nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    • ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
    • ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೃತೀಯ ಲಿಂಗ ಮೀಸಲಾತಿಯಲ್ಲಿ ಪ್ರಾಥಮಿಕ ಶಾಲೆ ಶಿಕ್ಷಕಿಯಾಗಿ ಅಶ್ವಥಾಮ ( ಪೂಜಾ ) ನೀರಮಾನವಿ ಆಯ್ಕೆ
    ರಾಜ್ಯ ಸುದ್ದಿ November 21, 2022

    ತೃತೀಯ ಲಿಂಗ ಮೀಸಲಾತಿಯಲ್ಲಿ ಪ್ರಾಥಮಿಕ ಶಾಲೆ ಶಿಕ್ಷಕಿಯಾಗಿ ಅಶ್ವಥಾಮ ( ಪೂಜಾ ) ನೀರಮಾನವಿ ಆಯ್ಕೆ

    By adminNovember 21, 2022No Comments2 Mins Read
    pooja
    • ವಿಶೇಷ ವರದಿ : ಚಂದ್ರಶೇಖರ ಮದ್ಲಾಪೂರ

    ಮಾನವಿ: ತಾಲೂಕಿನ ನೀರಮಾನವಿ ಗ್ರಾಮದ ಅಶ್ವಥಾಮ ( ಪೂಜಾ ) ತಂದೆ ಮಾರೆಪ್ಪ ಇವರು ತೃತೀಯ ಲಿಂಗ ಮೀಸಲಾತಿಯನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ರಾಜ್ಯ ಶಿಕ್ಷಣ ಮಾರ್ಚ್ ತಿಂಗಳಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಧಿಕೃತ ತೃತೀಯ ಲಿಂಗ ಮೀಸಲಾತಿಯಲ್ಲಿ ಪರೀಕ್ಷೆ ಬರೆದು ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ಆಯ್ಕೆಯಾಗಿದ್ದು, ನೀರಮಾನವಿ ಗ್ರಾಮದ ಜನರು ಹರ್ಷ ವ್ಯಕ್ತಪಡಿಸಿದರು.

    ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನೀರಮಾನವಿ ಗ್ರಾಮದಲ್ಲಿ ಜನಿಸಿದ ಇವರು, 1 ರಿಂದ 10ನೇ ತರಗತಿಯವರೆಗೆ ನೀರಮಾನವಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದರು. ನಂತರ ಮಾನವಿ ಪಟ್ಟಣದಲ್ಲಿ ಪದವಿ ಪೂರ್ವ, ಪದವಿಯನ್ನು ಪೂರ್ಣಗೊಳಿಸಿದ ಇವರು, ರಾಯಚೂರಿನ ಸರ್ವೋದಯ ಕಾಲೇಜಿನಲ್ಲಿ ಬಿ ಇ ಎಡ್ ಪೂರ್ಣಗೊಳಿಸಿ ಇಂದು ತೃತೀಯ ಲಿಂಗಿಯ ಮೀಸಲಾತಿಯಲ್ಲಿ ರಾಜ್ಯದ ಮೂರು ಜನರಲ್ಲಿ ಇವರೊಬ್ಬರಾಗಿ ಆಯ್ಕೆಯಾಗಿ ತಮ್ಮ ಜೀವನದ ಗುರಿಯನ್ನು ತಲುಪಿ ಎಲ್ಲರಲ್ಲೂ ಅಚ್ಚರಿಯುಟ್ಟು ಮಾಡಿದ್ದಾರೆ.


    Provided by
    Provided by

    ಈ ಬಗ್ಗೆ ಅವರ ಜೊತೆಗೆ ನಡೆಸಿದ ಚಿಕ್ಕ ಸಂದರ್ಶನದಲ್ಲಿ ಮಾತನಾಡಿದ ಅವರು,  ನಾನು ಹುಟ್ಟಿನಿಂದ ಗಂಡಸಿನ ದೇಹವಿದ್ದರೂ ಹೆಣ್ಣಿನ ಮನೋಭಾವದೊಂದಿಗೆ ಬೆಳೆದವ. ಪ್ರಾಥಮಿಕ ಶಿಕ್ಷಣದಿಂದ M.A bed ವಿದ್ಯಾಭ್ಯಾಸ ಮುಗಿಯುವವರೆಗೂ ನಮ್ಮೂರಿನ ಸರ್ಕಾರಿ ಶಾಲೆ ಹಾಗೂ ಮಾನವಿ ರಾಯಚೂರು ಸಿಂಧನೂರಿನಲ್ಲಿಯೇ ಓದಿದ್ದು. ನಂತರ ಹೆಣ್ಣಿನ ಭಾವನೆಯನ್ನು ಹೊಂದಿರುವ ನಾನು ಎಲ್ಲರಂತೆಯೇ ಕುಟುಂಬದ ವಿರೋಧವನ್ನು ಎದುರಿಸಿ, ಕನಿಷ್ಠ 7 ವರ್ಷಗಳ ಕಾಲ ಅಜ್ಞಾತ ದಿನಗಳನ್ನು ಅನುಭವಿಸಿದೆ. ನಂತರ ನಮ್ಮ ಕುಟುಂಬದವರು ಪ್ರೀತಿ ವಿಶ್ವಾಸ ನಂಬಿಕೆಯೊಂದಿಗೆ ಮನೆಗೆ ಆಗಮಿಸಿದ ನಾನು ಶಿಕ್ಷಣವನ್ನು ಮುಂದುವರೆಸಿದೆ ಎಂದರು.

