nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್.ಡಿ.ಕೋಟೆ: ಪುರಸಭೆ ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆತ್ತಿಕೊಂಡ ಸದಸ್ಯರು
    ಜಿಲ್ಲಾ ಸುದ್ದಿ November 19, 2022

    ಹೆಚ್.ಡಿ.ಕೋಟೆ: ಪುರಸಭೆ ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆತ್ತಿಕೊಂಡ ಸದಸ್ಯರು

    By adminNovember 19, 2022No Comments3 Mins Read
    hd kote

    ಹೆಚ್.ಡಿ.ಕೋಟೆ: ಕಳೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಚರ್ಚಿಸಿರುವ ವಿಷಯಗಳ ಬಗ್ಗೆ ನೀಡಿರುವ ಅನು ಪಾಲನ ವರದಿಯನ್ನು ಅಧಿಕಾರಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ನೀಡಿದ್ದಾರೆ. ನಾವು ಹೇಳಿರುವುದು ಒಂದು, ಇಲ್ಲಿ ಬರೆದಿರೋದು ಒಂದು, ಇಲ್ಲಿ ನಡೆದಿರುವುದು ಮತ್ತೊಂದು. ಈ ವಿಷಯ ಸಭೆಯಲ್ಲಿ ತೀರ್ಮಾನವೇ ಆಗಿಲ್ಲ, ಇದರ ಬಗ್ಗೆ ಚರ್ಚೆ ಆಗಿಲ್ಲ ಹೇಗ್ರಿ ಅನುಪಾಲನ ವರದಿ ನೀಡಿದ್ದೀರಿ? ಎಂದು ಪುರಸಭೆ ಸದಸ್ಯರು ಒಬ್ಬರ ಮೇಲೆ ಒಬ್ಬರಂತೆ ಪುರಸಭೆ ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡ ಘಟನೆಗೆ ಇಂದಿನ ಸಭೆ ಸಾಕ್ಷಿ ಆಯಿತು.

    ಪಟ್ಟಣದ ಪುರಸಭೆ ದಿವಂಗತ ಎಸ್.ಚಿಕ್ಕಮಾಧು ಸಭಾಂಗಣದಲ್ಲಿ ಶುಕ್ರವಾರ ಪುರಸಭೆ ಅಧ್ಯಕ್ಷ ಅನಿತಾ ನಿಂಗನಾಯಕ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.

    ಸಭೆ ಪ್ರಾರಂಭವಾಗುತ್ತಿದ್ದಂತೆ ಮುಂದೂಡಿದ ಸಾಮಾನ್ಯ ಸಭೆ ನಡಾವಳಿಯ ಅನುಪಾಲನ ವರದಿಯಲ್ಲಿ ಸದಸ್ಯರು ಚರ್ಚಿಸಿದ್ದ ವಿಷಯಗಳನ್ನು ಕೈ ಬಿಟ್ಟಿರುವುದು ಹಾಗೂ ಅಧಿಕಾರಿಗಳು ತಮಗೆ ಇಷ್ಟ ಬಂದಂತೆ ಅನು ಪಾಲನಾ ವರದಿ ನೀಡಿರುವುದಕ್ಕೆ ಗರಂ ಅದ ಸದಸ್ಯರು ಮುಖ್ಯ ಅಧಿಕಾರಿ ಸುರೇಶ್ ಸೇರಿದಂತೆ ಪುರಸಭೆ ಅಧಿಕಾರಿಗಳ ಮೇಲೆ ಮುಗಿಬಿದ್ದರು.

    ಈ ವೇಳೆ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಲು ಮುಂದಾದ ಮುಖ್ಯ ಅಧಿಕಾರಿ ಸುರೇಶ್ ಅವರನ್ನು ಸದಸ್ಯ ಮಿಲ್ ನಾಗರಾಜು.  “ಏನ್ರೀ ಮುಖ್ಯ ಅಧಿಕಾರಿಗಳೇ ಕಳೆದ ಸಭೆಯಲ್ಲಿ ಶಾಸಕರು ಮತ್ತು ಸದಸ್ಯರು ಮಾತನಾಡಿದ ವಿಷಯಗಳು ಎಲ್ಲಿ? ಏರು ಧ್ವನಿಯಲ್ಲಿ ಪ್ರಶ್ನಿಸಿದರು.  ಪುರಸಭೆಯಲ್ಲಿ ನೀವು ಏನು ಮಾಡುತ್ತಿದ್ದೀರಾ ಗೊತ್ತಿದೆ, ಸ್ಟೇಷನರಿ ಮತ್ತು ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿ ಹೆಸರಲ್ಲಿ ಬೇಕಾಬಿಟ್ಟಿ ಹಣ ಖರ್ಚು ಮಾಡಿ ಬಡ ಜನರು ಪುರಸಭೆಗೆ ಕಟ್ಟುತ್ತಿರುವ ತೆರಿಗೆ ಹಣ ಪೋಲಾಗುತ್ತಿದೆ ಇಂದು ಆಕ್ರೋಶ ವ್ಯಕ್ತಪಡಿಸಿದರು.

