nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

    July 4, 2025

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025

    ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ

    July 4, 2025
    Facebook Twitter Instagram
    ಟ್ರೆಂಡಿಂಗ್
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    • ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ
    • ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ
    • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
    • ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    • ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್
    • ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿವೆ 31,211 ರಸ್ತೆ ಗುಂಡಿ: ಗುಂಡಿ ಮುಚ್ಚಲು ಬಿಬಿಎಂಪಿ ಆದೇಶ
    Uncategorized November 6, 2022

    ಬೆಂಗಳೂರಿನಲ್ಲಿವೆ 31,211 ರಸ್ತೆ ಗುಂಡಿ: ಗುಂಡಿ ಮುಚ್ಚಲು ಬಿಬಿಎಂಪಿ ಆದೇಶ

    By adminNovember 6, 2022No Comments2 Mins Read
    road

    ಬೆಂಗಳೂರಿನಲ್ಲಿ ರಸ್ತೆ ಗುಂಡಿ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದು, ನಗರದಲ್ಲಿನ 31 ಸಾವಿರ ಗುಂಡಿಗಳನ್ನು ಕೂಡಲೇ ಮುಚ್ಚಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ರಾಕೇಶ್ ಸಿಂಗ್ ಎಚ್ಚರಿಸಿದ್ದಾರೆ.

    ಬೆಂಗಳೂರಿನ ರಸ್ತೆ ಗುಂಡಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಶನಿವಾರ ದಿಢೀರ್‌ ಸಭೆ ನಡೆಸಿ ರಸ್ತೆ ಗುಂಡಿ ಮುಚ್ಚುವುದರಲ್ಲಿ ನಿರ್ಲಕ್ಷ್ಯ ವಹಿಸಿದರೆ ವಲಯ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


    Provided by

    ಗುರುವಾರ ಮಲ್ಲೇಶ್ವರದಲ್ಲಿ ದಂಪತಿ ರಸ್ತೆ ಗುಂಡಿ ಮುಚ್ಚುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದು ಮತ್ತು ರಸ್ತೆ ಗುಂಡಿಯಿಂದ ಸಂಭವಿಸುತ್ತಿರುವ ಸಾವು-ನೋವು ಕುರಿತು ನಿರಂತರವಾಗಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಬೆಳಗ್ಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಅವರನ್ನು ಕರೆಸಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

    ಶುಕ್ರವಾರ ವಿಕಾಸಸೌಧದಲ್ಲಿ ಬಿಬಿಎಂಪಿಯ 8 ವಲಯ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಎಂಜಿನಿಯರ್‌ಗಳ ಸಭೆ ನಡೆಸಿ ಶನಿವಾರ ಮಧ್ಯಾಹ್ನ 12ರ ಒಳಗಾಗಿ ಕನಿಷ್ಠ ಪಕ್ಷ ಮುಖ್ಯ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕು ಎಂದು ಗಡುವು ನೀಡಿದ್ದಾರೆ. ಅಲ್ಲದೇ ವಲಯ ಆಯುಕ್ತರು ಶುಕ್ರವಾರ ರಾತ್ರಿ 8ರಿಂದ ಆಯಾ ವಲಯ ಕಚೇರಿಯಲ್ಲಿ ಉಪಸ್ಥಿತರಿದ್ದು, ಎಂಜಿನಿಯರ್‌ಗಳೊಂದಿಗೆ ವಿವಿಧ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಗುಂಡಿ ಮುಚ್ಚುವ ಕಾರ್ಯದ ಬಗ್ಗೆ ಮೇಲ್ವಿಚಾರಣೆ ನಡೆಸಬೇಕು. ನಿರ್ಲಕ್ಷ್ಯ ವಹಿಸಿದರೆ ವಲಯ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಲಿದೆ ಎಂದು ರಾಕೇಶ್‌ ಸಿಂಗ್‌ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನ ಐಟಿ-ಬಿಟಿ ವಲಯದಲ್ಲೂ ರಸ್ತೆಗಳು ನೆಟ್ಟಗಿಲ್ಲ..!

    ಮೊದಲ ಹಂತದಲ್ಲಿ ಬಿಬಿಎಂಪಿಯ ವ್ಯಾಪ್ತಿಯ 1,300 ಕಿ.ಮೀ. ಉದ್ದದ ಮುಖ್ಯ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸುವುದರೊಂದಿಗೆ ರಸ್ತೆಯ ಅಕ್ಕ-ಪಕ್ಕದ ಮಳೆ ನೀರು ಕಾಲುವೆಯ ಹೂಳು ತೆಗೆಯಬೇಕು. ಜತೆಗೆ, ಪಾದಚಾರಿ ಮಾರ್ಗವನ್ನು ಸ್ವಚ್ಛವಾಗಿಡಬೇಕೆಂದು ನಿರ್ದೇಶಿಸಿದ್ದಾರೆ.

    ರಸ್ತೆ ಗುಂಡಿಗಳ ಸಂಖ್ಯೆ 31 ಸಾವಿರಕ್ಕೇರಿಕೆ!

    ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದ ಅಂತರದಲ್ಲಿ ಸುಮರು 5 ಸಾವಿರಕ್ಕೂ ಅಧಿಕ ಹೊಸ ಗುಂಡಿ ಪತ್ತೆಯಾಗುವ ಮೂಲಕ ಒಟ್ಟು ಗುಂಡಿಗಳ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ. ಕಳೆದ ನವೆಂಬರ್ 27ಕ್ಕೆ 25 ಸಾವಿರಕ್ಕೂ ಅಧಿಕ ಗುಂಡಿಗಳು ಪತ್ತೆಯಾ ಗಿದ್ದವು. ನವೆಂಬರ್ 4ರ ವೇಳೆಗೆ 31 ಸಾವಿರಕ್ಕೆ ಏರಿಕೆಯಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    July 4, 2025

    ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ: ತುಮಕೂರಿನಲ್ಲಿದೆ ಉದ್ಯೋಗಾವಕಾಶ

    June 14, 2025

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025
    Our Picks

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

    July 4, 2025

    ತಿಪಟೂರು: ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜುಲೈ 6ರಂದು ತಿಪಟೂರಿನಲ್ಲಿ ನಡೆಯಲಿದೆ ಎಂದು ನೂತನ ಅಧ್ಯಕ್ಷ ವನಿತಾ ಪ್ರಸನ್ನ…

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025

    ತುಮಕೂರು: ಬುಕ್ಕಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ

    July 4, 2025

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.