nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025
    Facebook Twitter Instagram
    ಟ್ರೆಂಡಿಂಗ್
    • ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
    • ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
    • ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
    • ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
    • ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
    • ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
    • ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
    • ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ಪಟ್ಟಣ ಪಂಚಾಯಿತಿಯ ಪಿಠೋಪಕರಣ ಜಪ್ತಿಗೆ ಮಧುಗಿರಿ ನ್ಯಾಯಾಲಯ ಆದೇಶ
    ಕೊರಟಗೆರೆ October 21, 2022

    ಕೊರಟಗೆರೆ ಪಟ್ಟಣ ಪಂಚಾಯಿತಿಯ ಪಿಠೋಪಕರಣ ಜಪ್ತಿಗೆ ಮಧುಗಿರಿ ನ್ಯಾಯಾಲಯ ಆದೇಶ

    By adminOctober 21, 2022No Comments2 Mins Read
    koratagere

    ಕೊರಟಗೆರೆ : ಹೇಮಾವತಿ ಕುಡಿಯುವ ನೀರಿನ ಶುದ್ದಿಕರಣ ಘಟಕ ನಿರ್ಮಾಣಕ್ಕಾಗಿ 2009-10 ರಲ್ಲಿ ಜೆಟ್ಟಿಅಗ್ರಹಾರ ರೈತರಿಂದ ಭೂಸ್ವಾಧೀನ ಪಡಿಸಿಕೊಂಡ ಜಮೀನಿನ ಭೂಪರಿಹಾರವನ್ನು 2018 ರಲ್ಲಿ ನ್ಯಾಯಾಲಯದ ಆದೇಶದ ನಂತರವು ನೀಡದಿರುವ ಪರಿಣಾಮ ಪಟ್ಟಣ ಪಂಚಾಯತ್ ನ ಪಿಠೋಪಕರಣ ವಶ ಪಡಿಸಿಕೊಳ್ಳುವಂತೆ ಮಧುಗಿರಿ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಮಾಡಿರುವ ಘಟನೆ ಗುರುವಾರ ನಡೆದಿದೆ.

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಮದ ರೈತರಾದ ಬಸವರಾಜು ಮತ್ತು ನಂದೀಶ್ ಎಂಬ ರೈತರ ಜಮೀನನ್ನು 2009 ರಲ್ಲೇ ಹೇಮಾವತಿ ಕುಡಿಯುವ ನೀರಿನ ಶುದ್ದಿಕರಣ ಘಟಕ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. 2018ರಲ್ಲೇ ಅಗ್ರಹಾರ ರೈತರಿಗೆ ತಕ್ಷಣ ಭೂಪರಿಹಾರ ನೀಡುವಂತೆ ಕೊರಟಗೆರೆ ಪ.ಪಂ.ಗೆ ಮಧುಗಿರಿ ಸಿವಿಲ್ ನ್ಯಾಯಾಲಯವು ಆದೇಶ ಮಾಡಿದೆ.


    Provided by
    Provided by

    ಈ ಸಂಬಂಧ ಜೆಟ್ಟಿಅಗ್ರಹಾರ ಗ್ರಾಮದ ರೈತ ಬಸವರಾಜು ಮಾತನಾಡಿ, ಹೇಮಾವತಿ ನೀರಿನ ಘಟಕ ನಿರ್ಮಾಣಕ್ಕಾಗಿ 2009ರಲ್ಲಿ ನಮ್ಮ ಜಮೀನು ಸ್ವಾಧೀನ ಮಾಡಿದ್ದಾರೆ. 2018ರಲ್ಲಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ಮಾಡಿದೆ. ನಮಗೇ ಇನ್ನೂ 48 ಲಕ್ಷಕ್ಕೂ ಅಧಿಕ ಭೂಪರಿಹಾರ ಬರಬೇಕಿದೆ. ನ್ಯಾಯಾಲಯದ ಆದೇಶವನ್ನು ಪ.ಪಂ.ಯು ಪಾಲನೆ ಮಾಡದಿರುವ ಹಿನ್ನಲೆ ಇಂದು ಪಿಠೋಪಕರಣ ಜಪ್ತಿಗೆ ಆದೇಶ ಮಾಡಲಾಗಿದೆ ಎಂದು ಜೆಟ್ಟಿಅಗ್ರಹಾರ ಗ್ರಾಮದ ರೈತ ಬಸವರಾಜು ತಿಳಿಸಿದ್ದಾರೆ.

