ಧಾರವಾಡ: ಇತ್ತೀಚೆಗೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ತಾಲಿಬಾನ್ ಕೃತ್ಯಕ್ಕಿಂತಲೂ ಕೆಟ್ಟದಾಗಿದೆ. ಆದ್ದರಿಂದ ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಇರಬೇಕು. ಪ್ರೀತಿ ಮಾಡುವಾಗ, ಡೇಟಿಂಗ್ ಮಾಡುವಾಗ ವಿಚಾರ ಮಾಡಿ ಮಾಡಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಲಹೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ದೆಹಲಿಯಲ್ಲಿ ಗೆಳತಿಯನ್ನು 35 ಪೀಸ್ಗಳಾಗಿ ಮಾಡಿ ಹತ್ಯೆಮಾಡಿರುವ ಘಟನೆ ತಾಲಿಬಾನಿಗಳ ಕೃತ್ಯಕ್ಕಿಂತೂ ಕೆಟ್ಟದಾದದ್ದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲವ್ ಜಿಹಾದ್ಗೆ ಬಲಿಯಾಗುವ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ನಾನು ಕಳೆದ 15 ವರ್ಷಗಳಿಂದಲೂ ಎಚ್ಚರಿಕೆ ಕೊಡುತ್ತಲೇ ಬಂದಿದ್ದೇನೆ. ಇಷ್ಟೆಲ್ಲಾ ಎಚ್ಚರಿಕೆ ಕೊಟ್ಟರೂ ದೆಹಲಿಯಲ್ಲಿ ನಡೆದ ಇದೊಂದು ಘಟನೆ ದೊಡ್ಡ ದುರಂತವೇ ಸರಿ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


