nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೊರಗುತ್ತಿದೆ ಸುವರ್ಣ ವಿಧಾನ ಸೌಧ, ಇಲಾಖೆಗಳನ್ನು ಸ್ಥಳಾಂತರಿಸುವಲ್ಲಿ ಸರ್ಕಾರ ವಿಫಲ
    ರಾಜ್ಯ ಸುದ್ದಿ November 18, 2022

    ಸೊರಗುತ್ತಿದೆ ಸುವರ್ಣ ವಿಧಾನ ಸೌಧ, ಇಲಾಖೆಗಳನ್ನು ಸ್ಥಳಾಂತರಿಸುವಲ್ಲಿ ಸರ್ಕಾರ ವಿಫಲ

    By adminNovember 18, 2022No Comments3 Mins Read
    belagavi

    ಸುಮಾರು ಒಂದು ದಶಕದ ಹಿಂದೆ ಬರೋಬ್ಬರಿ ಅಂದಾಜು ರೂ.೪೫೦ ಕೋಟಿ ವೆಚ್ಚದಲ್ಲಿ ಅಂದಿನ ಸರ್ಕಾರದ ವತಿಯಿಂದ ನಿರ್ಮಾಣ ಮಾಡಿದಂತಹ ಬೆಳಗಾವಿಯ ಸುವರ್ಣ ವಿಧಾನ ಸೌಧ ಸರ್ಕಾರದ ಬೊಕ್ಕಸದ ಪಾಲಿಗೆ ಒಂದು ಬಿಳಿ ಆನೆ ಆದಂತಾಗಿದೆ. ಏಕೆಂದರೆ ಅಂದಿನಿಂದ ಈವರೆಗೆ ಬಂದು ಹೋಗಿರುವಂತಹ ವಿವಿಧ ಸರ್ಕಾರಗಳು ಸಚಿವಾಲಯ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರಿಸುವಲ್ಲಿ ವಿಫಲವಾಗಿವೆ.

    ರಾಜಕಾರಣಿಗಳ ಆರೋಪವೇನೆಂದರೆ ಇದೊಂದು ಕೇವಲ ಗೋಡೌನ್ ರೀತಿಯಿರುವ ಕಟ್ಟವಾಗಿದ್ದು, ಸಚಿವಾಲಯ ಮಟ್ಟದ ಕಚೇರಿಗಳನ್ನು ಸ್ಥಾಪಿಸುವ ಯಾವುದೇ ಸೂಕ್ತ ಸೌಲಭ್ಯಗಳಿಲ್ಲವಂತೆ. ಜೊತೆಗೆ, ಹಿರಿಯ ಅಧಿಕಾರಿಗಳು ಬೆಳಗಾವಿಗೆ ಸ್ಥಳಂತಾರವಾಗಲು ನಿರಾಕರಿಸುತ್ತಿರುವರಂತೆ. ಅದರೆ ಇದಕ್ಕೆ ತದ್ವಿರುದ್ಧ ಎನ್ನುವಂತೆ ಅಧಿಕಾರಿಗಳ ಆರೋಪವೇನೆಂದರೆ, ರಾಜಕಾರಣಿಗಳಿಗೆ ಅಧಿಕಾರಿಗಳು ಬೆಂಗಳೂರಿನಲ್ಲೇ ಇರಬೇಕು ಎನ್ನುವುದು ಮತ್ತು ವಿವಿಧ ಸಚಿವಾಲಯಗಳ ಮಟ್ಟದ ಕಚೇರಿಗಳನ್ನು ಅಲ್ಲಿಗೆ ಸ್ಥಳಂತಾರಿಸುವಲ್ಲಿ ಇರುವ ರಾಜಕೀಯ ಇಚ್ಛಾಶಕ್ತಿಯ ಕೊರತೆಗಳೇ ಸುವರ್ಣ ವಿಧಾನ ಸೌಧದ ಸಂಪೂರ್ಣ ಬಳಕೆಗೆ ಎದುರಾಗಿರುವ ಮುಖ್ಯ ಕಾರಣಗಳಂತೆ.


