nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸಲು ತೆರಿಗೆ ಸಂಗ್ರಹ : ಆದರೂ ಪರಿಸ್ಥಿತಿ ಸುಧಾರಿಸಿಲ್ಲ
    ರಾಜ್ಯ ಸುದ್ದಿ October 29, 2022

    ಬೆಂಗಳೂರನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸಲು ತೆರಿಗೆ ಸಂಗ್ರಹ : ಆದರೂ ಪರಿಸ್ಥಿತಿ ಸುಧಾರಿಸಿಲ್ಲ

    By adminOctober 29, 2022No Comments3 Mins Read

    ಬೆಂಗಳೂರು ಮಹಾನಗರವನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜನರಿಂದ ಸೆಸ್ (ತೆರಿಗೆ) ರೂಪದಲ್ಲಿ ಹಣ ಸಂಗ್ರಹಿಸಿತು. ಆದರೆ ನಗರದಲ್ಲಿ ಭಿಕ್ಷುಕರ ಪುನರ್ವಸತಿ ಏನೂ ಸುಧಾರಿಸಿಲ್ಲ.

    ಬೆಂಗಳೂರನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಜನರಿಂದ ತೆರಿಗೆ ರೂಪದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ನಗರದಲ್ಲಿರುವ ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಆದರೆ ಈಗಲೂ ನಗರದಲ್ಲಿ ಎಲ್ಲೆಂದರಲ್ಲಿ ಭಿಕ್ಷುಕರು ಕಂಡು ಬರುತ್ತಿದ್ದಾರೆ. ಹಾಗಾದರೆ ಜನರಿಂದ ಸಂಗ್ರಹಿಸಿದ ತೆರಿಗೆ ಹಣ ಎಲ್ಲಿ ಹೋಯಿತು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.


    Provided by
    Provided by

    ಇತ್ತೀಚೆಗೆ ವಿಧಾನ ಪರಿಷತ್‌ ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಭಿಕ್ಷಾಟನಾ ನಿರ್ಮೂಲನಾ ತೆರಿಗೆ ರೂಪದಲ್ಲಿ ರಾಜ್ಯದ 10 ಮುನಿಸಿಪಲ್ ನಿಗಮಗಳಿಂದ ಒಟ್ಟು ರೂ. 437 ಕೋಟಿ ಸಂಗ್ರಹಿವಾಗಿರುವುದಾಗಿ ತಿಳಿಸಿದರು. ಈ ಪೈಕಿ ಬೆಂಗಳೂರು ಮಹಾನಗರ ಸಿಂಹಪಾಲು ಅನ್ನು ಹೊಂದಿದೆ. ಅಂದರೆ ಬೆಂಗಳೂರಿಗರಿಂದಲೇ ಬರೋಬ್ಬರಿ ರೂ.309 ಕೋಟಿ ಭಿಕ್ಷಾಟನಾ ನಿರ್ಮೂಲನಾ ತೆರಿಗೆ ಸಂಗ್ರಹಿಸಲಾಗಿದೆ.

    ಈ ಹಣವನ್ನು ರಾಜ್ಯದಲ್ಲಿರುವ 14 ಭಿಕ್ಷುಕರ ಪುನರ್ವಸತಿ ಕೇಂದ್ರಗಳ ಅಭಿವೃದ್ಧಿಗಾಗಿ ವ್ಯಯಿಸಲಾಗಿದೆ ಎಂದು ಪೂಜಾರಿ ಅವರು ಮಾಹಿತಿ ನೀಡಿದರು. ಈ ಹಣದಲ್ಲಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸುವುದು, ಹೊಸ ಕಟ್ಟಡಗಳ ನಿರ್ಮಾಣ, ಸಿಬ್ಬಂದಿ ವೇತನ, ಕೇಂದ್ರದಲ್ಲಿರುವ ನಿವಾಸಿಗಳ ನಿರ್ವಹಣೆ, ಇತ್ಯಾದಿಗಳಿಗೆ ಹಣ ಖರ್ಚು ಮಾಡಲಾಗಿದೆಯಂತೆ.

