ತಮ್ಮದಲ್ಲದ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಹಣ ಪಡೆದು ವಂಚಿಸಿದ್ಧ ಆರು ಮಂದಿ ವಿರುದ್ಧ ನಗರದ ಅಶೋಕ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಎ.1 ಪುಟ್ಟಬುದ್ಧಿ, ಎ.2 ಪುಷ್ಪ, ಎ. 3 ಲಿಂಗಣ್ಣ, ಎ.4 ಮಹದೇವ ಮತ್ತು ಇವರಿಗೆ ಸಹಕರಿಸಿದ ಮುಡಾ ಅಧಿಕಾರಿ ಹರ್ಷವರ್ಧನ್ ಹಾಗೂ ವಕೀಲ ರಾಜೇಶ್ .ಎಂ ವಿರುದ್ಧ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/20,22ರ ಪ್ರಕಾರ ಭಾರತೀಯ ದಂಡಸಂಹಿತೆ 416, 419,420, ಹಾಗೂ 406ರಡಿ ಪ್ರಕರಣ ದಾಖಲಾಗಿದೆ.
ಕೆಂಪಮ್ಮ ಎಂಬುವವರ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಆರೋಪಿಗಳು ಮುಡಾದಿಂದ 98,33,862 ರೂ. ಹಣವನ್ನ ಪಡೆದು ವಂಚಿಸಿದ್ದರು. ಈ ಸಂಬಂಧ ಕೆಂಪಮ್ಮ ದೂರು ನೀಡಿದ್ದರು. ಈ ನಡುವೆ 1ನೇ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಅಶೋಕಪುರಂ ಪೊಲೀಸ್ ಠಾಣೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


