nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಕಾಲು ಕಾಂಗ್ರೆಸ್ ನಲ್ಲಿ, ಇನ್ನೊಂದು ಕಾಲು ಎಲ್ಲಿಡಲಿದ್ದಾರೆ ಕೆ.ಎನ್.ರಾಜಣ್ಣ? | ಪಕ್ಷಾಂತರಕ್ಕೆ ಸಿದ್ಧತೆ?

    November 13, 2025

    ತುಮಕೂರು| ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಪ್ರಾರ್ಥಿಸಿ ಚಂಡಿಕಾ ಹೋಮ

    November 13, 2025

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025
    Facebook Twitter Instagram
    ಟ್ರೆಂಡಿಂಗ್
    • ಒಂದು ಕಾಲು ಕಾಂಗ್ರೆಸ್ ನಲ್ಲಿ, ಇನ್ನೊಂದು ಕಾಲು ಎಲ್ಲಿಡಲಿದ್ದಾರೆ ಕೆ.ಎನ್.ರಾಜಣ್ಣ? | ಪಕ್ಷಾಂತರಕ್ಕೆ ಸಿದ್ಧತೆ?
    • ತುಮಕೂರು| ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಪ್ರಾರ್ಥಿಸಿ ಚಂಡಿಕಾ ಹೋಮ
    • ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
    • ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
    • ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
    • ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
    • ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
    • ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂರಕ್ಷಣಾ ಸಮಿತಿ ಪ್ರತಿಭಟನೆ
    ಕೊರಟಗೆರೆ November 7, 2022

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂರಕ್ಷಣಾ ಸಮಿತಿ ಪ್ರತಿಭಟನೆ

    By adminNovember 7, 2022No Comments2 Mins Read
    protest

    ಕೊರಟಗೆರೆ: ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ತಾಲ್ಲೂಕು ಆಡಳಿತ ಕಚೇರಿಯವರಿಗೆ  ತಾಲ್ಲೂಕಿನ ಹಲವು ಗ್ರಾಮಿಣ ಭಾಗದ ರೈತರು ಮತ್ತು ಸಾರ್ವಜನಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ  ಪ್ರತಿಭಟಿಸಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು..

    ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ರಾಮಣ್ಣ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಸರ್ಕಾರಿ ಜಮೀನುಗಳನ್ನು ಸುಮಾರು 30 ರಿಂದ 40 ವರ್ಷಗಳಿಂದ ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿರುವ ಬಡ ಭೂ ರಹಿತರಿಗೆ ಅವರ ಸ್ವಾಧೀನ  ಅನುಭವದಂತೆ ಬಗರ್ ಹುಕುಂ ಕಮಿಟಿಯಿಂದ ಸಾಗುವಳಿ ಮಂಜುರಾತಿಯನ್ನು ನೀಡಿ, ಸಾಗುವಳಿ ಪತ್ರವನ್ನು ಕೊಡಬೇಕು ಹಾಗೂ ಗ್ರಾಮೀಣ ಪ್ರದೇಶದ ವಸತಿ ಹೀನರ ಶೋಷಿತ ಸಮುದಾಯಗಳಿಗೆ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳಿಗೆ ಹಾಗೂ ಅಂಗವಿಕಲರನ್ನು ಗುರುತಿಸಿ ಸರ್ಕಾರದ ವತಿಯಿಂದಲೇ ಭೂಮಿಯನ್ನು ಖರೀದಿಸಿ ವಸತಿ ಕಲ್ಪಿಸುವುದರೊಂದಿಗೆ ಮನೆಯನ್ನು ಕಟ್ಟಿಸಿ ಕೊಡಬೇಕೆಂದು ಸರ್ಕಾರಕ್ಕೆ ಈ ಸಂದರ್ಭದಲ್ಲಿ ಒತ್ತಾಯಿಸಿದರು.


    Provided by
    Provided by

    ವಿದ್ಯಾವಂತ ನಿರುದ್ಯೋಗಿ ಯುವ ಜನರಿಗೆ ಜೀವನ ನಿರ್ವಹಣೆಗಾಗಿ ರಾಜ್ಯದಲ್ಲಿ ಪ್ರತಿ ತಾಲ್ಲೂಕಿನಲ್ಲಿ ಕೈಗಾರಿಕೆಗಳನ್ನು  ಸ್ಥಾಪಿಸಿ ನಿರುದ್ಯೋಗ ಸಮಸ್ಯೆ ಬಗೆಹರಿಸಿ ಕೊಡಬೇಕು, ಸರ್ಕಾರಿ ಇಲಾಖೆಗಳಲ್ಲಿ ತುಂಬಾ ವರ್ಷಗಳಿಂದ ಬೇರೂರಿರುವಂತಹ ಅಧಿಕಾರಿಗಳನ್ನು ಸುಮಾರು 3 ವರ್ಷಗಳಿಗೊಮ್ಮೆ ಬೇರೆ ಕಡೆ ವರ್ಗಾವಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಇದರಿಂದ ಭ್ರಷ್ಟಚಾರ ಮತ್ತು ಲಂಚಕೋರ ಪದ್ಧತಿಯನ್ನು ಮತ್ತು ಭ್ರಷ್ಟ ಅಧಿಕಾರಿಗಳನ್ನು ಮಟ್ಟ ಹಾಕಲು ಸೂಕ್ತವಾಗುತ್ತದೆ ಎಂದು ತಿಳಿಸಿದರು.

    ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಕೇಶವಮೂರ್ತಿ ಮಾತನಾಡಿ, ಪ್ರತಿಯೊಂದು ಗ್ರಾಮಗಳಲ್ಲಿ ಸಾರ್ವಜನಿಕರಿಗೆ ರುದ್ರಭೂಮಿಯನ್ನು ಮಂಜುರಾತಿ ಮಾಡಿ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಅಸಂಘಟಿತ ತಮಟೆ ಕಲಾವಿದರನ್ನು ಗುರುತಿಸಿ ಮಾಸಾಶಸನವನ್ನು ಶೀಘ್ರವಾಗಿ ನೀಡಬೇಕು. ಪ್ರತಿ ತಾಲೂಕುಗಳಲ್ಲಿ ಶೋಷಿತ ಮಹಿಳೆ ಮತ್ತು ಮಕ್ಕಳು ಹಾಗೂ ವೃದ್ಧರಿಗೆ ಸಂರಕ್ಷಣಾ ಕೇಂದ್ರ ಹಾಗೂ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು. ಕೃಷಿ ಉತ್ಪನ್ನ ಆರೋಗ್ಯ ಸೇವೆ, ದೈನಂದಿನ ಕೌಟುಂಬಿಕ ಬಳಕೆಯ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಸೇವಾ ಶುಲ್ಕ ಮತ್ತು ಜಿ ಎಸ್‌ ಟಿ ಯನ್ನು ಕೂಡಲೇ ರದ್ದು ಪಡಿಸಿ ಬೆಲೆ ಏರಿಕೆಯನ್ನು  ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.

    ಶ್ರೀ ಸಿದ್ದೇಶ್ವರ ಕ್ಷೇತ್ರದಲ್ಲಿ ನೂರಾರು ವರ್ಷಗಳಿಂದ ಸಾಧು ಸಂತ ಶರಣರು ಗಂಗಾ ಆಧ್ಯಾತ್ಮಿಕ ವೇದಾಂತ ಆಶ್ರಮವನ್ನು ಸ್ಥಾಪಿಸಿದ್ದು, ಯೋಗ ಮತ್ತು ಧ್ಯಾನ ಕೇಂದ್ರ ಸ್ಥಾಪನೆಗೆ ಹಲವಾರು ವರ್ಷಗಳಿಂದ ಬೇಡಿಕೆಯನ್ನು ಇಟ್ಟಿದ್ದರು ಸಹ ಯಾವುದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಆಡಳಿತ ವ್ಯವಸ್ಥೆಯೂ ವಿಫಲವಾಗಿರುತ್ತದೆ. ಆದ್ದರಿಂದ ಆಶ್ರಮ ನಡೆಸುವ ಆಧ್ಯಾತ್ಮಿಕ ಚಿಂತನೆಗೆ ಭೂ ಮಂಜೂರಾತಿಯನ್ನು ಮಾಡಬೇಕೆಂದು ಸಂತ ಶಿವ ಶರಣರು ಆಗ್ರಹಿಸಿದ್ದರು.

    ದಲಿತ ಮುಖಂಡರುಗಳು ಮಾತನಾಡಿ, ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಅಬಕಾರಿ ಇಲಾಖೆಯವರಿಗೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಸಂಘಟನಾ  ರಾಜ್ಯ ಅಧ್ಯಕ್ಷ ಸತ್ಯಪ್ಪ ಮಧುಗಿರಿ, ಕ.ರಾ.ಭೂ.ವ.ರ.ಒಕ್ಕೂಟದ ರಾಜ್ಯಾಧ್ಯಕ್ಷ ಎಸ್ ಎಸ್ ಯೋಗಿ, ಪ್ರಧಾನ ಕಾರ್ಯದರ್ಶಿ ವೈ ಕೃಷ್ಣಪ್ಪ, ಕಲಾವಿದ ವಿಭಾಗದ ಜಿಲ್ಲಾಧ್ಯಕ್ಷ ಬಾಲಕೃಷ್ಣ ಗೊಲ್ಲಹಳ್ಳಿ,ತಾಲ್ಲೂಕು ಅಧ್ಯಕ್ಷ ದೊಡ್ಡಯ್ಯ ಬುಕ್ಕಪಟ್ಟಣ, ತಾಲ್ಲೂಕು ಸಮಿತಿ ಉಪಾಧ್ಯಕ್ಷ ಗಂಗಣ್ಣ, ತಾಲ್ಲೂಕು  ಸಂಘಟನಾ ಕಾರ್ಯದರ್ಶಿ ರಾಜಣ್ಣ, ಅರಸಪುರ ರಮೇಶ್ ಸೇರಿದಂತೆ ದಲಿತ ಮುಖಂಡರುಗಳು ನೂರಾರು ರೈತರು ಮತ್ತು ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಒಂದು ಕಾಲು ಕಾಂಗ್ರೆಸ್ ನಲ್ಲಿ, ಇನ್ನೊಂದು ಕಾಲು ಎಲ್ಲಿಡಲಿದ್ದಾರೆ ಕೆ.ಎನ್.ರಾಜಣ್ಣ? | ಪಕ್ಷಾಂತರಕ್ಕೆ ಸಿದ್ಧತೆ?

    November 13, 2025

    ಮಧುಗಿರಿ: ಪಕ್ಷ ವಿರೋಧಿ ಹೇಳಿಕೆ ನೀಡಿ ಸಚಿವ ಸ್ಥಾನದಿಂದ ವಜಾಗೊಂಡಿದ್ದ ಕಾಂಗ್ರೆಸ್‌ ಶಾಸಕ ಕೆ.ಎನ್.ರಾಜಣ್ಣ ಇದೀಗ ತುಮಕೂರು ಜಿಲ್ಲೆಯಲ್ಲಿ ಮತ್ತೆ…

    ತುಮಕೂರು| ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಪ್ರಾರ್ಥಿಸಿ ಚಂಡಿಕಾ ಹೋಮ

    November 13, 2025

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.