nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
    • ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
    • ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
    • ತುಮಕೂರು: ಮತ್ತೆ ಮೂರು ನವಿಲುಗಳು ಸಾವು
    • ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
    • ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
    • ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
    • ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್.ಡಿ.ಕೋಟೆ: ಪುರಸಭೆ ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆತ್ತಿಕೊಂಡ ಸದಸ್ಯರು
    ಜಿಲ್ಲಾ ಸುದ್ದಿ November 19, 2022

    ಹೆಚ್.ಡಿ.ಕೋಟೆ: ಪುರಸಭೆ ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆತ್ತಿಕೊಂಡ ಸದಸ್ಯರು

    By adminNovember 19, 2022No Comments3 Mins Read
    hd kote

    ಹೆಚ್.ಡಿ.ಕೋಟೆ: ಕಳೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಚರ್ಚಿಸಿರುವ ವಿಷಯಗಳ ಬಗ್ಗೆ ನೀಡಿರುವ ಅನು ಪಾಲನ ವರದಿಯನ್ನು ಅಧಿಕಾರಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ನೀಡಿದ್ದಾರೆ. ನಾವು ಹೇಳಿರುವುದು ಒಂದು, ಇಲ್ಲಿ ಬರೆದಿರೋದು ಒಂದು, ಇಲ್ಲಿ ನಡೆದಿರುವುದು ಮತ್ತೊಂದು. ಈ ವಿಷಯ ಸಭೆಯಲ್ಲಿ ತೀರ್ಮಾನವೇ ಆಗಿಲ್ಲ, ಇದರ ಬಗ್ಗೆ ಚರ್ಚೆ ಆಗಿಲ್ಲ ಹೇಗ್ರಿ ಅನುಪಾಲನ ವರದಿ ನೀಡಿದ್ದೀರಿ? ಎಂದು ಪುರಸಭೆ ಸದಸ್ಯರು ಒಬ್ಬರ ಮೇಲೆ ಒಬ್ಬರಂತೆ ಪುರಸಭೆ ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡ ಘಟನೆಗೆ ಇಂದಿನ ಸಭೆ ಸಾಕ್ಷಿ ಆಯಿತು.

    ಪಟ್ಟಣದ ಪುರಸಭೆ ದಿವಂಗತ ಎಸ್.ಚಿಕ್ಕಮಾಧು ಸಭಾಂಗಣದಲ್ಲಿ ಶುಕ್ರವಾರ ಪುರಸಭೆ ಅಧ್ಯಕ್ಷ ಅನಿತಾ ನಿಂಗನಾಯಕ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.


    Provided by
    Provided by

    ಸಭೆ ಪ್ರಾರಂಭವಾಗುತ್ತಿದ್ದಂತೆ ಮುಂದೂಡಿದ ಸಾಮಾನ್ಯ ಸಭೆ ನಡಾವಳಿಯ ಅನುಪಾಲನ ವರದಿಯಲ್ಲಿ ಸದಸ್ಯರು ಚರ್ಚಿಸಿದ್ದ ವಿಷಯಗಳನ್ನು ಕೈ ಬಿಟ್ಟಿರುವುದು ಹಾಗೂ ಅಧಿಕಾರಿಗಳು ತಮಗೆ ಇಷ್ಟ ಬಂದಂತೆ ಅನು ಪಾಲನಾ ವರದಿ ನೀಡಿರುವುದಕ್ಕೆ ಗರಂ ಅದ ಸದಸ್ಯರು ಮುಖ್ಯ ಅಧಿಕಾರಿ ಸುರೇಶ್ ಸೇರಿದಂತೆ ಪುರಸಭೆ ಅಧಿಕಾರಿಗಳ ಮೇಲೆ ಮುಗಿಬಿದ್ದರು.

    ಈ ವೇಳೆ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಲು ಮುಂದಾದ ಮುಖ್ಯ ಅಧಿಕಾರಿ ಸುರೇಶ್ ಅವರನ್ನು ಸದಸ್ಯ ಮಿಲ್ ನಾಗರಾಜು.  “ಏನ್ರೀ ಮುಖ್ಯ ಅಧಿಕಾರಿಗಳೇ ಕಳೆದ ಸಭೆಯಲ್ಲಿ ಶಾಸಕರು ಮತ್ತು ಸದಸ್ಯರು ಮಾತನಾಡಿದ ವಿಷಯಗಳು ಎಲ್ಲಿ? ಏರು ಧ್ವನಿಯಲ್ಲಿ ಪ್ರಶ್ನಿಸಿದರು.  ಪುರಸಭೆಯಲ್ಲಿ ನೀವು ಏನು ಮಾಡುತ್ತಿದ್ದೀರಾ ಗೊತ್ತಿದೆ, ಸ್ಟೇಷನರಿ ಮತ್ತು ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿ ಹೆಸರಲ್ಲಿ ಬೇಕಾಬಿಟ್ಟಿ ಹಣ ಖರ್ಚು ಮಾಡಿ ಬಡ ಜನರು ಪುರಸಭೆಗೆ ಕಟ್ಟುತ್ತಿರುವ ತೆರಿಗೆ ಹಣ ಪೋಲಾಗುತ್ತಿದೆ ಇಂದು ಆಕ್ರೋಶ ವ್ಯಕ್ತಪಡಿಸಿದರು.

