nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನ ಸಂಗೀತ ಕಾರಂಜಿಯನ್ನು ಪುನರ್‌ ಸ್ಥಾಪಿಸಲು ಪ್ರಸ್ತಾಪ
    ರಾಜ್ಯ ಸುದ್ದಿ November 16, 2022

    ಬೆಂಗಳೂರಿನ ಸಂಗೀತ ಕಾರಂಜಿಯನ್ನು ಪುನರ್‌ ಸ್ಥಾಪಿಸಲು ಪ್ರಸ್ತಾಪ

    By adminNovember 16, 2022No Comments2 Mins Read
    sangitha karanjje

    ಬೆಂಗಳೂರು ಮಹಾನಗರದ ಅಂದಿನ ಜನಪ್ರಿಯ ಸಂಗೀತ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿ ಒಂದು ದಶಕಕ್ಕಿಂತಲೂ ಹೆಚ್ಚಿನ ಸಮಯವಾಗಿದೆ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರುವವರಿಗೆ ಕೃಷ್ಣರಾಜಸಾಗರದ ಅತ್ಯಂತ ದೊಡ್ಡ ಜನಪ್ರಿಯತೆಯನ್ನು ಪಡೆದಂತಹ ಬೃಂದಾವನ ಉದ್ಯಾನವನದಲ್ಲಿರುವ ಸಂಗೀತ ಕಾರಂಜಿಯ ಬಗ್ಗೆ ತಿಳಿದೇ ಇರುತ್ತದೆ. ಬೆಂಗಳೂರಿಗರು ಒಂದು ಕಾಲದಲ್ಲಿ ಅಲ್ಲಿನ ಸಂಗೀತ ಕಾರಂಜಿಯನ್ನು ನೋಡಲು ಇಲ್ಲಿಂದ ಮಂಡ್ಯದಲ್ಲಿರುವ ಬೃಂದಾವನ ಉದ್ಯಾನವನಕ್ಕೆ ತೆರಳುತ್ತಿದ್ದರು.

    ಹಾಗಾಗಿ, ಸಂಬಂಧಪಟ್ಟ ಪ್ರಾಧಿಕಾರಗಳು ನಮ್ಮ ಬೆಂಗಳೂರಿನಲ್ಲಿಯೂ ಅದೇ ರೀತಿಯ ಒಂದು ಸಂಗೀತ ಕಾರಂಜಿಯನ್ನು ಸ್ಥಾಪಿಸಲು ನಿರ್ಧರಿಸಿದರು. ಇದರ ಫಲವಾಗಿ ೧೯೯೪ರಲ್ಲಿ ಬೆಂಗಳೂರಿನ ಇಂದಿರಾ ಗಾಂಧಿ ಸಂಗೀತ ಕಾರಂಜಿ ಅಸ್ತಿತ್ವಕ್ಕೆ ಬಂತು. ಈ ಕಾರಂಜಿ ೬೦ ಅಡಿ ಉದ್ದ ಹಾಗೂ ೧೫ ಅಡಿ ಅಗಲವಿದೆ. ಈ ಕಾರಂಜಿಯೂ ಸಹ ಬೆಂಗಳೂರಿಗರ ಪೈಕಿ ದೊಡ್ಡ ಹಟ್ ಆಗಿತ್ತು. ಆದರೆ ೨೦೧೨ರಲ್ಲಿ ಈ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿತ್ತು. ಅಂದಿನಿಂದ ಇದನ್ನು ಸರಿಪಡಿಸಲಾಗಿಲ್ಲ.

