ಸುಳ್ಯ: ಹೃದಯಾಘಾತದಿಂದ 2ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.
ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ.(7) ಮೃತ ಬಾಲಕ.
ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು.
ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು, ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


