nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ಹೊಟ್ಟೆಗೆ ಅನ್ನ ನೀಡದ ಬಿಜೆಪಿ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ..? ಸಿದ್ಧರಾಮಯ್ಯ ಟೀಕೆ
    ರಾಜ್ಯ ಸುದ್ದಿ October 27, 2022

    ಜನರ ಹೊಟ್ಟೆಗೆ ಅನ್ನ ನೀಡದ ಬಿಜೆಪಿ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ..? ಸಿದ್ಧರಾಮಯ್ಯ ಟೀಕೆ

    By adminOctober 27, 2022No Comments3 Mins Read

    Provided by
    Provided by

    ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

    ಜಗತ್ತಿನ ಜನರ ಮುಂದೆ ಹಸಿವು, ಸ್ವಾತಂತ್ರ್ಯ, ಮಹಿಳೆಯರ ದುಡಿಮೆ ಮುಂತಾದ ವಿಷಯಗಳಲ್ಲಿ ಭಾರತದ ಮರ್ಯಾದೆ ಹರಾಜಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಟೀಕಿಸಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆ ಮೂಲಕ ಈ ಕೆಳಕಂಡಂತೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮೋದಿಯವರನ್ನು ಟೀಕಿಸಿದವರ ವಿರುದ್ಧ ಪ್ರತಿಭಟಿಸಿ ಎಂದು ಹೇಳಿಕೆ ನೀಡಿದ್ದ ಯಡಿಯೂರಪ್ಪನವರಿಗೆ ಮತ್ತು ಬಿಜೆಪಿಯವರಿಗೆ ನಾನು 32 ಪ್ರಶ್ನೆಗಳನ್ನು ಕೇಳಿದ್ದೆ. ಇದುವರೆಗೆ ಬಿಜೆಪಿಯವರಿಗೆ ಮತ್ತು ಯಡಿಯೂರಪ್ಪನವರಿಗೆ ಒಂದೇ ಒಂದು ಪ್ರಶ್ನೆಗೂ ಉತ್ತರಿಸಲು ಸಾಧ್ಯವಾಗಲಿಲ್ಲ. ಇದರ ಮಧ್ಯೆ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ 121 ದೇಶಗಳ ಪೈಕಿ 107 ನೇ ಸ್ಥಾನಕ್ಕೆ ಕುಸಿದಿದೆಯೆಂಬ ವರದಿ ಬಿಡುಗಡೆಯಾಯಿತು. ಬಿಜೆಪಿಯವರು ಯಥಾಪ್ರಕಾರ ಈ ವರದಿಯೆ ಸರಿ ಇಲ್ಲ ಎಂದು ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ದಾಖಲೆಗಳನ್ನು ಆಧರಿಸಿಯೆ ವರದಿ ಸಿದ್ಧಪಡಿಸಲಾಗಿದೆ ಎಂಬ ಸಾಕ್ಷ್ಯಗಳನ್ನು ಸಮೀಕ್ಷೆ ಮಾಡಿದವರು ತೋರಿಸಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ-5 ರಲ್ಲಿನ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹಸಿವಿನ ಸೂಚ್ಯಂಕವನ್ನು ಸಿದ್ಧಪಡಿಸಲಾಗಿದೆಯೆಂದು ತಿಳಿಸಿದ ಮೇಲೆ ಬಿಜೆಪಿಯವರು ಆಕ್ಷೇಪಗಳನ್ನು ನಿಲ್ಲಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

    2017 ರಲ್ಲಿ 100 ನೇ ಸ್ಥಾನದಲ್ಲಿದ್ದ ಭಾರತ 2018 ರಲ್ಲಿ 103 ನೇ ಸ್ಥಾನಕ್ಕೆ ಕುಸಿಯಿತು. ಈಗ 121 ದೇಶಗಳ ಪೈಕಿ 107 ನೇ ಸ್ಥಾನ. ನಮ್ಮ ನಂತರ ಕೇವಲ 15 ದೇಶಗಳಿವೆ. ದುರದೃಷ್ಟವೆಂದರೆ ನಮಗಿಂತ ಮೇಲೆ ಇಥಿಯೋಪಿಯ, ಕೀನ್ಯಾ, ಸುಡಾನ್ ಮುಂತಾದ ದೇಶಗಳಿವೆ.


    Provided by
    Provided by

    ನಮ್ಮ ಅಕ್ಕಪಕ್ಕದ ದೇಶಗಳಾದ ಪಾಕಿಸ್ತಾನ 99 ನೇ ಸ್ಥಾನ, ಬಾಂಗ್ಲಾ ದೇಶ 84 ನೇ ಸ್ಥಾನ, ನೇಪಾಳ 81 ನೇ ಸ್ಥಾನ, ನಮ್ಮದು 107 ನೇ ಸ್ಥಾನ. ಇದು ದೇಶಕ್ಕೆ ಹೆಮ್ಮೆ ತರುವ ಸಂಗತಿಯೆ? ತನ್ನ ಜನರ ಹೊಟ್ಟೆಗೆ ಸಮರ್ಪಕವಾಗಿ ಅನ್ನ ಸಿಗುವಂತೆ ನೋಡಿಕೊಳ್ಳದ ದೇಶ ವಿಶ್ವಗುರುವಾಗಲು ಸಾಧ್ಯವೆ? ಹಸಿವಿನ ಸೂಚ್ಯಂಕವನ್ನು ಜನರ ಅಪೌಷ್ಟಿಕತೆ, ಶಿಶುಮರಣ, ಮಕ್ಕಳ ವಯಸ್ಸಿಗನುಗುಣವಾಗಿ ಎತ್ತರ ಮತ್ತು ತೂಕಗಳನ್ನು ಮಾನದಂಡವನ್ನಾಗಿ ಇಟ್ಟುಕೊಂಡು ವರದಿಯನ್ನು ಸಿದ್ಧಪಡಿಸಲಾಗುತ್ತದೆ. ಪರಿಸ್ಥಿತಿ ಹೀಗಿದ್ದರೂ ಬಿಜೆಪಿಯು ಅತ್ಯಂತ ಕ್ಷುಲ್ಲಕವಾದ ಆಹಾರದ ರಾಜಕಾರಣವನ್ನು ಮಾಡುತ್ತಿದೆ. ಮಾಂಸಾಹಾರದ ಮೇಲೆ ದಾಳಿ ನಡೆಸುತ್ತಿದೆ. ಮನುಷ್ಯರಿಗೆ ಅತ್ಯಂತ ಅಗತ್ಯವಾಗಿ ಬೇಕಾದ ಪ್ರೋಟೀನುಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ಧರಾಮಯ್ಯ ಹರಿಹಾಯ್ದರು.

    ರಾಜ್ಯದಲ್ಲಿ ನಮ್ಮ ಸರ್ಕಾರ ಇದ್ದಾಗ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ ತೊಗರಿಬೇಳೆ ನೀಡುತ್ತಿದ್ದೆವು. ಬೇಳೆ ನೀಡುವ ಯೋಜನೆಯನ್ನು ಬಿಜೆಪಿ ಸರ್ಕಾರ ರದ್ದು ಮಾಡಿ 3 ವರ್ಷಗಳಾದವು. ಮನಮೋಹನಸಿಂಗರ ನೇತೃತ್ವದ ಸರ್ಕಾರ ಆಹಾರ ಖಾತ್ರಿ ಯೋಜನೆಯನ್ನು ಜಾರಿಗೆ ತಂದು ಅದನ್ನು ಕಡ್ಡಾಯವಾದ ಹಕ್ಕನ್ನಾಗಿಸಿತು. ಜನರಿಗೆ ಸಮರ್ಪಕವಾದ ಅನ್ನ ನೀಡಬೇಕಾದುದು ಸರ್ಕಾರದ ಜವಾಬ್ಧಾರಿ. ಆದರೆ ಬಡಜನರನ್ನು ಹಸಿವು ಮುಂತಾದ ಸಂಕಷ್ಟಗಳಿಂದ ಮೇಲೆತ್ತಲು ನೀಡುತ್ತಿರುವ ಸಬ್ಸಿಡಿಗಳನ್ನೆ ರದ್ದು ಮಾಡಬೇಕೆಂದು ಬಿಜೆಪಿ ಪ್ರತಿಪಾದಿಸುತ್ತಿದೆ.

    ಜಾಗತಿಕ ಸಂಸ್ಥೆಗಳು ನಿರಂತರವಾಗಿ ಬಿಡುಗಡೆ ಮಾಡುತ್ತಿರುವ ಅಧ್ಯಯನ ವರದಿಗಳು ಮತ್ತು ಅಂಕಿಅಂಶಗಳನ್ನು ತಳ್ಳಿ ಹಾಕಲೆತ್ನಿಸುವ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿಯು ಯೋಜನಾ ಆಯೋಗವನ್ನೆ ಬರ್ಖಾಸ್ತು ಮಾಡಿದೆ. ಕೇಂದ್ರ ಸರ್ಕಾರವು ನಿಗಧಿತವಾಗಿ ನಡೆಸುವ ಅಧ್ಯಯನಗಳನ್ನೆ ನಿಲ್ಲಿಸಿಬಿಟ್ಟಿದೆ. ಮುಖ್ಯವಾಗಿ ಸಿಎಜಿ ಆಡಿಟ್ಟುಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ರಾಷ್ಟ್ರೀಯ ಅಂಕಿ ಅಂಶಗಳ ಇಲಾಖೆಯು ನಡೆಸುವ ಸರ್ವೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ಆರೋಪಿಸಿದರು.

    ಯುಪಿಎ ಸರ್ಕಾರ ನಡೆಸಿದ ಸರ್ವೆಗಳನ್ನು ಬಿಟ್ಟರೆ ಹೊಸ ಸರ್ವೆಗಳು ನಡೆದಿಲ್ಲ. 2018 ರಲ್ಲಿ ಎನ್‍ಎಸ್‍ಎಸ್‍ಒ ಸರ್ವೆ ನಡೆಸಿತಾದರೂ ಅದರ ಅಂಕಿಅಂಶಗಳು ಕೇಂದ್ರ ಸರ್ಕಾರಕ್ಕೆ ವಿರುದ್ಧವಾಗಿದ್ದ ಕಾರಣ ವರದಿಯನ್ನೆ ಬಿಡುಗಡೆ ಮಾಡಲಿಲ್ಲ. 2021 ರಲ್ಲಿ ದೇಶದ ಜನಗಣತಿ ನಡೆಯಬೇಕಾಗಿತ್ತು. ಕೋವಿಡ್ ಮುಗಿದ ಕೂಡಲೆ ಜಗತ್ತಿನ ಅನೇಕ ದೇಶಗಳು ಜನಗಣತಿ ನಡೆಸಿದವು. ಮೋದಿ ಸರ್ಕಾರ ಇದುವರೆಗೂ ಏನನ್ನೂ ಮಾಡದೆ ಸುಮ್ಮನೆ ಕೂತಿದೆ. ಜನಗಣತಿ ನಡೆದರೆ ಕೋವಿಡ್‍ನಿಂದ ಮರಣ ಹೊಂದಿದ ಜನರ ವಿವರವೂ ಸೇರಿದಂತೆ ಅನೇಕ ಸಂಗತಿಗಳು ಬಹಿರಂಗವಾಗುತ್ತವೆ ಎಂದು ಮೌನ ವಹಿಸಲಾಗಿದೆ.

    ಮೋದಿಯವರು ಭಾರತವನ್ನು ಯಾವ ದುರ್ಗತಿಗೆ ಇಳಿಸಿದ್ದಾರೆಂದರೆ 2014 ರಲ್ಲಿ ಭಾರತದ ತಲಾವಾರು ಜಿಡಿಪಿ 1573 ಡಾಲರುಗಳಷ್ಟಿತ್ತು. 2022 ರಲ್ಲಿ 1850 ಡಾಲರುಗಳಷ್ಟಿರಲಿದೆ ಎಂದು ಅಂದಾಜು ಮಾಡಲಾಗಿದೆ.
    ಬಾಂಗ್ಲಾದೇಶದಲ್ಲಿ 2014 ರಲ್ಲಿ 1118 ಡಾಲರುಗಳಷ್ಟಿದ್ದ ತಲಾವಾರು ಜಿಡಿಪಿಯು 2021 ರಲ್ಲಿ 2503 ಡಾಲರುಗಳಷ್ಟಾಗಿತ್ತೆಂದು ಅಂಕಿ ಅಂಶಗಳು ಹೇಳುತ್ತಿವೆ. ವಿಶ್ವಬ್ಯಾಂಕಿನ ಅಂಕಿ ಅಂಶಗಳು ಭಾರತದಲ್ಲಿ ಇನ್ನೂ ದಯನೀಯವಾದ ಪರಿಸ್ಥಿತಿಯಿದೆಯೆಂದು ಹೇಳುತ್ತಿವೆ. ಮನಮೋಹನಸಿಂಗರು 2004 ರಲ್ಲಿ ಪ್ರಧಾನಿಯಾದಾಗ ಭಾರತದ ತಲಾವಾರು ಜಿಡಿಪಿಯು 546 ಡಾಲರುಗಳಿಷ್ಟಿತ್ತು. ಅವರು ಅಧಿಕಾರದಿಂದ ಇಳಿಯುವ ವೇಳೆಗೆ 1500 ಡಾಲರಿಗೂ ಅಧಿಕ ಪ್ರಮಾಣದಲ್ಲಿತ್ತು.

    ಯುಪಿಎ ಕಾಲದಲ್ಲಿ 3 ಪಟ್ಟು ಆದಾಯವು ಹೆಚ್ಚಾಗಿತ್ತು. ಆದರೆ ಮೋದಿಯಯವರ 8 ವರ್ಷಗಳ ಅವಧಿಯಲ್ಲಿ ಕೇವಲ 350 ಡಾಲರುಗಳು ಮಾತ್ರ ಹೆಚ್ಚಾಗಿದೆ ಎಂಬ ಅಂಶವು ಆಘಾತಕಾರಿಯಾಗಿದೆ. ಹಣದುಬ್ಬರವನ್ನು ಲೆಕ್ಕ ಹಾಕಿದರೆ ಇದು ನೆಗೆಟಿವ್ ಬೆಳವಣಿಗೆಯಾಗುತ್ತದೆ. ಬಹುಪಾಲು ಜನರಿಗೆ ನಿಧಾನಕ್ಕೆ ಅರ್ಥವಾಗುತ್ತಿರುವ ಸಂಗತಿ, ‘ನಮೋ’ ಎಂದರೆ ಜನರನ್ನು “ ನಂಬಿಸಿ ಮೋಸ ಮಾಡುವವರು” ಎಂದು. ನಂಬಿಸಿ ಮೋಸ ಮಾಡಿದ್ದೆ ಮೋದಿಯವರು ಈ ದೇಶದ ಜನರಿಗೆ ಕೊಟ್ಟ ಮಹಾನ್ ಕೊಡುಗೆ.

    ಇಂದು ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವು ಸರ್ವರಂಗಗಳಲ್ಲೂ ವಿಫಲವಾಗಿದೆ. ದೇಶವು ಭಾರಿ ಗಂಡಾಂತರವನ್ನು ಎದುರಿಸುತ್ತಿದೆ. ಸುಳ್ಳು ಭಾಷಣಗಳನ್ನು ಬಿಟ್ಟರೆ ಯಾವ ಸಾಧನೆಯೂ ಇಲ್ಲ. ಭಾರತವನ್ನು ಹಿಂದೆ ತಳ್ಳಿ ನಮ್ಮ ಅಕ್ಕ ಪಕ್ಕದ ದೇಶಗಳು ಮುಂದು ಮುಂದಕ್ಕೆ ಹೋಗುತ್ತಿವೆ. ಈ ವಿಚಾರವನ್ನು ಮರೆಮಾಚುವುದಕ್ಕೋಸ್ಕರವೆ ಧರ್ಮ, ಜಾತಿ, ಕೋಮು ದ್ವೇಷಗಳನ್ನು ಮುಂದೆ ಮಾಡಿಕೊಂಡು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ದೇಶ ಒಂದೇ ಸಮನೆ ಅಧಃಪತನದ ಹಾದಿ ಹಿಡಿದಿದ್ದರೂ ಅದನ್ನು ಉದ್ಧಾರವಾಗುತ್ತಿದೆಯೆಂದು ಬಿಂಬಿಸಲಾಗುತ್ತಿದೆ. ಇದನ್ನು ಅರಿತುಕೊಳ್ಳದಿದ್ದರೆ ಈ ದೇಶದ ಬಡವರು, ಮಧ್ಯಮವರ್ಗದವರು, ದಲಿತರು, ರೈತರು, ಹಿಂದುಳಿದವರು, ಪಶುಪಾಲಕರು, ಆದಿವಾಸಿಗಳು, ಮಹಿಳೆಯರು, ಕಾರ್ಮಿಕರು, ಕುಶಲಕರ್ಮಿಗಳಾದಿಯಾಗಿ ಯಾರಿಗೂ ಉಳಿಗಾಲವಿಲ್ಲ ಎಂದು ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ಸರಗೂರು: ತಾಲೂಕಿನ ಹಳೆಹೇಗ್ಗುಡಿಲು ಗ್ರಾಮದಲ್ಲಿ ಸೋಮವಾರದಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕಾಡುಹಂದಿ ಏಕಾಏಕಿ ದಾಳಿ ನಡೆಸಿ, ತೀವ್ರವಾಗಿ…

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.