    ಜೊತೆಗೆ, ಇಲ್ಲಿ ಒಂದು ಪುಟಾಣಿ ರೈಲು (ಟಾಯ್ ಟ್ರೇನ್) ಸಹ ಇದ್ದು, ಇದೂ ಸಹ ಈ ಉದ್ಯಾನವನದ ಮುಖ್ಯ ಆಕರ್ಷಣೆಯಾಗಿತ್ತು. ಆದರೆ ಈ ಪುಟಾಣಿ ರೈಲು ಸಹ ಕೆಟ್ಟು ನಿಂತಿದೆ. ಈ ಸಂಬಂಧ ಮಾತನಾಡಿದ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಈ ಪುಟಾಣಿ ರೈಲನ್ನು ದುರಸ್ತಿಗೊಳಿಸಲು ಹಣ ಸಹಾಯ ನೀಡುವಂತೆ ಹಲವು ಬಾರಿ ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದು, ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ ಎಂದು ತಿಳಿಸಿದ್ದಾರೆ. ಆದರೆ ಸಾಧ್ಯವಾದಷ್ಟು ಬೇಗ ಈ ಪುಟಾಣಿ ರೈಲಿನ ದುರಸ್ತಿ ಮುಗಿದು ಮತ್ತೊಮ್ಮೆ ಹಳಿಗಳ ಮೇಲೆ ಓಡಲಾರಂಭಿಸುವ ವಿಶ್ವಾಸವಿದೆ ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

    ಈಗ ಸಂಬಂಧಪಟ್ಟ ಪ್ರಾಧಿಕಾರಗಳು ಹೇಳುತ್ತಿರುವುದೇನೆಂದರೆ ಸಂಗೀತ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿ ಒಂದು ದಶಕಕ್ಕಿಂತಲೂ ಹೆಚ್ಚಿನ ಸಮಯವಾಗಿದ್ದು, ನೀರು ಶೇಖರಣಾ ತೊಟ್ಟಿಗಳು ಸೇರಿದಂತೆ ಬಹುತೇಕ ಎಲ್ಲವನ್ನೂ ದುರಸ್ತಿಪಡಿಸಬೇಕಿದೆ. ಆದರೆ ತೋಟಗಾರಿಕೆ ಇಲಾಖೆಯಲ್ಲಿ ಹಣವಿಲ್ಲದಿರುವುದೇ ಇರುವುದರಿಂದಾಗಿ ಸಂಗೀತ ಕಾರಂಜಿ ಹಾಗೂ ಇತರೆ ವ್ಯವಸ್ಥೆಗಳನ್ನು ಸರಿಪಿಡಸಲು ಸಿಎಸ್‌ ಆರ್ ನಿಧಿಯನ್ನು ಎದುರು ನೋಡುತ್ತಿದೆಯಂತೆ.

    ಮೂಲಗಳ ಪ್ರಕಾರ, ಈ ಸಂಗೀತ ಕಾರಂಜಿ ಇರುವ ಉದ್ಯಾನವನ, ತಾರಾಲಯ, ಬಾಲ ಭವನ ಹಾಗೂ ಕಬ್ಬನ್ ಉದ್ಯಾನವನಗಳಿಗೆ ಹತ್ತಿರವಿರುವ ಕಾರಣದಿಂದಾಗಿ ಇಲ್ಲಿನ ಸಂಗೀತ ಕಾರಂಜಿ ಮಕ್ಕಳಲ್ಲಿ ಬಹಳ ಖ್ಯಾತಿಯನ್ನು ಗಳಿಸಿತ್ತು. ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಮಕ್ಕಳು ಇಲ್ಲಿಗೆ ಬರುತ್ತಿದ್ದರು. ಈ ಸಂಗೀತ ಕಾರಂಜಿ ಈ ಹಿಂದೆ ವಾರದಲ್ಲಿ ಆರು ದಿನಗಳ ಕಾಲ ಪ್ರತಿ ದನ ಎರಡು ಪ್ರದರ್ಶನಗಳನ್ನು ಒಳಗೊಂಡಿತ್ತು (ರಾತ್ರಿ ೭-೭.೩೦ ಹಾಗೂ ೮ ರಿಂದ ೮.೩೦ ರವರೆಗೆ).

