ಹೆಚ್.ಡಿ.ಕೋಟೆ: ಆರೋಗ್ಯಾಧಿಕಾರಿ ಡಾ. ಟಿ.ರವಿಕುಮಾರ್ ಮತ್ತು ತಂಡದವರು ಹೆಚ್.ಡಿ.ಕೋಟೆ ವ್ಯಾಪ್ತಿಗೆ ಬರುವ ಯರಹಳ್ಳಿ ಗ್ರಾಮದಲ್ಲಿ ಲಾರ್ವ ಸಮೀಕ್ಷೆಯನ್ನು ಅಡ್ದ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ರವಿಕುಮಾರ್ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಂದ ಪ್ರತಿ ಶುಕ್ರವಾರ ಮತ್ತು ಪ್ರತಿ ಮಂಗಳವಾರ ಹೆಚ್.ಡಿ.ಕೋಟೆ ಮತ್ತು ಹ್ಯಾಂಡ್ ಪೋಸ್ಟ್ ಟೌನ್ ನಲ್ಲಿ ಲಾರ್ವ ಸಮೀಕ್ಷೆಯನ್ನು ಮಾಡುತ್ತಾರೆ. ಇದರಿಂದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು ಮತ್ತು ಸೊಳ್ಳೆಯಿಂದ ಹರಡುವ ಜ್ವರಗಳ ಬಗ್ಗೆ ಜನರಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿಸಿದರು.
ಡೆಂಗ್ಯೂ ಮತ್ತು ಚಿಕುಂಗುನ್ಯಾ ಕಾಯಿಲೆ, ಈ ಜ್ವರ ಸೋಂಕು ಹೊಂದಿದ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ.
ಈ ಸೊಳ್ಳೆಯು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಈ ರೋಗದ ಮುಖ್ಯಲಕ್ಷಣಗಳು ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗುಡ್ಡೆ ಹಿಂಭಾಗದಲ್ಲಿ ವಿಪರೀತ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು, ಮತ್ತು ವಸಡುಗಳಲ್ಲಿ ರಕ್ತ ಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಕಾಣಿಸಿಕೊಳ್ಳುತ್ತದೆ. ಇದು ಡೆಂಗ್ಯೂ ರಕ್ತಸ್ರಾವ ಜ್ವರ ಹಾಗೂ ಡೆಂಗ್ಯೂ ಆಘಾತಕರ ಆದ್ದರಿಂದ ಇದು ಮಾರಣಾಂತಿಕವಾಗಬಹುದು ಎಂದು ಮಾಹಿತಿ ನೀಡಿದರು.
ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗ ಲಕ್ಷಣಕ್ಕೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು ಎಂದರು.
ಇಡೀ ಸೊಳ್ಳೆಗಳ ನಿಯಂತ್ರಣ, ಡೆಂಗು ರೋಗದ ಹತೋಟಿಗೆ ಮುಖ್ಯ ವಿಧಾನವಾಗಿದೆ. ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಅಂದರೆ ಮನೆಯ ಒಳಗೆ ಹಾಗೂ ಹೊರಗೆ ನೀರನ್ನು ಶೇಖರಿಸುವ ತೊಟ್ಟಿ ಮಣ್ಣಿನ ಮಡಿಕೆ ಉಪಯೋಗಿಸಿದ ಒರಳು ಕಲ್ಲುಗಳು, ಹೂವಿನ ಕುಂಡಗಳು, ತಟ್ಟೆಗಳು, ಬಳಸದ ಟೈರುಗಳು, ಎಳನೀರು ಚಿಪ್ಪುಗಳು, ಒಡೆದ ಬಾಟಲ್ ಗಳು, ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು ಎಂದು ಮಾಹಿತಿ ನೀಡಿದರು.
ಎಲ್ಲ ನೀರಿನ ತೊಟ್ಟಿಗಳು, ಡ್ರಮ್ ಗಳ, ಬ್ಯಾರೆಲ್ ಗಳು, ಏರ್ ಕೂಲರ್, ತೊಟ್ಟಿ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಉಜ್ಜಿ ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳುವ ಮೂಲಕ ಮುಂಜಾಗೃತೆ ವಹಿಸಬೇಕು ಎಂದರು.
ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಮರದ ಪೊಟರೆ, ಒಡೆದ ಬಾಟಲಿ, ಕುಡಿದು ಬಿಸಾಡಿದ ಪ್ಲಾಸ್ಟಿಕ್ ಲೋಟ, ಬಾಟಲ್ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಸೂಕ್ತ ವಿಲೇವಾರಿ ಮಾಡುವುದು.
ಸ್ವಯಂ ರಕ್ಷಣಾ ವಿಧಾನಗಳಾದ. ಸೊಳ್ಳೆ ಪರದೆ ಬಳಸುವುದು. ಮೈ ತುಂಬಾ ಬಟ್ಟೆ ಧರಿಸುವುದು. ಆರೋಗ್ಯ ಇಲಾಖೆ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡುವುದು.ಎಂದು ತಿಳಿಸಿದರು.
ಈ ಸಂದರ್ಭದಲ್ಲಿ . ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರ, ರವಿರಾಜ್, ಹನುಮಂತ, ಅಶೋಕ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸುಷ್ಮಾ ನಾಗಮ್ಮ, ಪ್ರತಾಪ್ ಆಶಾ ಕಾರ್ಯಕರ್ತೆಯರು ಇನ್ನಿತರರು ಹಾಜರಿದ್ದರು.
ವರದಿ: ಮಲಾರ ಮಹದೇವ ಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