    ಕೊರಟಗೆರೆ ಸಿವಿಲ್ ನ್ಯಾಯಾಲಯದ ಅಮೀನ್‌ರಾದ ಮಂಜುನಾಥ ಮಾತನಾಡಿ, ಜೆಟ್ಟಿಅಗ್ರಹಾರದ ಇಬ್ಬರು ರೈತರಿಗೆ 48 ಲಕ್ಷಕ್ಕೂ ಅಧಿಕ ಭೂಪರಿಹಾರ ನೀಡಲು ನ್ಯಾಯಾಲಯ 2018ರಲ್ಲೇ ಆದೇಶ ಮಾಡಿದೆ. ರೈತರಿಗೆ ಜಮೀನು ಸ್ವಾಧೀನದ ಪರಿಹಾರ ನೀಡುವಲ್ಲಿ ಕೊರಟಗೆರೆ ಪಟ್ಟಣ ಪಂಚಾಯಿತಿ ವಿಳಂಭ ಮಾಡಿದೆ. ಇಂದು ಮಧುಗಿರಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಕೊರಟಗೆರೆ ಪ.ಪಂ.ಯ ಪಿಠೋಪಕರಣವನ್ನು ಜಪ್ತಿ ಮಾಡಿದ್ದೇವೆ ಎಂದು ಕೊರಟಗೆರೆ ಸಿವಿಲ್ ಕೋರ್ಟ್ ಅಮೀನ್ ರಾದ ಮಂಜುನಾಥ ತಿಳಿಸಿದ್ದಾರೆ.

    ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಮಾತನಾಡಿ ನ್ಯಾಯಾಲಯದ ಆದೇಶವನ್ನು ಕಾರ್ಯಗತ ಮಾಡುವುದು ಪ.ಪಂ. ಅಧಿಕಾರಿಗಳ ಪ್ರಮುಖ ಜವಾಬ್ದಾರಿ. ಪಟ್ಟಣ ಪಂಚಾಯಿತಿಯು ಕೋರ್ಟ್ ಆದೇಶ ನಿರ್ಲಕ್ಷ ಮಾಡಿರುವ ಪರಿಣಾಮ ಈಗ ಸಮಸ್ಯೆ ಆಗಿದೆ. ನ್ಯಾಯಾಲಯ ಪಿಠೋಪಕರಣ ವಶಕ್ಕೆ ಪಡೆದಿರುವ ಬಗ್ಗೆ ನನಗೇ ಮಾಹಿತಿ ಇಲ್ಲ. ಸರಕಾರದ ಅನುಧಾನ ಮತ್ತು ಪಟ್ಟಣ ಪಂಚಾಯ್ತಿ ಯಿಂದ ತಕ್ಷಣ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸುತ್ತೇನೆ ಎಂದು ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    ಮಧುಗಿರಿಯ ಘನ ಸಿವಿಲ್ ನ್ಯಾಯಾಲಯವು 2018ರಲ್ಲೇ ಆದೇಶ ಮಾಡಿದೆ. ಕೊರಟಗೆರೆ ಪಪಂ ಮುಖ್ಯಾಧಿಕಾರಿಗೆ ಈ ಹಿಂದೆಯೇ ವಾರೆಂಟ್ ಜಾರಿಯಾಗಿದೆ. ನ್ಯಾಯಾಲಯದ ಆದೇಶವನ್ನು ನಿರ್ಲಕ್ಷ ಮಾಡಿರುವ ಪರಿಣಾಮ ಕೊರಟಗೆರೆ ಪ.ಪಂ.ಯ ಮುಖ್ಯಾಧಿಕಾರಿ, ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಕಚೇರಿಯ ಪಿಠೋಪಕರಣ ಜಪ್ತಿ ಮಾಡಿ ಮಧುಗಿರಿ ಸಿವಿಲ್ ನ್ಯಾಯಾಲಯವು ಆದೇಶ ಮಾಡಿದೆ.

    ಕೊರಟಗೆರೆ ಸಿವಿಲ್ ನ್ಯಾಯಾಲಯದ ಅಮೀನರಾದ ಮಂಜುನಾಥ ಮತ್ತು ಪರಮೇಶ್ವರಯ್ಯ ನೇತೃತ್ವದಲ್ಲಿ ಪಪಂ ಕಚೇರಿಯ ಪಿಠೋಪಕರಣವನ್ನು ವಶಕ್ಕೆ ಪಡೆಯಲಾಗಿದೆ. ಇದೇ ಸಂದರ್ಭದಲ್ಲಿ ಪಪಂಯ ಮುಖ್ಯಾಧಿಕಾರಿ ಭಾಗ್ಯ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂಧಿವರ್ಗ ಉಪಸ್ಥಿತರಿದ್ದರು.

    ವರದಿ:  ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ಪಾವಗಡ: ಪಟ್ಟಣದ ಕಾಳಿದಾಸ ನಗರದಲ್ಲಿ ಸೋಮವಾರ ರಾತ್ರಿ ಮನೆಯ ಬೀಗ ಒಡೆದು, ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಓಬಳಮ್ಮ…

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025

    ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ

    November 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.