    ಸದಸ್ಯ ಪ್ರೇಮ್ ಕುಮಾರ್ ಮಾತನಾಡಿ, ನಾನು ಕಳೆದ ಸಭೆಯಲ್ಲಿ ಮಾತನಾಡಿದ ಸ್ಮಶಾನದ ದುರಸ್ತಿ ಕೆಲಸ ಯಾಕೆ ಮಾಡಿಲ್ಲ? ಜನರು ಶವ ಸಂಸ್ಕಾರ ಮಾಡಲು ಹೆಣಗಾಡುತ್ತಿದ್ದಾರೆ. ನಿಮ್ಮ ಮನೆಯಲ್ಲಿ ಯಾರಾದ್ರೂ ತೀರಿ ಹೋದರೆ ಗೊತ್ತಾಗುತ್ತೆ, ಕೆಲಸ ಮಾಡಲು ಆಗದಿದ್ದರೆ ನಿಮ್ಮ ಮನೆಯಲ್ಲಿ ಇರಿ ಇಲ್ಲಿ ಯಾಕೆ ಬಂದು ಕೆಲಸ ಮಾಡದೆ ಕಾಲಹರಣ ಮಾಡಿ ನಮ್ಮನ್ನು ಜನರಿಂದ ಬೈಸುತ್ತೀರಾ? ಬೀದಿ ದೀಪ ಅಳವಡಿಸಲು 15 ದಿನ ಬೇಕೆನ್ರಿ? ಇಂದು ಇಂಜಿನಿಯರ್ ಅವರನ್ನು ತರಾಟೆ ತೆಗೆದುಕೊಂಡು ಅಧ್ಯಕ್ಷರೇ ನೀವೇ ಬಂದು ನೋಡಿ ನಮ್ಮ ವಾರ್ಡ್ ಸಮಸ್ಯೆ ಎಂದು ಕಿಡಿಕಾರಿದರು.

    2 ವರ್ಷದಲ್ಲಿ ಭ್ರಷ್ಟಾಚಾರ ಬಿಟ್ರೆ ನಿಮ್ಮಿಂದ ಏನು ಆಗಿಲ್ಲ.!, ಸದಸ್ಯ ಆರೋಪ.?,

    ಈ ಮಧ್ಯೆ ಸದಸ್ಯ ಆಸಿಫ್ ಇಕ್ಬಾಲ್ ಎದ್ದು ನಿಂತು ನಮ್ಮ ಪುರಸಭೆ ಅಧಿಕಾರಿಗಳು ಕಳೆದ ಎರಡು ವರ್ಷದಲ್ಲಿ ಭ್ರಷ್ಟಾಚಾರ ಬಿಟ್ರೆ ಯಾವ ಅಭಿವೃದ್ಧಿನೂ ಮಾಡಿಲ್ಲ ಎಂದು ಸಿಟ್ಟು ಹೊರ ಹಾಕಿದರು.