    ಆದರೆ ಈ ತೆರಿಗೆ ಮೊತ್ತ ಸಂಗ್ರಹ ಹಾಗೂ ಆ ಮೊತ್ತದ ಸರಿಯಾದ ಬಳಕೆಯನ್ನು ನಾಗರಿಕರು ಪ್ರಶ್ನಿಸಿದ್ದಾರೆ. ಕರ್ನಾಟಕ ಭಿಕ್ಷಾಟನಾ ನಿರ್ಮೂಲನಾ ಕಾಯ್ದೆ, ೧೯೭೫ರ ಪ್ರಕಾರ, ಬಿಬಿಎಂಪಿ ಸಂಗ್ರಹಿಸುವ ಒಟ್ಟು ಆಸ್ತಿ ತೆರಿಗೆಯಲ್ಲಿ ಶೇ.3ರಷ್ಟು ತೆರಿಗೆ ಮೊತ್ತವನ್ನು ಭಿಕ್ಷುಕರ ಪುನರ್ವಸತಿಗಾಗಿ ವರ್ಗಾಯಿಸಬೇಕು.

    “ಬೆಂಗಳೂರು ನಗರದಲ್ಲಿ ಸಂಚಾರಿ ಸಿಗ್ನಲ್‌ ಗಳ ಬಳಿ ನಿಲ್ಲುವುದು ವಾಹನ ಚಾಲಕರಿಗೆ ದುಸ್ತರವಾಗಿದೆ. ಕಾಯುವ ಸಮಯವೇ ಹೆಚ್ಚಾಗಿರುವ ಸಂದರ್ಭದಲ್ಲಿ ಅನೇಕ ಭಿಕ್ಷುಕರು ಜನರನ್ನು ಭಿಕ್ಷೆ ನೀಡಲು ಪೀಡಿಸುತ್ತಾರೆ. ಚಿಕ್ಕ ಮಕ್ಕಳನ್ನೂ ಸಹ ಭಿಕ್ಷಾಟನೆಗೆ ದೂಡುವುದು ಅಥವಾ ಬಳಸಿಕೊಳ್ಳುವುದನ್ನು ನೋಡುವುದಕ್ಕೆ ಬಹಳ ಬೇಸರ ಹಾಗೂ ದುಃಖವಾಗುತ್ತದೆ. ನಾವು ಅಯ್ಯೋ ಎಂದು ಭಿಕ್ಷೆ ನೀಡಿದರೆ ಅದು ನಾವೇ ಸ್ವತಃ ಭಿಕ್ಷಾಟನೆಗೆ ಪ್ರೋತ್ಸಾಹ ನೀಡಿದಂಥಾಗುತ್ತದೆ. ಆಧರೆ ಅವರ ಮುಖಗಳನ್ನು ನೋಡಿದಾಗ ಸುಮ್ಮನೆ ಇರಲೂ ಆಗುವುದಿಲ್ಲ. ಸರ್ಕಾರ ಭಿಕ್ಷಾಟನಾ ನಿರ್ಮೂಲನೆಗಾಗಿ ತೆರಿಗೆ ಸಂಗ್ರಹಿಸುತ್ತಿದೆ. ಆದರೆ ಭಿಕ್ಷುಕರ ಪುನರ್ವಸತಿ ಮಾತ್ರ ಆಗುತಿಲ್ಲ. ಹಾಗಾದರೆ, ಜನರ ಹಣ ಎಲ್ಲಿಗೆ ಹೋಯಿತು?,” ಎನ್ನುವುದು ಟೆಕ್ಕಿ ಸಂತೋಷ್ ರೆಡ್ಡಿಯವರ ಪ್ರಶ್ನೆಯಾಗಿದೆ.

