nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾರ್ಡ್ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ದರ್ಬಾರ್: ಸಾರ್ವಜನಿಕರು ಕಂಗಾಲು!
    ತುರುವೇಕೆರೆ December 16, 2022

    ವಾರ್ಡ್ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ದರ್ಬಾರ್: ಸಾರ್ವಜನಿಕರು ಕಂಗಾಲು!

    By adminDecember 16, 2022No Comments2 Mins Read
    gramasabhe

    ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ ಕೊಡಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂಳೆಕೆರೆ ಮತ್ತು ಸೂಳೆಕೆರೆ ಪಾಳ್ಯದ ವಾರ್ಡ್ ಸಭೆಯನ್ನು ಸೂಳೆಕೆರೆ ಗ್ರಾಮದ ಗಣಪತಿ ದೇವಾಲಯದ ಆವರಣದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುನಿಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

    ಈ ಸಭೆಗೆ ಸೂಳೆಕೆರೆ ಗ್ರಾಮದ ಸದಸ್ಯೆ ಗೈರು ಹಾಜರಾಗಿದ್ದರು. ಇವರ ಬದಲಾಗಿ ಈಕೆಯ ಪತಿ ಯೋಗೇಶ್ ಕುಮಾರ್ ರವರು ವೇದಿಕೆಯ ಆಸನವನ್ನು ಅಲಂಕರಿಸಿದ್ದರು.


    Provided by
    Provided by

    ಈ ಸಭೆಗೆ ಕೇವಲ 4 ರಿಂದ 5 ಮಂದಿ ಸಾರ್ವಜನಿಕರು ಭಾಗವಹಿಸಿದ್ದರು. ಈ ವಾರ್ಡ್ ಸಭೆಯನ್ನು ನಡೆಸುತ್ತಿರುವುದರ ಬಗ್ಗೆ ಎರಡು ವಾರ್ಡ್ ಗಳ ಸಾರ್ವಜನಿಕರಿಗೆ ಯಾವುದೇ ಮಾಹಿತಿಯನ್ನು ನೀಡದೆ, ಏಕಾಏಕಿ ಸಭೆ ನಡೆಸಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಭೆಯಲ್ಲಿ  ಹಾಜರಿದ್ದ ಸಾರ್ವಜನಿಕರು ಈ ಬಗ್ಗೆ ಪಿ ಡಿ ಓ ಹಾಗೂ ಕಾರ್ಯದರ್ಶಿಯವರಲ್ಲಿ ವಿಚಾರಿಸಿದಾಗ ಸಭೆ ನಡೆಸುವ ಸಂಜೆ ಮೈಕ್ ಮೂಲಕ ಪ್ರಚಾರ ಮಾಡಿದ್ದೇವೆ  ಎಂದು ಉತ್ತರ ನೀಡಿದರು.

    ಸಭೆಗೆ ಹಾಜರಿದ್ದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಳ್ಳುವಾಗ ಸದಸ್ಯೆಯ ಪತಿಯೇ ಎಲ್ಲಾ ಅಹವಾಲುಗಳಿಗೆ ತಾನೇ ಸರ್ವಾಧಿಕಾರಿ ಎನ್ನುವಂತೆ ಎಲ್ಲಾದಕ್ಕೂ ಬಾಯಿ ಹಾಕಿ ಉತ್ತರ ಕೊಡುತ್ತಿದ್ದು, ಪಂಚಾಯಿತಿ ಅಧಿಕಾರಿಗಳು ಕೂಡ ಸದಸ್ಯೆಯ ಪತಿಯ ದರ್ಬಾರ್ ಬಗ್ಗೆ ಯಾವುದೇ ವಿರೋಧ ವ್ಯಕ್ತಪಡಿಸಲಿಲ್ಲ ಇದರಿಂದಾಗಿ ಸಾರ್ವಜನಿಕರು ಗೊಂದಲಕ್ಕೀಡಾದರು.

