ಬೆಂಗಳೂರು/ನೆಲಮಂಗಲ : ಕರ್ನಾಟಕ ರಣಧೀರರ ವೇದಿಕೆ ರಾಜ್ಯ ಸಮಿತಿ ವತಿಯಿಂದ ನವೆಂಬರ್ 29ರಂದು ಮೂರನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ಶ್ರೀ ಭುವನೇಶ್ವರಿ ಹಬ್ಬ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ ಸಮಾರಂಭ ಮತ್ತು ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜರುಗಲಿದೆ.
ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಪವಾಡ ಶ್ರೀ ಬಸವಣ್ಣ ದೇವರ ಮಠ ನೆಲಮಂಗಲದ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ರವರು ಮತ್ತು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರು ಉದ್ಘಾಟನೆ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಟ ವಿನೋದ್ ರಾಜ್, ನಿವೃತ್ತ ಪ್ರಸ್ತುತಿ ತಜ್ಞರಾದ ಡಾಕ್ಟರ್ ಚೌಡಯ್ಯ, ಅಗ್ನಿಶಾಮಕ ದಳ ನೆಲಮಂಗಲ ನಿರೀಕ್ಷಕರಾದ ಸಿದ್ದಪ್ಪ, ರಾಣಿ ಚೆನ್ನಮ್ಮ ದೇವಿ ಬಿರುದಂಕಿತರು ಹಾಗೂ ಖ್ಯಾತ ನಟಿ ಹಿರಿಯ ಕಲಾವಿದರಾದ ಡಾ.ಲೀಲಾವತಿರವರಿಗೆ, ಕನ್ನಡ ಚಳುವಳಿ ರಣವಿಕ್ರಮ ಬಿರುದಂಕಿತರಾದ ಎಂ. ಲಿಂಗರಾಜುರಿಗೆ, ಶ್ರೀ ಕ್ಷೇತ್ರ ಮಧುರೆ ಧರ್ಮದರ್ಶಿಗಳಾದ ಗಂಗಣ್ಣ, ಕನ್ನಡ ಚಳುವಳಿ ಕೇಸರಿ ಬಿರುದಂಕಿತರಾದ ಗಣೇಶ್ ಗೌಡ, ಚಳುವಳಿಯ ಕಲಿ ಬಿರು ದಂಕಿತರದ ಅಭಿ ಗೌಡ ಮತ್ತು ವೆಂಕಟೇಶ್ ಆರ್. ಶೆಟ್ಟಿ ಇವರುಗಳಿಗೆ ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು.
ಈ ಕಾರ್ಯಕ್ರಮವು ಇಂದು ಬೆಳಗ್ಗೆ 11:00 ಗಂಟೆಗೆ ಶ್ರೀ ಕ್ಷೇತ್ರ ಪವಾಡ ಶ್ರೀ ಬಸವಣ್ಣ ದೇವರ ಮಠದ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್. ಶಂಕರ್ ಗೌಡ್ರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz