nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರು ಮುಕ್ತ ವಿಶ್ವ ವಿದ್ಯಾಲಯ ಪ್ರವೇಶಾತಿ ದಿನಾಂಕ ವಿಸ್ತರಣೆ
    ತುಮಕೂರು October 27, 2022

    ಮೈಸೂರು ಮುಕ್ತ ವಿಶ್ವ ವಿದ್ಯಾಲಯ ಪ್ರವೇಶಾತಿ ದಿನಾಂಕ ವಿಸ್ತರಣೆ

    By adminOctober 27, 2022No Comments2 Mins Read
    open university

    ತುಮಕೂರು: ಯುಜಿಸಿ ‌ಆದೇಶದ ಮೇರೆಗೆ ಮೈಸೂರು ಮುಕ್ತ ವಿವಿಯ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು ಅಕ್ಟೋಬರ್ 31 ಬದಲಾಗಿ ನವೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರಥಮ ವರ್ಷದ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು ಯುಜಿಸಿ ‌ಆದೇಶದ ಮೇರೆಗೆ ಅಕ್ಟೋಬರ್ 31 ಬದಲಾಗಿ ನವೆಂಬರ್ 15ರ ವರೆಗೆ ಪ್ರವೇಶಾತಿ ಮಾಡಿಕೊಳ್ಳಲಾಗುವುದು.


    Provided by
    Provided by

    “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”.

    ಕೆಎಸ್ ‌ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲಾರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು.

    ಯುಜಿಸಿ ನಿಯಮಾವಳಿ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ.

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2022-23ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ B.A.,/B Com/B.B.A/B.C.A/B.Sc (General, IT, Home Science)/BLibISc., M.A/MCJ., MCom (Dual Specialization- 1. Accounting & Finance/HRM

    1. Marketing Management & HRM/Finance) ಎಂ.ಬಿ.ಎ ( AICTE Approved) (Specialization – •Finance • HRM • Marketing Management • Operations • Tourism • Corporate Law • Information Technology), MLibISc., M.Sc., PG Diploma., Diploma., Certificate Programs ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.

    ಯುಜಿಸಿ ನಿಯಮಾವಳಿ ಪ್ರಕಾರ ವಿದ್ಯಾರ್ಥಿಗಳು ಎರಡು ಡಿಗ್ರಿ ಪ್ರೋಗ್ರಾಮ್‌ಗಳನ್ನು ಒಂದೇ ವೇಳೆ (ಒಂದೇ ವರ್ಷ) ಓದಬಹುದು. ಒಂದು ಕೋರ್ಸ್‌ ರೆಗ್ಯುಲರ್‌ ಆಗಿದ್ದು, ಮತ್ತೊಂದು ಮುಕ್ತ ಮತ್ತು ಡಿಸ್‌ ಟ್ಯಾನ್ಸ್‌ ಲರ್ನಿಂಗ್ ಕೋರ್ಸ್‌(ODL) / ಆನ್‌ ಲೈನ್‌ ಮೋಡ್‌ ನಲ್ಲಿ ಇರಬಹುದು. ಅಥವಾ ಎರಡು ಕೋರ್ಸ್‌ಗಳು ಸಹ ODL / ಆನ್‌ಲೈನ್‌ ಪ್ರೋಗ್ರಾಮ್ಸ್‌ಗಳು ಆಗಿರಬಹುದು.

    ಇತರ ಕಾಲೇಜಿನಲ್ಲಿ ಅಥವಾ Regular ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಂಗ ಮಾಡಿ ಕಾರಣಾಂತರಗಳಿಂದ ಓದಲು ಆಗದಿದ್ದರೆ ಅಥವಾ Regular ಆಗಿ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಅರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರಿಸಬಹುದು.

    ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರವೇಶಾತಿ ಸಂದರ್ಭದಲ್ಲಿ ಮಾತ್ರ ಸರ್ಕಾರಿ ರಜಾ ದಿನಗಳಾದ ಭಾನುವಾರ ಮತ್ತು 2ನೇ ಹಾಗೂ 4ನೇ ಶನಿವಾರ ಕಛೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು.

    ಈ ಮೇಲ್ಕಂಡ ಕೋರ್ಸ್ ‍ಗಳ ಪ್ರಥಮ ವರ್ಷದ ಪ್ರವೇಶಾತಿಗೆ ಅಂತಿಮ ದಿನಾಂಕ- 15/11/2022.

    ಪ್ರವೇಶಾತಿ ಶುಲ್ಕದಲ್ಲಿ ವಿಶೇಷ ರಿಯಾಯಿತಿ:

    1. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ 15%.
    2. ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ 15%.
    3. ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ 30%.

    ಪೂರ್ಣ ಶುಲ್ಕ ವಿನಾಯಿತಿ:

    1. ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ
    2. ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ
    3. ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂಸಿಎ ಹೊರತು ಪಡಿಸಿ).

    ಸೂಚನೆ:- SC/ST/OBC ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು.

    ಹೆಚ್ಚಿನ ಮಾಹಿತಿಗಾಗಿ ಡಾ.ಲೋಕೇಶ ಆರ್.,  ಪ್ರಾದೇಶಿಕ ನಿರ್ದೇಶಕರು,  ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ,  ಸಿಎ-07, ಟೂಡಾ ಲೇಔಟ್, ರಾಜೀವ್ ಗಾಂಧಿ ನಗರ, ಮೇಳೆಕೋಟಿ-ವೀರಸಾಗರ, ತುಮಕೂರು-572 105.  ದೂರವಾಣಿ ಸಂಖ್ಯೆ: 0816-2955580. ಮೊಬೈಲ್: 9844506629ನ್ನು ಸಂಪರ್ಕಿಸಬಹುದು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.