    ಸದಸ್ಯ ಪ್ರೇಮ್ ಕುಮಾರ್ ಮಾತನಾಡಿ, ನಾನು ಕಳೆದ ಸಭೆಯಲ್ಲಿ ಮಾತನಾಡಿದ ಸ್ಮಶಾನದ ದುರಸ್ತಿ ಕೆಲಸ ಯಾಕೆ ಮಾಡಿಲ್ಲ? ಜನರು ಶವ ಸಂಸ್ಕಾರ ಮಾಡಲು ಹೆಣಗಾಡುತ್ತಿದ್ದಾರೆ. ನಿಮ್ಮ ಮನೆಯಲ್ಲಿ ಯಾರಾದ್ರೂ ತೀರಿ ಹೋದರೆ ಗೊತ್ತಾಗುತ್ತೆ, ಕೆಲಸ ಮಾಡಲು ಆಗದಿದ್ದರೆ ನಿಮ್ಮ ಮನೆಯಲ್ಲಿ ಇರಿ ಇಲ್ಲಿ ಯಾಕೆ ಬಂದು ಕೆಲಸ ಮಾಡದೆ ಕಾಲಹರಣ ಮಾಡಿ ನಮ್ಮನ್ನು ಜನರಿಂದ ಬೈಸುತ್ತೀರಾ? ಬೀದಿ ದೀಪ ಅಳವಡಿಸಲು 15 ದಿನ ಬೇಕೆನ್ರಿ? ಇಂದು ಇಂಜಿನಿಯರ್ ಅವರನ್ನು ತರಾಟೆ ತೆಗೆದುಕೊಂಡು ಅಧ್ಯಕ್ಷರೇ ನೀವೇ ಬಂದು ನೋಡಿ ನಮ್ಮ ವಾರ್ಡ್ ಸಮಸ್ಯೆ ಎಂದು ಕಿಡಿಕಾರಿದರು.

    2 ವರ್ಷದಲ್ಲಿ ಭ್ರಷ್ಟಾಚಾರ ಬಿಟ್ರೆ ನಿಮ್ಮಿಂದ ಏನು ಆಗಿಲ್ಲ.!, ಸದಸ್ಯ ಆರೋಪ.?,

    ಈ ಮಧ್ಯೆ ಸದಸ್ಯ ಆಸಿಫ್ ಇಕ್ಬಾಲ್ ಎದ್ದು ನಿಂತು ನಮ್ಮ ಪುರಸಭೆ ಅಧಿಕಾರಿಗಳು ಕಳೆದ ಎರಡು ವರ್ಷದಲ್ಲಿ ಭ್ರಷ್ಟಾಚಾರ ಬಿಟ್ರೆ ಯಾವ ಅಭಿವೃದ್ಧಿನೂ ಮಾಡಿಲ್ಲ ಎಂದು ಸಿಟ್ಟು ಹೊರ ಹಾಕಿದರು.