    ದೃತಿ ಆರ್. ಎಂಬ ಕಾಲೇಜು ವಿದ್ಯಾರ್ಥಿನಿ ತನ್ನ ಅಭಿಪ್ರಾಯವನ್ನು ಹಂಚಿಕೊಂಡಂತೆ ಭಿಕ್ಷುಕರ ಪುನರ್ವಸತಿಗಾಗಿ ಸಂಗ್ರಹಿಸಿರುವ ಈ ಭಿಕ್ಷಾಟನಾ ತೆರಿಗೆ ಮೊತ್ತ ಸಂಬಂಧಪಟ್ಟ ಅಧಿಕಾರಿಗಳ ಪಾಲಾಗಿದೆ. “ಜೊತೆಗೆ ಭಿಕ್ಷುಕರೂ ಸಹ ಪುನರ್ವಸತಿ ಕೇಂದ್ರಕ್ಕೆ ಹೋಗಲು ನಿರಾಕರಿಸುತ್ತಿರಬಹುದು. ಏಕೆಂದರೆ ಅಲ್ಲಿನ ಪರಿಸ್ಥಿತಿಗಳು ಹಾಗಿರುತ್ತವೇನೋ? ಹಾಗಾಗಿ ಸರ್ಕಾರ ಈ ವಿಚಾರದಲ್ಲಿ ಸೂಕ್ತ ತನಿಖೆ ಕೈಗೊಂಡ ಸರಿಪಡಿಸಬೇಕು ಅಲ್ಲವೆ,” ಎಂದು ಕೇಳಿದರು.

    ಸ್ಥಳಾಂತರ ಯೋಜನೆ:

    ಈ ನಡುವೆ, ಮಾಗಡಿ ರಸ್ತೆಯಲ್ಲಿರುವ ಭಿಕ್ಷುಕರ ಪುನರ್ವಸತಿ ಕೇಂದ್ರವನ್ನು ಸ್ಥಳಾಂತರಿಸಲು ಯೋಜಿಸಲಾಗಿದೆ. ಈ ಕಾಲೋನಿ ಮಾಗಡಿ ರಸ್ತೆಯಲ್ಲಿರುವ ವರ್ತುಲ ರಸ್ತೆಯ ಪಕ್ಕದಲ್ಲೇ ಬಹಳ ಮುಖ್ಯವಾದ ಸ್ಥಳದಲ್ಲಿದೆ. ಸರ್ಕಾರಕ್ಕೆ ಈ ಸ್ಥಳವನ್ನು ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳಬಹುದು ಎಂದನಿಸಿದ್ದು, ಈ ಕಟ್ಟಡವನ್ನು ಬೇರೆ ಕಡೆಗೆ ಸ್ಥಳಾಂತರಿಸಲು ಆಲೋಚಿಸುತ್ತಿದೆ.

    ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ, ೧೫೦ ಎಕರೆಯಷ್ಟಿರುವ ಭಿಕ್ಷುಕರ ಕಾಲೋನಿಯನ್ನು ಒಂದು ಮಿನಿ ಲಾಲ್‌ ಬಾಗ್ ಆಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದರು.

    ಆಗಸ್ಟ್ ೨೦೧೦ರಲ್ಲಿ ಇಲ್ಲಿನ ೨೩ಕ್ಕೂ ಹೆಚ್ಚಿನ ಸಂಖ್ಯೆಯ ನಿವಾಸಿಗಳು ನಿಗೂಢವಾಗಿ ಸಾವನ್ನಪ್ಪಿದ್ದರು. ಇದರಿಂದಾಗಿ ಭಯಗೊಂಡಿದ್ದಂತಹ ಅಲ್ಲಿದ್ದ ಪೈಕಿ ಸುಮಾರು ೨೦೦ ಜನರು ಅಲ್ಲಿಂದ ತಪ್ಪಿಸಿಕೊಂಡು ಹೊರಟು ಹೋಗಿದ್ದರು. ಆ ಪುನರ್ವಸತಿ ಕೇಂದ್ರದ ಅಧಿಕಾರಿಗಳು ಈ ಸಂಬಂಧ ಕಾಮಾಕ್ಷಿಪಾಳ್ಯ ಪೋಲಿಸ್ ಠಾಣೆಯಲ್ಲಿ ದೂರನ್ನೂ ಸಹ ದಾಖಲಿಸಿದ್ದರು.