    Provided by
    Provided by

    ರಾಜ್ಯ ಸರ್ಕಾರ ಸುವರ್ಣ ವಿಧಾನ ಸೌಧದ ನಿರ್ವಹಣೆಗಾಗಿಯೇ ವಾರ್ಷಿಕ ಬರೋಬ್ಬರಿ ರೂ.೫ ಕೋಟಿ ವೆಚ್ಚ ಮಾಡುತ್ತಿದೆ. ಈ ನಾಲ್ಕು ಅಂತಸ್ತುಗಳ ಕಟ್ಟಡವನ್ನು ೬೦,೩೯೮ ಚದರ ಮಿ.ಗಳ ಪ್ರದೇಶ ವ್ಯಾಪ್ತಿಯಲ್ಲಿ (ಅಂದಾಜು ೧೫,೦೦೦ ಚದರ ಮೀಟರ್, ಅಮದರೆ ವಿಧಾನ ಸೌಧಕ್ಕಿಂತಲೂ ಹೆಚ್ಚಿನ ವಿಸ್ತೀರ್ಣ) ನಿರ್ಮಾಣ ಮಾಡಲಾಗಿದೆ. ಆದರೆ ಕೇವಲ ಚಳಿಗಾಲದ ಅಧಿವೇಶನವನ್ನು ಮಾತ್ರ ನಡೆಸಲು ಮೀಸಲಾಗಿಸಲಾಗಿದೆ. ಈ ಸುವರ್ಣ ವಿಧಾನ ಸೌಧದಲ್ಲಿ ಅಸೆಂಬ್ಲಿ ಹಾಗೂ ಪರಿಷತ್ ಹಾಲ್‌ ಗಳ ಜೊತೆಗೆ, ೩೮ ಸಚಿವಾಲಯ ಚೇಂಬರ್‌ ಗಳು ಹಾಗೂ ೧೪ ಸಮಾವೇಶ ಕೊಠಡಿಗಳಿವೆ.

    ವಿಧಾನ ಪರಿಷತ್ತಿನ ಮಾಜಿ ಅಧ್ಯಕ್ಷ ಬಸವರಾಜ್ ಹೊರಟ್ಟಿ ಅವರ ಪ್ರಕಾರ, ಈ ಸುವರ್ಣ ವಿಧಾನ ಸೌಧವನ್ನು ಥೇಟ್ ವಿಧಾನ ಸೌಧದ ರೀತಿಯಲ್ಲೇ ಅಂದರೆ ಅಲ್ಲಿರುವಂತಹ ಸೌಲಭ್ಯಗಳ ಪ್ರಕಾರವೇ ನಿರ್ಮಾಣ ಮಾಡಬೇಕಿತ್ತು. “ಆದರೆ ಈ ಸುವರ್ಣ ವಿಧಾನ ಸೌಧ ಕೇವಲ ಒಂದು ಗೋಡೌನ್ ರೀತಿ ಕಾಣುತ್ತದೆ. ಇಲ್ಲಿ ಸಚಿವಾಲಯ ಹಾಗೂ ಅಧಿಕಾರಿಗಳಿಗೆ ಅನುಕೂಲವಾಗುವಂತ ಯಾವುದೇ ಸೂಕ್ತ ವ್ಯವಸ್ಥೆಗಳಿಲ್ಲ. ಮೂಲಭೂತಸೌಕರ್ಯಗಳೇ ಇಲ್ಲ,” ಎಂದರು. ಜೊತೆಗೆ, ಮೂಲಸೌಕರ್ಯಗಳ ಕೊರತೆ ಇದೆ ಎನ್ನುವುದು ಹಾಗೂ ಇಲಾಖೆಗಳನ್ನು ಇಲ್ಲಿಗೆ ಸ್ಥಳಾಂತರಿಸುವಲ್ಲಿ ವಿಳಂಬ ನೀತಿಯೇ ಕಾರಣ ಎಂದು ಹಿರಿಯ ಅಧಿಕಾರಿಗಳು ಆರೋಪಿಸುತ್ತಾರೆ.

    ತಮ್ಮ ಗುರುತನ್ನು ಬಹಿರಂಗಗೊಳಿಸಲು ಬಯಸದೇ ಇರುವಂತಹ ಆಡಳಿತ ಪಕ್ಷದ ಕನಿಷ್ಠ ಎರಡು ಎಂಎಲ್‌ ಎಗಳು ಈ ಕಟ್ಟಡ ಬಹಳ ಇಕ್ಕಟ್ಟಾಗಿದ್ದು, ಎಲ್ಲಾ ಇಲಾಖೆಗಳನ್ನೂ ಒಳಗೊಳ್ಳುವಷ್ಟು ಸಾಮರ್ಥ್ಯ ಹೊಂದಿಲ್ಲ ಎಂದರು. ಜೊತೆಗೆ, ಅಧಿವೇಶನಗಳು ನಡೆಯುವಾಗಲೂ ಸಹ ಇಲ್ಲಿ ಸ್ಥಳಾವಕಾಶದ ಕೊರತೆ ಎದುರಾಗುತ್ತದೆ ಎಂದರು.