    ಶುಂಠಿ ಶುದ್ದಿಕರಣ ಘಟಕ ಮುಚ್ಚಿಸಲು ಮೀನಾ ಮೇಷ ಯಾಕೆ.?,

    ಕಳೆದ ಎರಡು ವರ್ಷದಿಂದಲೂ ಎಲ್ಲಾ ಸಾಮಾನ್ಯ ಸಭೆಗಳಲ್ಲಿ ಸದಸ್ಯರುಗಳು ವ್ಯಾಪ್ತಿಯಲ್ಲಿ ಅಕ್ರಮವಾಗಿ ತಲೆಯೆತ್ತಿರುವ ಶುಂಠಿ ಶುದ್ದಿಕರಣ ಘಟಕಗಳನ್ನು ಮುಚ್ಚಿಸುವಂತೆ ಹೇಳುತ್ತಿದ್ದರು ಅಧಿಕಾರಿಗಳಾದ ನೀವು ಯಾಕೆ ಮುಚ್ಚಿಸಿಲ್ಲ ಎಂದು ಹಲವು ಸದಸ್ಯರು ಮುಖ್ಯ ಅಧಿಕಾರಿಯನ್ನು ಪ್ರಶ್ನಿಸಿದರು, ಇದಕ್ಕುತ್ತರಿಸಿದ ಮುಖ್ಯ ಅಧಿಕಾರಿ ಸುರೇಶ್ ಒಂದು ಘಟಕ ಹೊರತುಪಡಿಸಿ ಇನ್ನು ನಾಲ್ಕು ಘಟಕಗಳು ಕಂದಾಯ ಭೂಮಿಯಲ್ಲಿ ಇರುವುದರಿಂದ ನಮಗೆ ಬರುವುದಿಲ್ಲ ಎಂದು ಹೇಳಿದ್ದಕ್ಕೆ, ಕೆಂಡಮಂಡಲರಾದ ಸದಸ್ಯರು ಮತ್ತೆ ನೀ ಹೆಂಗಪ್ಪ ವಿದ್ಯುತ್ ಸಂಪರ್ಕಕ್ಕೆ ಎನ್ ಓಸಿ ಕೊಟ್ಟೆ ಎಂದು ಬೆವರಿಳಿಸಿದ ಸದಸ್ಯರು ಈ ವಿಚಾರವಾಗಿ ಅಧ್ಯಕ್ಷೆ ಅನಿತಾ ನಿಂಗನಾಯ್ಕ ಅವರನ್ನು ತರಾಟೆ ತೆಗೆದುಕೊಂಡ ಘಟನೆ ನಡೆಯಿತು, ಶೀಘ್ರದಲ್ಲೇ ಅಕ್ರಮವಾಗಿ ತಲೆಯೆತ್ತಿರುವ ಶುಂಠಿ ಶುದ್ದಿಕರಣ ಘಟಕ ಮುಚ್ಚಿಸಲು ಅಧ್ಯಕ್ಷೆ ಅನಿತಾ ನಿಂಗನಾಯಕ ಮುಖ್ಯ ಅಧಿಕಾರಿ ಸುರೇಶ್ ಅವರಿಗೆ ಸೂಚಿಸಿದರು.

    ಸಭೆಯಲ್ಲಿ ಉಪಾಧ್ಯಕ್ಷೆ ಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯರಾದ ಎಚ್.ಸಿ.ನರಸಿಂಹಮೂರ್ತಿ, ಪುಟ್ಟಬಸವ ನಾಯಕ, ಎಚ್.ವೈ.ಹರೀಶ್ ಗೌಡ, ಮಿಲ್ ನಾಗರಾಜು, ನಂಜಪ್ಪ, ಪ್ರೇಮ್ ಕುಮಾರ್, ಸೋಮಶೇಖರ್, ಶಾಂತಿಪುರ ಲೋಕೇಶ್, ಮಧು, ಆಸಿಫ್, ದರ್ಶಿನಿ, ಸರೋಜಮ್ಮ, ಶಿವಮ್ಮ, ನಂದಿನಿ, ಕವಿತಾ, ಶಾಂತಮ್ಮ, ನಾಗಮ್ಮ, ಕೆ.ಎಲ್. ಸುಹಾಸಿನಿ, ನಾಮನಿರ್ದೇಶನ ಸದಸ್ಯರಾದ ಕೆ.ಎನ್. ಮಹೇಶ್, ಸಿದ್ದರಾಜು, ಜೆ.ಸಿ.ಸಂತೋಷ್, ಜಿ.ಲೋಕೇಶ್, ಪುರಸಭೆ ಮುಖ್ಯ ಅಧಿಕಾರಿ ಸುರೇಶ್, ವ್ಯವಸ್ಥಾಪಕಿ ರೇಷ್ಮಾ, ಅಧಿಕಾರಿಗಳಾದ ರಘು, ಹರೀಶ್, ಪರಮೇಶ್, ಸಂತೋಷ್, ಕಿರಿಯ ಇಂಜಿನಿಯರ್ ಸುರೇಶ್ ಸೇರಿದಂತೆ ಇನ್ನಿತರರು ಇದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ

    May 5, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    May 2, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ತುಮಕೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯ ಜಿಯೋ ಸ್ಕ್ಯಾನಿಂಗ್ ಸೆಂಟರ್ ಮುಂಭಾಗ 35 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ನಿಸ್ತ್ರಾಣವಾಗಿ ಬಿದ್ದಿದ್ದು,…

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ತುಮಕೂರು: ಮತ್ತೆ ಮೂರು ನವಿಲುಗಳು ಸಾವು

    May 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.