ ಇರುವ 4 ಮನೆಗಳನ್ನು ನೆಲಸಮಗೊಳಿಸಿದ್ದು, ವಾಸವಿರುವವರಿಗೆ 15 ದಿನದ ಗಡುವು ನೀಡಿ ಕಾರ್ಯಾಚರಣೆ ಮುಂದೂಡಲಾಗಿದೆ. ಪ್ರತಿಭಟನೆ ಕೈಗೊಂಡು ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದವರನ್ನು ಪೊಲೀಸರು ವಾಹನದಲ್ಲಿ ಕರೆದೊಯ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ತುಮಕೂರು: ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜನವರಿ 9ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌…

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026

    ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.