ರಾಜ್ಯದಲ್ಲಿ ಸರ್ಕಾರವೇ ಇಲ್ಲ. 34 ಸಚಿವರಲ್ಲಿ 26 ಸಚಿವರಿದ್ದಾರೆ. ಬೊಮ್ಮಾಯಿಯವರೇ 8 ಖಾತೆಗಳನ್ನು ಇಟ್ಟುಕೊಂಡಿದ್ದು, ಯಾವುದಕ್ಕೂ ಸರಿಯಾಗಿ ನ್ಯಾಯ ಒಗದಿಸುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ಸಚಿವಾಲಯಗಳು ಖಾಲಿ ಇವೆ. ಬೊಮ್ಮಾಯಿ ಸಿಎಂ ಆದ ಮೇಲೆ 12 ಖಾತೆಗಳು ಅವರ ಬಳಿಯೇ ಇವೆ. 37 ಇಲಾಖೆಗಳನ್ನು ಸಿಎಂ ಸೇರಿ 5 ಮಂದಿ ಸಚಿವರು ಮಾತ್ರ ನಿರ್ವಹಿಸುತ್ತಿದ್ದಾರೆ. ಯಾವ ಇಲಾಖೆಗಳೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದು ಕರ್ನಾಟಕದ ದುರಂತ ಎಂದು ಕಿಡಿ ಕಾರಿದರು.
ಸರ್ಕಾರ ಹೈಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಬೆಂಗಳೂರಿನಲ್ಲಿ 2ಸಾವಿರ ಕಿ.ಮೀ ರಸ್ತೆಯಿದೆ. ಇದರಲ್ಲಿ ೩೩ ಸಾವಿರ ಗುಂಡಿಗಳಿವೆ, ೧೦ ಸಾವಿರ ಮುಚ್ಚಿದ್ದೇವೆ. ಇದಕ್ಕೆ ೮೦೦ ಕೋಟಿ ಖರ್ಚಾಗಿದೆ ಎಂದು ತಿಳಿಸಿದೆ. ಹೊಸ ರಸ್ತೆ ನಿರ್ಮಿಸಲು ೧.೨ ಕೋಟಿ ವೆಚ್ಚವಾದರೆ ಗುಂಡಿ ಮುಚ್ಚಲು ೧.೫ ಕೋಟಿ ಖರ್ಚು ಮಾಡಿದ್ದಾರೆ. ಮೈಸೂರಿನಲ್ಲಿ ೧೪೦೦ ಕಿ.ಮೀ ರಸ್ತೆಯಿದ್ದು, ೫೦೦೦ ಸಾವಿರ ಗುಂಡಿಗಳಿವೆ. ೧೫೦ ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ದುಡ್ಡು ಹೊಡೆಯುವುದು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ. ನಂ.೧ ಆಗಿದ್ದ ಬೆಂಗಳೂರು ಅದೋಗತಿಗಿಳಿದಿದೆ. ಹೂಡಿಕೆದಾರರು ನೆರೆಯ ರಾಜ್ಯಗಳಿಗೆ ಹೋಗುತ್ತಿದ್ದಾರೆ ಎಂದು ದೂರಿದರು.
ದಸರಾ ಲೆಕ್ಕೆ ಕೊಡಿ..
ದಸರಾ ಮುಗಿದು 23 ದಿನಗಳಾಗಿದೆ. ಆದರೂ ಜಿಲ್ಲಾ ಉಸ್ತುವಾರಿ ಸಚಿವರು ಲೆಕ್ಕ ಕೊಟ್ಟಿಲ್ಲ. ಪ್ರಾಯೋಜಕತ್ವದಿಂದಲೇ ಕೋಂಟ್ಯತರ ರೂ ಬಂದಿದೆ. ಅದೆಲ್ಲಾ ಎಲ್ಲೋಯ್ತು? ಯುವ ಸಂಭ್ರಮಕ್ಕೆ ಬಂದ ನಟ ನಟಿಯರು ತಮ್ಮ ಸಿನಿಮಾ ಪ್ರಮೋಷನ್ ಮಾಡಿದರು. ಆದರೂ ಅವರಿಗೆ ಲಕ್ಷ ಲಕ್ಷ ನೀಡಲಾಗಿದೆ. ೨೫ ಸಾವಿರ ಪಾಸ್ ಗಳಲ್ಲಿ ೧೫ ಸಾವಿರ ಪಾಸ್ ಗಳನ್ನು ತಮ್ಮ ಕ್ಷೇತ್ರದವರಿಗೆ ನೀಡಿದ್ದಾರೆ. ಮನೆ ಮನೆ ದಸರಾಗೆ ವಾರ್ಡ್ ಗೆ ೨ ಲಕ್ಷ ಕೊಟ್ಟಿದ್ದೀರಿ. ಎಷ್ಟು ವಾರ್ಡ್ಗಳಲ್ಲಿ ದಸರಾ ಮಾಡಿದ್ದಾರೆ ಲೆಕ್ಕ ಕೊಡಿ? ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಮಾಡುತ್ತಿದ್ದೀರಿ ಎಂದು ದೂರಿದರು.
ಹುಚ್ಚುನಾಯಿ ಎಂದು ಕರೆಯುತ್ತೇವೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಿಮೋಟ್ ಕಂಟ್ರೋಲ್ ಆಗಲಿದ್ದಾರೆ ಎಂದು ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ನಿಮ್ಮ ತಟ್ಟೆಯಲ್ಲೇ ಎಗ್ಗಣ ಬಿದ್ದಿದೆ. ಕಾಂಗ್ರೆಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ. ನಿಮ್ಮ ಪಕ್ಷದ ಅಧ್ಯಕ್ಷ ಚುನಾವಣೆ ಎಷ್ಟು ಬಾರಿ ಪಾರದರ್ಶಕಾಗಿ ನಡೆದಿದೆ? ಚುನಾವಣೆ ಮೂಲಕ ಎಷ್ಟು ಬಾರಿ ಆಯ್ಕೆ ಮಾಡಿದ್ದೀರಿ? ಜೆಪಿ ನಡ್ಡಾ ರಿಮೋಟ್ ಕಂಟ್ರೋಲ್ ಅಲ್ಲದೆ ಮತ್ತೇನು? ನಿಮಗೆ ಮಾನ ಮರ್ಯಾದೆ ಇದ್ದರೆ ಇದಕ್ಕೆಲ್ಲಾ ಉತ್ತರ ಕೊಡಿ. ಬೀದಿ ಬೀದಿಯಲ್ಲಿ ಹುಚ್ಚುನಾಯಿಯಂತೆ ಮಾತನಾಡುವ ಲೂಟಿ ರವಿಯನ್ನು ಇನ್ಮುಂದೆ ಹುಚ್ಚುನಾಯಿ ಎಂದು ಕರೆಯುತ್ತೇವೆ ಎಂದು ಲೇವಡಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿಗಳಾದ ಶಿವಣ್ಣ, ಈಶ್ವರಚಕ್ಕಡಿ, ಮಾಜಿ ಜಿ.ಪಂ ಅಧ್ಯಕ್ಷ ರಾಮು, ಮಾಧ್ಯಮ ವಕ್ತಾರ ಎಂ.ಮಹೇಶ್ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


