nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ವಿರೋಧಿಗಳ ಬಗ್ಗೆ ಪ್ರಜ್ಞಾವಂತ ನಾಗರಿಕರು ಜಾಗೃತರಾಗಿರಬೇಕು:  ಜೆಟ್ಟಿ ಅಗ್ರಹಾರ ನಾಗರಾಜು
    ಕೊರಟಗೆರೆ October 22, 2022

    ಸಂವಿಧಾನ ವಿರೋಧಿಗಳ ಬಗ್ಗೆ ಪ್ರಜ್ಞಾವಂತ ನಾಗರಿಕರು ಜಾಗೃತರಾಗಿರಬೇಕು:  ಜೆಟ್ಟಿ ಅಗ್ರಹಾರ ನಾಗರಾಜು

    By adminOctober 22, 2022No Comments3 Mins Read
    bsp

    ಕೊರಟಗೆರೆ: ಪಟ್ಟಣದ ಕಾಮಧೇನು ಮೀಟಿಂಗ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಮಾನ್ಯವರ್ ಕಾನ್ಷೀರಾಂ ಜೀ ಅವರ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಮಾನ್ಯವಾರ್ ಕಾನ್ಷೀರಾಮ್ ಅವರಿಗೆ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

    ಕೊರಗೆರೆ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸಂವಿಧಾನದ ಬಗ್ಗೆ ಮತ್ತು ದೇಶದ ಕಾನೂನು ಸುವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಿ ಒಂದು ಗಂಟೆಗಳ ಕಾಲ ಅಧ್ಯಯನ ಶಿಬಿರವನ್ನು ಆಯೋಜಿಸುವ ಮೂಲಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನ್ ದಾಸ್ ರಚನೆಯ ಸಂವಿಧಾನ ಪುಸ್ತಕವನ್ನು ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಣೆ ಮಾಡಲಾಯಿತು.


    Provided by
    Provided by

    ನಂತರ ರಾಜ್ಯ ಕಮಿಟಿಯ ಮತ್ತು ಜಿಲ್ಲಾ ಕಮಿಟಿಯ ಮುಖಂಡರುಗಳ ನೇತೃತ್ವದಲ್ಲಿ ತುಮಕೂರು ಗ್ರಾಮಾಂತರ ಬಹುಜನ ಸಮಾಜ ಪಾರ್ಟಿಯ ಘಟಕ ಸ್ಥಾಪನೆ ಮಾಡಲಾಯಿತು..

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ಸಂವಿಧಾನದ ಮಹತ್ವ ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ನಾಗರಿಕರು ತಿಳಿಯಲೇ ಬೇಕಾಗಿದೆ ಇತ್ತೀಚಿನ ದಿನಗಳಲ್ಲಿ ಸಂವಿಧಾನ ವಿರೋಧಿಗಳು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಸಂವಿಧಾನ ವಿರೋಧಿಗಳಿಂದ ದೇಶದ ಪ್ರಜ್ಞಾವಂತ ನಾಗರಿಕರು ಜಾಗೃತರಾಗಿರಬೇಕು. ಅಲ್ಲದೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ತುಂಬಾ ಎಚ್ಚರಿಕೆ ವಹಿಸಿ ಮತ ನೀಡಬೇಕು ಚುನಾವಣೆ ಹತ್ತಿರ ಬರುತ್ತಿದ್ದಂತೆ ಮೀಸಲಾತಿ ಕ್ಷೇತ್ರದಲ್ಲಿ ವಲಸಿಗರ ಸಂಖ್ಯೆ ಹೆಚ್ಚುತ್ತಿದೆ ಎಂದು ದಲಿತಪರ ಹೋರಾಟವನ್ನ ಮಾಡದೇ ದಲಿತರ ಕಷ್ಟ ಸುಖಗಳಿಗೆ ಭಾಗಿಯಾಗದೆ ಚುನಾವಣೆ ಬರುತ್ತಿದ್ದಂತೆ ಹೊರಗಿನಿಂದ ದಂಡುದಂಡೆ ಬಂದು ನಾನೇ ಅಭ್ಯರ್ಥಿ ಎಂದು ಇತ್ತೀಚಿನ ದಿನಗಳಲ್ಲಿ ನವರಂಗಿ ಆಟ ಶುರು ಮಾಡಿದ್ದಾರೆ ಎಂದರು.

    ಸರ್ಕಾರದ ಎಲ್ಲಾ ಮೀಸಲಾತಿ ಇವರ ಕುಟುಂಬಕ್ಕೆ ಬೇಕಾ IAS ಇವರಿಗೆ ಬೇಕು, ಮೆಡಿಕಲ್ ಕಾಲೇಜು ಇವರಿಗೆ ಬೇಕು,ಕೊನೆಗೆ ಶಾಸಕರು ಕೂಡ ಇವರೇ ಆಗಬೇಕಾ ಎಂದು ಪ್ರಶ್ನಿಸಿದರು.

    ನಿವೃತ್ತ ಐಎಎಸ್ ಅಧಿಕಾರಿ ಅಂತ ಹೇಳಿಕೊಂಡು ಬಂದಿರುವ ವ್ಯಕ್ತಿ ಅಧಿಕಾರದಲ್ಲಿ ಇದ್ದಾಗ ಕೊರಟಗೆರೆ ಮೀಸಲು ಕ್ಷೇತ್ರದ ಜನರಿಗೆ, ದಲಿತ ಸಮುದಾಯಕ್ಕೆ ಏನು ಮಾಡಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೈಡ್ರಾಮಾ ಶುರು ಮಾಡಿರೋದೆ ಇವರ ಸಾಧನೆನಾ. ಐದಿನೈದು ವರ್ಷ ಕಳೆದರು ಮೀಸಲು ಕ್ಷೇತ್ರದಲ್ಲಿ ಯಾವುದೇ ದಲಿತರಿಗೆ ವಿಶೇಷ ಅನುದಾನ ತಂದಿಲ್ಲ, ನಿರುದ್ಯೋಗ ನಿವಾರಣೆಗೆ ಒತ್ತು ನೀಡಲಿಲ್ಲ, ಸರಿಯಾದ ಒಂದು ಅಂಬೇಡ್ಕರ್ ಭವನ ನಿರ್ಮಾಣ ಮಾಡಿಲ್ಲ. ದಲಿತರೇ ಹೆಚ್ಚು ಇರುವ ಕ್ಷೇತ್ರದಲ್ಲಿ ಕನಿಷ್ಟ ಒಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕೂಡ ಯಾರಿಂದಲೂ ಮಾಡಿಸಲಾಗಿಲ್ಲ. ಪಕ್ಕದ ತಾಲ್ಲೂಕು ನೋಡಿದರೆ ನಾಚಿಕೆ ಆಗುತ್ತೆ. ಇದು ನಮ್ಮ ದುರಂತ. ಮತದಾರರೇ ಜಾಗೃತವಾಗಬೇಕು ಮುಂದಿನ ದಿನಗಳಲ್ಲಿ ಸಂವಿಧಾನ ಉಳಿವಿಗೆ ಬಹುಜನರ ಉಳಿವಿಗಾಗಿ ಬಹುಜನರ ಪಕ್ಷಕ್ಕೆ ಬೆಂಬಲ ನೀಡಿ. ಇತ್ತೀಚೆಗೆ ಅಭ್ಯರ್ಥಿ ಎಂದು ಬರುತ್ತಿರುವವರಿಗೆ ಪ್ರಮೋಷನ್ ಕೊಡಿಸುವುದಾಗಿ ಹಾಗೂ ಗುತ್ತಿಗೆದಾರರಿಗೆ ಕೆಲಸ ಕೊಡುವುದಾಗಿ ಮುಂಗಡವಾಗಿ ಹಣ ಪಡೆದು ಸಾಲು ಸಾಲು ಹಗರಣ ವೆಸಗಿರವವರ ಬಂಡವಾಳ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲಾ ದಾಖಲೆಗಳೊಂದಿಗೆ ಸಾಕ್ಷಿ ಸಮೇತ ಬಿಡುಗಡೆ ಮಾಡುವೆ ಎಂದು ಬಿಎಸ್ಪಿ ಪಕ್ಷದ ತಾಲ್ಲೂಕು ಅಧ್ಯಕ್ಷ ಜಟ್ಟಿ ಅಗ್ರಹಾರ ನಾಗರಾಜು    ಹೇಳಿದರು.

    ಇದೇ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಗುರುಮೂರ್ತಿ ಮಾತನಾಡಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಟ್ಟಿ ಅಗ್ರಹಾರ ನಾಗರಾಜು ಅವರ ಸಾರಥ್ಯದಲ್ಲಿ ಉತ್ತಮ ಪಕ್ಷ ಸಂಘಟನೆಯಾಗುತ್ತಿದ್ದು, ದಿನೇ ದಿನೇ ಯುವಕರ ದಂಡೇ ಹರಿದುಬರುತ್ತಿದೆ. ಇಂದು ಹಲವು ಯುವಕರು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷ ತೊರೆದು ಬಹುಜನರ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಜೆಟ್ಟಿ ಅಗ್ರಹಾರ ನಾಗರಾಜುಗೆ ಇನ್ನೂ ಹೆಚ್ಚಿನ ಶಕ್ತಿ ಬಂದಂತೆ ಕಾಣುತ್ತಿದೆ. ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ದಲಿತ, ಅಲ್ಪಸಂಖ್ಯಾತ, ಮುಸ್ಲಿಂ, ಕ್ರೈಸ್ತರ ಮೇಲೆ ಉದ್ದೇಶ ಪೂರ್ವಕವಾಗಿ ದೌರ್ಜನ್ಯ ನಡೆಯುತ್ತಲೆ ಇದೆ. ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಅವರು ಇಪ್ಪತ್ತು ಪರ್ಸೆಂಟ್ ಕಮಿಷನ್ ಪಡೆದರೆ, ಇವರು ನಲವತ್ತು ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದಾರೆ ಅಷ್ಟೇ. ಕೊರಟಗೆರೆ ಮೀಸಲು ಕ್ಷೇತ್ರದಲ್ಲಿ ಈ ಬಾರಿ ಬಹುಜನ ಸಮಾಜ ಪಾರ್ಟಿ ಉತ್ತಮವಾದ ಖಾತೆ ತೆರೆದಿದೆ ಎಂದು ತಿಳಿಸಿದ್ದಾರೆ.

    ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಗುರುಮೂರ್ತಿ, ಶೂಲಯ್ಯ,ಕೊರಟಗೆರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜೆಟ್ಟಿ ಅಗ್ರಹಾರ ನಾಗರಾಜು,ಜಿಲ್ಲಾ ಅಧ್ಯಕ್ಷ ರಾಜಸಿಂಹ, ಪ್ರದಾನ ಕಾರ್ಯದರ್ಶಿ ರಂಗಧಾಮಯ್ಯ,ತುಮಕೂರು ಗ್ರಾಮಾಂತರ ಅಧ್ಯಕ್ಷ ಅಯ್ಯನಪಾಳ್ಯ ಶ್ರೀನಿವಾಸ್,ಜಿಲ್ಲಾ ಉಪಾಧ್ಯಕ್ಷ ಮಂಜುನಾಥ,ಸಣ್ಣಭೂತಣ್ಣ, ಪಾವಗಡ ಹನುಮಂತರಾಯಪ್ಪ, ಅರುಣ್,ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ,ಶಿಲ್ಪಾ ನಾಗರಾಜು ಇನ್ನಿತರೆ ನೂರಾರು ಯುವಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು..

    ವರದಿ: ಮಂಜುಸ್ವಾಮಿ, ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.