    ಶುಂಠಿ ಶುದ್ದಿಕರಣ ಘಟಕ ಮುಚ್ಚಿಸಲು ಮೀನಾ ಮೇಷ ಯಾಕೆ.?,

    ಕಳೆದ ಎರಡು ವರ್ಷದಿಂದಲೂ ಎಲ್ಲಾ ಸಾಮಾನ್ಯ ಸಭೆಗಳಲ್ಲಿ ಸದಸ್ಯರುಗಳು ವ್ಯಾಪ್ತಿಯಲ್ಲಿ ಅಕ್ರಮವಾಗಿ ತಲೆಯೆತ್ತಿರುವ ಶುಂಠಿ ಶುದ್ದಿಕರಣ ಘಟಕಗಳನ್ನು ಮುಚ್ಚಿಸುವಂತೆ ಹೇಳುತ್ತಿದ್ದರು ಅಧಿಕಾರಿಗಳಾದ ನೀವು ಯಾಕೆ ಮುಚ್ಚಿಸಿಲ್ಲ ಎಂದು ಹಲವು ಸದಸ್ಯರು ಮುಖ್ಯ ಅಧಿಕಾರಿಯನ್ನು ಪ್ರಶ್ನಿಸಿದರು, ಇದಕ್ಕುತ್ತರಿಸಿದ ಮುಖ್ಯ ಅಧಿಕಾರಿ ಸುರೇಶ್ ಒಂದು ಘಟಕ ಹೊರತುಪಡಿಸಿ ಇನ್ನು ನಾಲ್ಕು ಘಟಕಗಳು ಕಂದಾಯ ಭೂಮಿಯಲ್ಲಿ ಇರುವುದರಿಂದ ನಮಗೆ ಬರುವುದಿಲ್ಲ ಎಂದು ಹೇಳಿದ್ದಕ್ಕೆ, ಕೆಂಡಮಂಡಲರಾದ ಸದಸ್ಯರು ಮತ್ತೆ ನೀ ಹೆಂಗಪ್ಪ ವಿದ್ಯುತ್ ಸಂಪರ್ಕಕ್ಕೆ ಎನ್ ಓಸಿ ಕೊಟ್ಟೆ ಎಂದು ಬೆವರಿಳಿಸಿದ ಸದಸ್ಯರು ಈ ವಿಚಾರವಾಗಿ ಅಧ್ಯಕ್ಷೆ ಅನಿತಾ ನಿಂಗನಾಯ್ಕ ಅವರನ್ನು ತರಾಟೆ ತೆಗೆದುಕೊಂಡ ಘಟನೆ ನಡೆಯಿತು, ಶೀಘ್ರದಲ್ಲೇ ಅಕ್ರಮವಾಗಿ ತಲೆಯೆತ್ತಿರುವ ಶುಂಠಿ ಶುದ್ದಿಕರಣ ಘಟಕ ಮುಚ್ಚಿಸಲು ಅಧ್ಯಕ್ಷೆ ಅನಿತಾ ನಿಂಗನಾಯಕ ಮುಖ್ಯ ಅಧಿಕಾರಿ ಸುರೇಶ್ ಅವರಿಗೆ ಸೂಚಿಸಿದರು.

    ಸಭೆಯಲ್ಲಿ ಉಪಾಧ್ಯಕ್ಷೆ ಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯರಾದ ಎಚ್.ಸಿ.ನರಸಿಂಹಮೂರ್ತಿ, ಪುಟ್ಟಬಸವ ನಾಯಕ, ಎಚ್.ವೈ.ಹರೀಶ್ ಗೌಡ, ಮಿಲ್ ನಾಗರಾಜು, ನಂಜಪ್ಪ, ಪ್ರೇಮ್ ಕುಮಾರ್, ಸೋಮಶೇಖರ್, ಶಾಂತಿಪುರ ಲೋಕೇಶ್, ಮಧು, ಆಸಿಫ್, ದರ್ಶಿನಿ, ಸರೋಜಮ್ಮ, ಶಿವಮ್ಮ, ನಂದಿನಿ, ಕವಿತಾ, ಶಾಂತಮ್ಮ, ನಾಗಮ್ಮ, ಕೆ.ಎಲ್. ಸುಹಾಸಿನಿ, ನಾಮನಿರ್ದೇಶನ ಸದಸ್ಯರಾದ ಕೆ.ಎನ್. ಮಹೇಶ್, ಸಿದ್ದರಾಜು, ಜೆ.ಸಿ.ಸಂತೋಷ್, ಜಿ.ಲೋಕೇಶ್, ಪುರಸಭೆ ಮುಖ್ಯ ಅಧಿಕಾರಿ ಸುರೇಶ್, ವ್ಯವಸ್ಥಾಪಕಿ ರೇಷ್ಮಾ, ಅಧಿಕಾರಿಗಳಾದ ರಘು, ಹರೀಶ್, ಪರಮೇಶ್, ಸಂತೋಷ್, ಕಿರಿಯ ಇಂಜಿನಿಯರ್ ಸುರೇಶ್ ಸೇರಿದಂತೆ ಇನ್ನಿತರರು ಇದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.