    “ಇಲ್ಲಿರುವ ಕೊಠಡಿಗಳನ್ನು ಸಚಿವರು ಹಾಗೂ ಅಧಿಕಾರಿಗಳ ಕ್ಯಾಬಿನ್‌ ಗಳಾಗಿ ವಿಭಜಿಸಲು ಆಗುವುದಿಲ್ಲ. ಮೇಲಾಗಿ, ಬೆಂಗಳೂರಿನಲ್ಲಿರುವ ರಾಜ್ಯ ಆಡಳಿತ ಮೂರು ಕಟ್ಟಡಗಳಲ್ಲಿವೆ; ಆದರೆ ಇಲ್ಲಿ ಎಲ್ಲವನ್ನೂ ಕೇವಲ ಒಂದೇ ಕಟ್ಟಡದಲ್ಲಿ ಸೇರಿಸಲಾಗಿದೆ,” ಎನ್ನುವುದು ಎಂಎಲ್‌ ಎಗಳ ಅಭಿಪ್ರಾಯವಾಗಿದೆ.

    ೨೦೨೦ರಲ್ಲಿ ಯಡಿಯೂರಪ್ಪ ಮುಂದಾಳತ್ವದ ಸರ್ಕಾರ ಒಂಬತ್ತು ಸಚಿವಾಲಯ ಮಟ್ಟದ ಕಚೇರಿಗಳನ್ನು ಸುವರ್ಣ ವಿಧಾನ ಸೌಧಕ್ಕೆ ಸ್ಥಳಾಂತರಿಸಲು ಆದೇಶಿಸಿತು. ಆದರೆ ಎರಡು ವರ್ಷಗಳಾದರೂ ಸಹ ಅದು ಇನ್ನೂ ಕಾರ್ಯಗತವಾಗಿಲ್ಲ. ಕೇವಲ ರಾಜ್ಯ ಮಾಹಿತಿ ಆಯೋಗ ಹೊರತುಪಡಿಸಿದರೆ, ಮತ್ಯಾವುದೇ ಇಲಾಖೆ ಬೆಳಗಾವಿಗೆ ಸ್ಥಳಾಂತರಗೊಂಡಿಲ್ಲ.

    ಸುವರ್ಣ ವಿಧಾನ ಸೌಧದ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿರುವ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭೀಮಾ ನಾಯಕ್ ಅವರು ತಿಳಿಸಿದಂತೆ ಪ್ರಸ್ತುತ ಅಲ್ಲಿ ಕೇವಲ ಒಂದೇ ಒಂದು ಸಚಿವಾಲಯ ಮಟ್ಟದ ಕಚೇರಿ ಕಾರ್ಯನಿರ್ವಹಿಸುತ್ತಿದೆ. “ಕಳೆದ ವರ್ಷ ಸರ್ಕಾರ, ಬೆಳಗಾವಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತಹ ೨೬ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರಿಸಿತು. ಆ ಪೈಕಿ ೨೩ ತಾಲ್ಲೂಕು-ಮಟ್ಟದ ಕಚೇರಿಗಳು,” ಎಂದರು.

    ಸರ್ಕಾರದ ಈ ನಿಲುವು ಸ್ಥಳೀಯರ ಕೋಪಕ್ಕೆ ಕಾರಣವಾಗಿದೆ. ಏಕೆಂದರೆ, ಅವರು ಒಂದು ಸಣ್ಣ ಕೆಲಸಕ್ಕೂ ಸಹ ೧೪ ಕಿ.ಮೀ.ಗಳಷ್ಟು ದೂರ ಕ್ರಮಿಸಬೇಕಾಗಿದೆ.

    ವಿಜಯಪುರ ಮೂಲದ ರೈತ ನಾಯಕರಾದ ಜಿ.ಸಿ. ಮುಟ್ಟಲದಿನ್ನಿ ಅವರು ಕೆಬಿಜೆಎನ್‌ ಎಲ್‌ ನ ಸಚಿವಾಲಯ ಕಚೇರಿಯನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಬೇಕೆಂದು ಹೋರಾಟ ನಡೆಸುತ್ತಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬೆಂಗಳೂರಿನಲ್ಲಿ ಏಕಿರಬೇಕು ಎಂದು ಪ್ರಶ್ನಿಸುತ್ತಾರೆ. “ರೈತರು ಹಾಗೂ ಸ್ಥಳೀಯರು ಆಲಮಟ್ಟಿ ಯೋಜನೆಗೆ ಸಂಬಂಧಪಟ್ಟಂತಹ ವಿವಿಧ ಕ್ಲೇಮುಗಳ ಇತ್ಯರ್ಥಕ್ಕೆ ಬೆಂಗಳೂರಿಗೆ ಹೋಗಬೇಕಾಗಿದೆ,” ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ…

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.