    ಬೆಂಗಳೂರಿನಲ್ಲಿ ಮಕ್ಕಳ ಭಿಕ್ಷಾಟನಾ ಪ್ರಮಾಣದಲ್ಲಿ ಹೆಚ್ಚು..

    ರಾಜ್ಯ ಸರ್ಕಾರದ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ, ನಗರದ ರಸ್ತೆಗಳಲ್ಲಿ ಭಿಕ್ಷಾಟನೆ ನಡೆಸುತ್ತಿದ್ದ ಸುಮಾರು ೧೮೯ ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಲಾಗಿದೆ. ಆದಾಗ್ಯೂ, ಇಂತಹ ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಮಾಹಿತಿ ಲಭಿಸಿದೆ. ೨೦೨೦ರಲ್ಲಿ ನಗರದಲ್ಲಿ ೨೭ ಮಕ್ಕಳನ್ನು ರಕ್ಷಿಸಲಾಗಿತ್ತು. ಈ ಸಂಖ್ಯೆ ೨೦೨೧ರಲ್ಲಿ ೭೮ಕ್ಕೆ ಹಾಗೂ ೨೦೨೨ರಲ್ಲಿ ಈವರೆಗೆ ೮೪ಕ್ಕೆ ಏರಿದೆ. ಸಚಿವ ಹಾಲಪ್ಪ ಆಚಾರ್ ಅವರು ಈ ಸಂಬಂಧ ಮಾತನಾಡಿ, ಭಿಕ್ಷಾಟನೆಯಿಂದ ರಕ್ಷಿಸಿದಂತಹ ಮಕ್ಕಳನ್ನು ಸರ್ಕಾರ ಅಥವಾ ಸರ್ಕಾರೇತರ ಸಂಸ್ಥೆಗಳು ನಿರ್ವಹಿಸುತ್ತಿರುವಂತಹ ಪುನರ್ವಸತಿ ಗೃಹಗಳಿಗೆ ಭರ್ತಿ ಮಾಡಲಾಗಿದೆ. ಇಂತಹ ಮಕ್ಕಳಿಗೆ ಶಿಕ್ಷಣ ಹಾಗೂ ವಿವಿಧ ಕೌಶಲ್ಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಆದರೆ ಆಶ್ಚರ್ಯಕರವಾಗಿ, ಬೆಂಗಳೂರು ಮಹಾನಗರವನ್ನು ಭಿಕ್ಷುಕರ ಮುಕ್ತವನ್ನಾಗಿಸಲು, ತೆರಿಗೆ ಪಾವತಿದಾರರು ೨೦೨೧-೨೨ನೇ ಸಾಲಿನಲ್ಲಿ ಬರೋಬ್ಬರಿ ರೂ.೫,೧೪,೬೪೧,೩೮೫ ಭಿಕ್ಷಾಟನಾ ನಿರ್ಮೂಲನಾ ತೆರಿಗೆ ರೂಪದಲ್ಲಿ ಪಾವತಿಸಿದ್ದಾರೆ. ಈ ಮೊತ್ತವನ್ನು ಕೇಂದ್ರ ಪರಿಹಾರ ಸಮಿತಿ (ಸಿಆರ್‌ಸಿ)ಯಲ್ಲಿ ಠೇವಣಿ ಇರಿಸಲಾಗಿದೆ. ಕಳೆದ ೧೦ ವರ್ಷಗಳಲ್ಲಿ ಭಿಕ್ಷುಕರ ಪುನರ್ವಸತಿಗಾಗಿ ಸಿಆರ್‌ ಸಿಗೆ ಬರೋಬ್ಬರಿ ರೂ.೩,೦೯,೦೩೮೮,೮೦೮ ತೆರಿಗೆ ಸಂಗ್ರಹವಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.