ಗುಬ್ಬಿ: ಅರ್ಚಕನೋರ್ವ ತನ್ನ ಪತ್ನಿ ಹಾಗೂ ತನ್ನ 6 ವರ್ಷ ವಯಸ್ಸಿನ ಮಗನನ್ನು ಹಾರೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅರ್ಚಕ ಮೋಹನ್(ಸ್ವಾಮಿ) ಎಂಬಾತ ಈ ದುಷ್ಕೃತ್ಯ ನಡೆಸಿದ ವ್ಯಕ್ತಿಯಾಗಿದ್ದು, ಈತನ ಪತ್ನಿ ಕಾವ್ಯಾ(25) ಹಾಗೂ ಮಗ ಜೀವನ್(6) ಬರ್ಬರವಾಗಿ ಹತ್ಯೆಗೀಡಾದವರಾಗಿದ್ದಾರೆ.
ಹಲವು ವರ್ಷಗಳಿಂದ ಬೇರೆಯಾಗಿದ್ದ ಇವರು ಒಂದೂವರೆ ತಿಂಗಳಿನಿಂದ ಜೊತೆಯಾಗಿ ವಾಸಿಸಲು ಆರಂಭಿಸಿದ್ದರು ಎನ್ನಲಾಗಿದೆ. ಆದರೆ, ಇದೀಗ ತನ್ನ ಪತ್ನಿ ಹಾಗೂ ಬಾಳಿ ಬದುಕಬೇಕಾದ ಮಗುವನ್ನು ಮೋಹನ್ ಬಲಿ ಪಡೆದಿದ್ದಾನೆ.
ಘಟನೆಯ ಬಳಿಕ ಆರೋಪಿ ಮೋಹನ್ ನನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಬೆಳಗ್ಗೆ 6:30ರ ಸುಮಾರಿಗೆ ಆರೋಪಿಯು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಘಟನೆಗೆ ಕಾರಣಗಳೇನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಹೈವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ಬಳಿಕ ಕೃತ್ಯಕ್ಕೆ ಕಾರಣಗಳೇನು ಅನ್ನೋದು ತಿಳಿದು ಬರಬೇಕಿದೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz