ಪಾವಗಡ : ರಾಜ್ಯದಲ್ಲಿ 2023 ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಾವಗಡ ತಾಲೂಕು ಸಮಗ್ರ ಅಭಿವೃದ್ಧಿಗೆ ಹಾಗೂ ಆರ್ಥಿಕವಾಗಿ ಸದೃಢವಾಗಲು ಶ್ರಮಿಸುತ್ತೇವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದರು.
ಪಾವಗಡ ಪಟ್ಟಣದ ಮುಖಂಡ ತಿಮ್ಮಾರಾಜುರವರ ಮನೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ ನಂತರ ತುಮಕೂರು ರಸ್ತೆಯಲ್ಲಿರುವ ಕನಕದಾಸರ ಪ್ರತಿಮೆಗೆ 42 ಅಡಿವುಳ್ಳ ಬೃಹತ್ ಆಕಾರದ ಕಂಬಳಿ ಹಾರ ಹಾಕಿ ನಂತರ ಶನೇಶ್ವರ ಸರ್ಕಲ್ ಸಾರ್ವಜನಿಕ ಉದ್ದೇಶ ಮಾತನಾಡಿದ ಅವರು ಈ ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಎಂ. ತಿಮ್ಮರಾಯಪ್ಪ ಅವರಿಗೆ ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ರಚಿಸಲು ನಿಮ್ಮೆಲ್ಲರ ಆಶೀರ್ವಾದ ಮುಖ್ಯ ಎಂಬುದಾಗಿ ತಿಳಿಸಿದರು.
ಪಾವಗಡ ಘಟಕ ಸರ್ಕಾರಿ ನೌಕರರು ಮಾಜಿ ಮುಖ್ಯಮಂತ್ರಿಗಳಿಗೆ ಹೆಚ್.ಡಿ.ಕುಮಾರ್ ಸ್ವಾಮಿಯವರಿಗೆ ಒ.ಪಿ.ಎಸ್.ವಜಾ ಗೊಳಿಸಲು ಮನವಿ ಪತ್ರ ಸಲ್ಲಿಸಿದರು ನಂತರ ನಮ್ಮ ಸರ್ಕಾರ ಬಂದ ತಕ್ಷಣವೇ ನಿಮ್ಮ ಸಮಸ್ಯೆ ಬಗ್ಗೆ ಹರಿಸುವುದಾಗಿ ಆಶ್ವಾಸನೆ ನೀಡಿದರು.
ಈ ಭಾಗದಲ್ಲಿ ಹದಿನೈದು ಸಾವಿರ ಕುಟುಂಬಗಳಿಗೆ 82 ಕೋಟಿ ಸಾಲ ಮನ್ನಾ ಮಾಡಲಾಗಿದೆ. 15 ಸಾವಿರ ಕುಟುಂಬದ ಸದಸ್ಯರು ಅರವತ್ತು ಸಾವಿರ ಆಗುತ್ತಾರೆ. ಅವರು ಮತ ಹಾಕಿದರೆ ಸಾಕು ಈ ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲುವುದು ಸಾಧ್ಯವಿದೆ ಎಂದು ಅವರು ಹೇಳಿದರು.
ಪಂಚರತ್ನ ರಥ ಯಾತ್ರೆ ನಂತರ ಎಂದು ಕಾಣದಂತಹ ಮಳೆ ಈ ಭಾಗದಲ್ಲಿ ಬಂದಿರೋದು ಬಹಳ ಸಂತೋಷ ತಂದಿದೆ. ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ ಎಂದರು.
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವ ನಿರೀಕ್ಷೆಯಿದ್ದು ಸಂಪೂರ್ಣ ಸರ್ಕಾರ ರಚನೆಯಾದ 24 ಗಂಟೆಯಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲವನ್ನು ಮನ್ನಾ ಮಾಡಿ, ಹೆಣ್ಣುಮಕ್ಕಳನ್ನು ಋಣಮುಕ್ತರನ್ನಾಗಿ ಮಾಡಲಾಗುವುದೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದರು.
ಪಂಚರತ್ನ ಯೋಜನೆಯ ರಥಯಾತ್ರೆಯೊಂದಿಗೆ ಪಾವಗಡ ಆಗಮಿಸಿದ ಅವರನ್ನು ಗಡಿಭಾಗದಿಂದಲೂ ಮಹಿಳೆಯರು ಆರತಿ ಮಾಡಿದರೆ, ಕಾರ್ಯಕರ್ತರು ಹೂವಿನ ಸುರಿಮಳೆಯೊಂದಿಗೆ ಸ್ವಾಗತಿಸಿದರು. ಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ ಈ ಕ್ಷೇತ್ರದ ಋಣ ನಮ್ಮ ಮೇಲಿದೆ. ಕಳೆದ ಬಾರಿ ಪಾವಗಡ ಅಭಿವೃದ್ಧಿಗೆ ಮುಂದಾಗುವಾಗಲೇ ನನ್ನ ಸರಕಾರವನ್ನು ಕುತಂತ್ರದಿಂದ ಕಿತ್ತು ಹಾಕಿದರು. ಆದರೂ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದು ಕ್ಷೇತ್ರಕ್ಕೆ 82 ಕೋಟಿ ಅನುದಾನದ ಜೊತೆಗೆ ಕೈಗಾರಿಕಾ ವಲಯ ಮಂಜೂರು ಮಾಡಿದೆ ಎಂದರು.
ಈಗ 2 ಬಾರಿ ಹೃದಯ ಚಿಕಿತ್ಸೆಯಾಗಿದ್ದರೂ ಬಡವರ ಬದುಕು ಹಸನುಗೊಳಿಸಲು ದಿನದ 18 ಗಂಟೆ ಹೋರಾಟ ಮಾಡುತ್ತಿದ್ದೇನೆ. ಪಂಚರತ್ನ ಯೋಜನೆಯ ಮೂಲಕ ಎಲ್ಲರಿಗೂ 50 ಲಕ್ಷದವರೆಗೂ ಉಚಿತ ಆರೋಗ್ಯ ರಕ್ಷೆ, ಮಕ್ಕಳಿಗೆ 1 ರಿಂದ 12 ತರಗತಿಯವರೆಗೂ ಉಚಿತ ಶಿಕ್ಷಣ, ಯುವ ಜನತೆಗೆ ಉದ್ಯೋಗ, ಪ್ರತಿ ಕುಟುಂಬಕ್ಕೂ 10 ಲಕ್ಷದ ಮನೆ, ಹಾಗೂ ಪ್ರತಿ ಗ್ರಾ.ಪಂ.ಮಟ್ಟದಲ್ಲಿ 24/7 ಸುಸಜ್ಜಿತ ಆಸ್ಪತ್ರೆಯನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ. ಈ ಬಗ್ಗೆ ಸರಕಾರಕ್ಕೆ ಚಾಟಿ ಬೀಸುತ್ತೇನೆ ಎಂದರು. ಈ ಬಾರಿ ಧರ್ಮ ಜಾತಿಬಿಟ್ಟು ಈ ನಿಮ್ಮ ಮನೆ ಮಗನಿಗೆ ಈ ಯೋಜನೆಗಳ ಜಾರಿಗೆ ನನಗೆ ಆಶೀರ್ವಾದವನ್ನು ಮಾಡಿ ಎಂದರು.
ಈ ವೇಳೆ ಮಾಜಿ ಶಾಸಕ ಕೆ.ಎಂ.ತಿಮ್ಮಾರಾಯಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಅಂಜಿನಪ್ಪ, ಸೊಗಡು ವೆಂಕಟೇಶ್, ತಿಮ್ಮರೆಡ್ಡಿ. ವೈ ಎನ್.ಎಚ್, ಹೋಬಳಿ ಅಧ್ಯಕ್ಷ ಸತ್ಯ ನಾರಾಯಣ, ಲೆಫ್ಟ್ ನಾಗರಾಜ, ರಾಮಚಂದ್ರಪ್ಪ, ಗ್ರಾಪಂ ಅಧ್ಯಕ್ಷ ಹನುಮಕ್ಕ , ಮುಖಂಡರುಗಳಾದ ನಾಗಲಾಪುರ ರೆಡ್ಡಿ ಮಂಜುನಾಥ, ಲೆಜೆಂಡ್ ವೆಂಕಟೇಶ್, ಓಬಳೇಶ್ ಸೇರಿದಂತೆ ಸಾವಿರಾರು ಜನ ನಾಗಲಾಪುರ ಹಾಗೂ ತಾಲೂಕಿನ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು.
ವರದಿ: ನಂದೀಶ್ ನಾಯ್ಕ್, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz