nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾನುವಾರುಗಳಿಗೆ ಚರ್ಮ ಗಂಟು ರೋಗ |  ಅತಿಯಾದ ಮಳೆಯಿಂದ ರೈತ ಸಂತ್ರಸ್ತರ ಬದುಕು ಬರಡು..
    ಕೊರಟಗೆರೆ October 24, 2022

    ಜಾನುವಾರುಗಳಿಗೆ ಚರ್ಮ ಗಂಟು ರೋಗ |  ಅತಿಯಾದ ಮಳೆಯಿಂದ ರೈತ ಸಂತ್ರಸ್ತರ ಬದುಕು ಬರಡು..

    By adminOctober 24, 2022No Comments2 Mins Read
    ganturoga

    ಕೊರಟಗೆರೆ: ಒಂದೆಡೆ ಮಳೆ ಆರ್ಭಟದಿಂದ ಬೆಳೆ ನಷ್ಟ ಮತ್ತು ಮೇವಿನ ತೊಂದರೆ ಅನುಭವಿಸುತ್ತಿರುವ ತಾಲ್ಲೂಕಿನ ರೈತರಿಗೆ ಗಾಯದ ಮೇಲೆ ಬರೆ ಎಂಬಂತೆ ಜೀವನಾಡಿ ರಾಸುಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ರಾಸುಗಳಿಗೆ ಚರ್ಮಗಂಟು ರೋಗ  ಕಾಣಿಸಿಕೊಂಡಿರುವುದು ತಾಲ್ಲೂಕಿನ ರೈತಾಪಿ ವರ್ಗಕ್ಕೆ ಮತ್ತೊಂದು ಆಘಾತವಾಗಿದೆ.

    ಕೊರಟಗೆರೆ ಪಶುಪಾಲನಾ ಇಲಾಖೆಯ ಮಾಹಿತಿಯಂತೆ ಅ-22 ರ ದೈನಂದಿನ ಮಾಹಿತಿ ಪ್ರಕಾರ ರೋಗ ಕಂಡುಬಂದ ಗ್ರಾಮಗಳ ಒಟ್ಟು ಸಂಖ್ಯೆ 51, ರೋಗಕ್ಕೆ ತುತ್ತಾದ ಜಾನುವಾರುಗಳ ಸಂಖ್ಯೆ 100, ಚಿಕಿತ್ಸೆಯಿಂದ ಗುಣಮುಖ ಹೊಂದಿದ ಜಾನುವಾರುಗಳ ಸಂಖ್ಯೆ 26, ರೋಗದಿಂದ ಮರಣ ಹೊಂದಿದ ಜಾನುವಾರುಗಳ ಸಂಖ್ಯೆ 4 , ಇದುವರೆಗೆ IAH  ಹಾಗೂ VB ಯಿಂದ ಸರಬರಾಜಾದ ಲಸಿಕೆ ಪ್ರಮಾಣ ಸಂಖ್ಯೆ  ( ಡೋಸ್ ) 7.000 , ಲಸಿಕೆ ಹಾಕಿದ ಜಾನುವಾರುಗಳ ಸಂಖ್ಯೆ 5899  ಆಗಿದೆ .ಎಂದು ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರಾದ ಡಾ.ಸಿದ್ದನಗೌಡ ಮಾಹಿತಿ ನೀಡಿದ್ದಾರೆ.


    Provided by
    Provided by

     ರೋಗದ ಲಕ್ಷಣಗಳು ಕಂಡುಬರುವುದು ಹೇಗೆ?

    ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು , ನಿಶಕ್ತಿ , ಕಾಲುಗಳಲ್ಲಿ ಬಾವು ಮತ್ತು ಕುಂಟುವುದು, ಜಾನುವಾರುಗಳ ಚರ್ಮದ ಮೇಲೆ 2-5 ಸೆ.ಮಿ ನಷ್ಟು ಅಗಲವಿರುವ ಗಂಟು ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು ಕೆಲಸದ ಸಾಮರ್ಥ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ, ಜರ್ಸಿ , ಹೆಚ್ ಎಫ್ ,ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ.

    ರೋಗ ಹರಡುವುದು ಹೇಗೆ?

    ಸೊಳ್ಳೆ, ಉಣ್ಣೆ, ನೊಣ ಹಾಗೂ ವಿವಿಧ ಕಚ್ಚುವ ಕೀಟಗಳಿಂದ ,ಕಲುಷಿತಗೊಂಡ ನೀರು ಹಾಗೂ ಆಹಾರದಿಂದ ,ಜಾನುವಾರುಗಳ ನೇರ ಸಂಪರ್ಕದಿಂದ ,ರೋಗ ಹರಡುವಿಕೆ ಪ್ರಮಾಣ ಶೇ.10- 20 ರಷ್ಟು ಹಾಗೂ ರೋಗದ ಸಾವಿನ ಪ್ರಮಾಣ 1-5 ರಷ್ಟು ಇರುತ್ತದೆ.

    ಈ ರೋಗಕ್ಕೆ ಚಿಕಿತ್ಸೆ ಹಾಗೂ ತಡೆಗಟ್ಟುವುದು ಹೇಗೆ?

    ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ , ಜಾನುವಾರುಗಳಿಗೆ ರೋಗದ ಲಕ್ಷಣಗಳಿಗೆ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ. ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು, ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಸಿಯಂ ಪರಮ್ಯಾಂಗನೇಟ್ ದ್ರಾವಣದಿಂದ ತೊಳೆದು ಐಯೋಡಿನ್ ದ್ರಾವಣ . ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸಬೇಕು , ರೋಗ ಹರಡುವುದನ್ನು ತಡೆಯಲು ರೋಗಗ್ರಸ್ತ ಜಾನುವಾರುಗಳನ್ನು ಬೇರ್ಪಡಿಸಬೇಕು. ರೋಗಗ್ರಸ್ತ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲಾ ಸಾಮಗ್ರಿಗಳನ್ನು ಸ್ವಚ್ಚಗೊಳಿಸಬೇಕು, ಹಸಿರು ಮೇವು, ಪೌಷ್ಟಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು. ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ 6 ಬಾರಿ ಕುಡಿಸಬೇಕು, ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಈ ರೋಗವು ಸೊಳ್ಳೆ, ಉಣ್ಣೆ, ನೊಣ ಹಾಗೂ ಇತರೆ ಕೀಟಗಳಿಂದ ಮುಖ್ಯವಾಗಿ ಹರಡುವುದರಿಂದ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಚತೆ ಕಾಪಾಡಬೇಕು, ರೋಗಗ್ರಸ್ತ ಜಾನುವಾರು ಮರಣ ಹೊಂದಿದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು.

    ಚರ್ಮಗಂಟು ರೋಗ ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಕ್ಯಾಪ್ರಿಫಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.ದನ ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ , ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ (ಸೊಳ್ಳೆ ,ನೊಣ , ಉಣ್ಣೆ ) ಬಹುಬೇಗ ಹರಡುತ್ತದೆ , ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ..

    ಡಾ.ಸಿದ್ದನಗೌಡ , ಪಶು ಇಲಾಖೆಯ ಸಹಾಯಕ ನಿರ್ದೇಶಕರು, ಕೊರಟಗೆರೆ.

     

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.