nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾನಸಗಂಗೋತ್ರಿ ಆವರಣದಲ್ಲಿ IB ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ: ಇಬ್ಬರ ಬಂಧನ
    ರಾಜ್ಯ ಸುದ್ದಿ November 8, 2022

    ಮಾನಸಗಂಗೋತ್ರಿ ಆವರಣದಲ್ಲಿ IB ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ: ಇಬ್ಬರ ಬಂಧನ

    By adminNovember 8, 2022No Comments2 Mins Read
    mysore

    ನವೆಂಬರ್ 4ರ ಶುಕ್ರವಾರ ಸಂಜೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಅಪರಿಚಿತ ವಾಹನದಿಂದ ಡಿಕ್ಕಿ ಹೊಡೆಸಿ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿಯೋರ್ವರನ್ನು ಹತ್ಯೆಗೈಯ್ಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಕೊಲೆ ಕುರಿತಂತೆ ವಿಶೇಷ ತಂಡ ತನಿಖೆ ನಡೆಸುತ್ತಿತ್ತು. ತನಿಖೆ ವೇಳೆ ಕುಲಕರ್ಣಿಯವರ ಪಕ್ಕದ ಮನೆಯ ಮಾದಪ್ಪ ಮತ್ತು ಆರ್.ಎನ್.ಕುಲಕರ್ಣಿ ನಡುವೆ ಮನೆ ಕಟ್ಟುವ ವಿಚಾರವಾಗಿ ಗಲಾಟೆ ನಡೆದಿತ್ತು ಎಂಬ ಬಗ್ಗೆ ಮಾಹಿತಿ ಲಭಿಸಿತ್ತು. ಈ ಸಂಬಂಧ ವಿಶೇಷ ತಂಡ ತನಿಖೆ ಮುಂದುವರಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾದಪ್ಪನ ಪುತ್ರ , ಕಟ್ಟಡ ಕಾಮಗಾರಿಗಳಲ್ಲಿ ತೊಡಗಿಸಿಕೊಂಡಿದ್ದ ಮನು(30) ಹಾಗೂ ಇತನ ಸ್ನೇಹಿತ ವರುಣ್ ಬಂಧಿತ ಆರೋಪಿಗಳು.
    ಮನುವಿನ ಸ್ನೇಹಿತ ವರುಣ್ ಎಂಬಾತ ಆರ್.ಎನ್ ಕುಲಕರ್ಣಿ ವಾಯುವಿಹಾರಕ್ಕೆ ಬರುತ್ತಿದ್ದ ಸ್ಥಳಗಳನ್ನು ದ್ವಿಚಕ್ರವಾಹನದಲ್ಲಿ ಕರೆತಂದು ತೋರಿಸಿದ್ದು, ಇಬ್ಬರೂ ಸೇರಿ ಕೊಲೆಗೆ ಸ್ಕೆಚ್ ರೂಪಿಸಿದ್ದರು ಎನ್ನಲಾಗಿದೆ. ಮನು ತನ್ನ ತಂದೆ ಮಾದಪ್ಪನಿಗೂ ವಿಚಾರ ತಿಳಿಸದೇ ಆರ್.ಎನ್.ಕುಲರ್ಣಿಯವರ ಹತ್ಯೆಗೆ ಮುಂದಾಗಿದ್ದನು ಎನ್ನಲಾಗಿದೆ. ಸಿಸಿಟಿವಿಯಲ್ಲಿ ಆಧರಿಸಿದ ದೃಶ್ಯಗಳನ್ನು ತಪಾಸಣೆ ನಡೆಸಿದ ಪೊಲೀಸರಿಗೆ ದ್ವಿಚಕ್ರವಾಹನದಲ್ಲಿ ವ್ಯಕ್ತಿಯೋರ್ವ ಬಂದು ಸ್ಥಳ ತೋರಿಸಿರುವ ಕುರಿತು ಅನುಮಾನಗಳು ಹುಟ್ಟಿಕೊಂಡು ಠಾಣೆಗೆ ಕರೆಸಿ ತೀವ್ರ ವಿಚಾರಣೆಗೊಳಪಡಿಸಲಾಗಿ ಬಾಯ್ಬಿಟ್ಟಿದ್ದ ಎನ್ನಲಾಗಿದೆ. ಇನ್ನೂ ಕೂಡ ಪ್ರಕರಣ ಸಂಬಂಧ ತೀವ್ರ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.


    Provided by
    Provided by

    ಘಟನೆ ಹಿನ್ನೆಲೆ

    ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಆರ್.ಎಸ್.ಕುಲಕರ್ಣಿ (83) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಕ್ಯಾಂಪಸ್‌ ನಲ್ಲಿ ನ.4ರಂದು ಸಂಜೆ ನಡೆದಿತ್ತು. ಅವರು ಕ್ಯಾಂಪಸ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ವಾಯುವಿಹಾರ ನಡೆಸುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿದೆ. ಇದರಿಂದ ಗಾಯಗೊಂಡಿದ್ದ ಆರ್.ಎಸ್.ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಲಕರ್ಣಿ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡಿದ್ದರು. ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಕಾರು ಅಪಘಾತ ಮಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಿವೃತ್ತ ಅಧಿಕಾರಿ ಪಕ್ಕಕ್ಕೆ ಹೋದರೂ ಡಿಕ್ಕಿ ಹೊಡೆದಿರುವುದು ಸೆರೆಯಾಗಿತ್ತು. ಅಪಘಾತಕ್ಕೆ ನಂಬರ್ ಪ್ಲೇಟ್ ಇಲ್ಲದ ಕಾರು ಬಳಸಿದ್ದು, ಯೋಜಿತ ಕೊಲೆ ಎಂದು ಶಂಕೆ ವ್ಯಕ್ತವಾಗಿತ್ತು. ಪೊಲೀಸರು ಇದನ್ನು ಕೊಲೆ ಪ್ರಕರಣ ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದೀಗ ಪ್ರಕರಣ ಸಂಬಂಧ ಇಬ್ಬರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.