    ಈ ಸಂಬಂಧ ಮಾತನಾಡಿದ ತೋಟಗಾರಿಕಾ ಇಲಾಖೆಯ ಅಧಿಕಾರಿಯೊಬ್ಬರು, “ನಾವು ರಾಜ್ಯ ಸರ್ಕಾರಕ್ಕೆ ಇಲ್ಲಿನ ಮೂಲಭೂತಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅನುದಾನ ಒದಗಿಸಬೇಕೆಂದು ಕೋರಿ ವಿವರವಾದ ವರದಿಯೊಂದನ್ನು ಸಲ್ಲಿಸಿದ್ದೆವು. ವಾಸ್ತವದಲ್ಲಿ ಸರ್ಕಾರವೂ ಸಹ ೨೦೧೫ರಲ್ಲಿ ರಾಜ್ಯ ಆಯವ್ಯಯದಲ್ಲಿ ಇದಕ್ಕಾಗಿ ಹಣ ಒದಗಿಸುವುದಾಗಿ ಆಶ್ವಾಸನೆಯನ್ನೂ ನೀಡಿತ್ತು. ಆದರೆ ಅದು ಕೇವಲ ಆಶ್ವಾಸನೆಯಾಗಿಯೇ ಉಳಿದುಕೊಂಡಿದ್ದು, ಹಣ ಬಿಡುಗಡೆ ಆಗಲೇ ಇಲ್ಲ. ಅಂದಿನಿಂದ ನಾವು ಹಣಕಾಸು ಇಲಾಖೆಗೆ ಹಲವು ಬಾರಿ ಹಣ ಬಿಡುಗಡೆಗೊಳಿಸುವಂತೆ ಕೋರಿ ಪತ್ರಗಳನ್ನು ಬರೆದಿದ್ದೇವೆ. ಆದರೆ ಇಲ್ಲಿಯವರೆಗೆ ಅದೃಷ್ಟ ಬಂದಿಲ್ಲ.

    ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಸಿಂಗಪೂರ್‌ ನ ಒಂದು ಕಂಪನಿಯನ್ನು ಗುರುತಿಸಲಾಗಿತ್ತು. ಇಡೀ ಸಂಗೀತ ಕಾರಂಜಿ ವ್ಯವಸ್ಥೆಯನ್ನು ದುರಸ್ತಿಗೊಳಿಸಲು ರೂ.೧೬ ಕೋಟಿ ಅಗತ್ಯವಿದೆ. ಜೊತೆಗೆ ನಾವು ಇಲ್ಲಿ ಲೇಸರ್ ಪ್ರದರ್ಶನವನ್ನೂ ಸಹ ಏರ್ಪಡಿಸಲು ಯೋಜಿಸಿದ್ದೇವೆ. ಆದರೆ ರಾಜ್ಯ ಹಣಕಾಸು ಇಲಾಖೆಯವರು ಕೇವಲ ರೂ.೨ ಕೋಟಿ ನೀಡುವುದಾಗಿ ತಿಳಿಸಿತು, ಇದು ಯಾವುದಕ್ಕೂ ಸಾಲುವುದಿಲ್ಲ,” ಎಂದು ವಿವರಿಸಿದರು.

    ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಹೆಚ್.ಟಿ. ಬಾಲಕೃಷ್ಣ ಅವರು ಹೇಳಿದಂತೆ ಈ ಉದ್ಯಾನವನದ ಪುನರ್ ಅಭಿವೃದ್ಧಿಗಾಗಿ ಕನಿಷ್ಠ ರೂ. ೧೦ ರಿಂದ ರೂ.೧೨ ಕೋಟಿಗಳ ಅಗತ್ಯವಿದೆ. ಆದರೆ ಇಲಾಖೆಯ ಬಳಿ ಅಷ್ಟು ಹಣ ಇಲ್ಲದಿರುವ ಕಾರಣದಿಂದಾಗಿ ವಿವಿಧ ಕಾರ್ಪೊರೇಟ್ ಸಂಸ್ಥೆಗಳ ಮೊರೆ ಹೋಗಿದ್ದಾರಂತೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ…

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.