    ಇಂದಿನ ಸುಪ್ರೀಂ ಕೋರ್ಟ್ ಆದೇಶದಂತೆ ನಮ್ಮ ಸಮುದಾಯಕ್ಕೆ ಶೇಕಡಾ 1% ರಷ್ಟು ನೀಡಿದ ಮೀಸಲಾತಿಯನ್ನು ಸದ್ಬಳಕೆ ಮಾಡಿಕೊಳ್ಳಲೇಬೇಕು ಎನ್ನುವ ದೃಢ ಮನಸ್ಸಿನಿಂದ ಪ್ರಾಥಮಿಕ ಶಾಲೆ ಶಿಕ್ಷಕರ ಪರೀಕ್ಷೆಗಾಗಿ ಹಗಲಿರುಳು ಓದುವುದಕ್ಕೆ ಆರಂಭ ಮಾಡಿ, ಇಂದು ಅದೇ ಮೀಸಲಾತಿಯಲ್ಲಿ 6-8ನೇ ತರಗತಿಯ ಶಿಕ್ಷಕಿಯಾಗಿ ಆಯ್ಕೆಯಾಗಿದ್ದು ತುಂಬಾ ಸಂತೋಷದ ವಿಷಯವಾಗಿದೆ. ಇದಕ್ಕೆ ಸಹಕಾರ ಮಾಡಿದ ಕುಟುಂಬದವರಿಗೆ, ನಮ್ಮ ಮಂಗಳಮುಖಿ ಸಮುದಾಯದವರಿಗೆ, ನನಗೆ ಶಿಕ್ಷಣ ನೀಡಿದ ಶಿಕ್ಷಕರಿಗೆ, ನಮ್ಮೂರಿನ ಜನರಿಗೆ ಬಹಳ ಪ್ರಮುಖವಾಗಿ ನನ್ನ ಏಳಿಗೆಯನ್ನು ಕಂಡು ಪ್ರೋತ್ಸಾಹ ನೀಡಿ ಬೆಂಬಲಿಸುತ್ತಿರುವ ರಾಜ್ಯದ ಎಲ್ಲ ಹಿರಿಯರಿಗೆ, ಬಹಳ ಪ್ರಮುಖವಾಗಿ ನನ್ನ ಸಾಧನೆಯನ್ನು ಗುರುತಿಸಿ ಮೊಟ್ಟಮೊದಲ ಮೊದಲ ಬಾರಿಗೆ ಪತ್ರಿಕೆಯಲ್ಲಿ ಪ್ರಕಟಿಸಿದ ನನ್ನ ಸ್ನೇಹಿತ ಹಾಗೂ ಆತ್ಮೀಯ ಅಣ್ಣನಾದ ಚಂದ್ರಶೇಖರ ಮದ್ಲಾಪೂರ  ಇವರಿಗೆ ಹೃದಯ ಪೂರ್ವಕವಾದ ಧನ್ಯವಾದಗಳು ನಿಮ್ಮ ಪ್ರೋತ್ಸಾಹ ಸದಾಕಾಲವೂ ಇದ್ದಲ್ಲಿ ಶಿಕ್ಷಕ ವೃತ್ತಿಯಲ್ಲಿ ಮುಂದುವರೆದು ಮಾದರಿಯಾಗುವ ಗುರಿಯನ್ನು ಹೊಂದಿದ್ದು ಇನ್ನೂ ಉನ್ನತ ಹುದ್ದೆಗಾಗಿ ಪ್ರಯತ್ನ ಮಾಡುತ್ತೇನೆ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಸರಗೂರು:   ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್…

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.