    ಈ ಬಗ್ಗೆ ಮಾಧ್ಯಮದ ಪ್ರತಿನಿಧಿಗಳು ಸದಸ್ಯೆಯ ಪತಿಯನ್ನು ಪ್ರಶ್ನಿಸಿದ್ದು, ನೀವೇಕೆ ವೇದಿಕೆಯನ್ನು ಅಲಂಕರಿಸಿದ್ದೀರಿ? ಎಂದು ಕೇಳಿದಾಗ, ಯಾಕೆ ನಾನು ಅಲಂಕರಿಸಬಾರದೆಂದು ದರ್ಪದಿಂದ ಮಾತನಾಡಿದ್ದಾರೆ. ಇದರ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಗಳು ಕೊಡ ಸಮಜಾಯಿಸಿ ಉತ್ತರವನ್ನು ಕೊಡುತ್ತಾ, ಕಾನೂನು ನಿಯಮಗಳ ಅರಿವೇ ಇಲ್ಲದವರಂತೆ ಸಭೆಯನ್ನು ಮುಂದುವರಿಸಿದರು.

    ಸಭಾ ನಡವಳಿ ಪುಸ್ತಕದಲ್ಲಿ ಸಹಿ ಮಾಡಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಡವಳಿಗಳನ್ನು ಬರೆಯದೆ ಖಾಲಿ ಹಾಳೆಗೆ ಸಾರ್ವಜನಿಕರ ಸಹಿ ಪಡೆಯಲು ಮುಂದಾದರು. ಈ ವೇಳೆ ಆರ್‌ ಟಿಐ ಕಾರ್ಯಕರ್ತ ರುದ್ರೇಶ್ ಹಾಗೂ ಮುಖಂಡರಾದ ಚಂದ್ರಣ್ಣನವರು ಪ್ರಶ್ನಿಸಿ ಸಹಿ ಮಾಡದೆ ವಾಪಸ್ ಕಳುಹಿಸಿದರು.

    ಈ ಸಭೆಯು ವಿಫಲವಾಗಿದೆ ಮತ್ತೊಮ್ಮೆ ನೋಟಿಸ್ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿ ಸಭೆ ನಡೆಸುವಂತೆ ಸಾರ್ವಜನಿಕರು ಒತ್ತಾಯಿಸಿದರು. ಸಭೆ ಮುಗಿದ ಬಳಿಕ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಯ್ಯರವರು ಹೊರಗೆ ಬಂದು ರಸ್ತೆಯಲ್ಲಿ ಓಡಾಡುತ್ತಿರುವ ಸಾರ್ವಜನಿಕರನ್ನು ಕರೆದು ಸಹಿ ಪಡೆದಿರುವ ಪ್ರಸಂಗವು ನಡೆದಿತ್ತು.

    ಒಟ್ಟಾರೆ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಕಾಟಾಚಾರಕ್ಕೆ ಸರ್ಕಾರಕ್ಕೆ ಮಾಹಿತಿಯನ್ನು ನೀಡುವ ಸಲುವಾಗಿ ಈ ವಾರ್ಡ್ ಸಭೆ ಕರೆದಿದ್ದು ಎಷ್ಟು ಸಮಂಜಸ ಎಂಬುವುದು ಪ್ರಶ್ನೆಯಾಗಿದೆ.

    ಪತ್ನಿಯ ಬದಲಿಗೆ ಪತಿಯೇ ವೇದಿಕೆಯಲ್ಲಿ ಕುಳಿತು ಶಿಷ್ಟಾಚಾರ ಉಲ್ಲಂಘನೆ ಮಾಡಿದ ಬಗ್ಗೆ ಸಾರ್ವಜನಿಕರಲ್ಲಿ ಗುಸು-ಗುಸು ಮಾತಾಯಿತು ಮತ್ತು ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳನ್ನು ದೂಷಿಸಿದರು ಇನ್ನಾದರೂ ಈ ಬಗ್ಗೆ ಮೇಲಧಿಕಾರಿಗಳು ಇದರ ಗಮನವನ್ನು ಹರಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಮತ್ತು ಶಿಷ್ಟಾಚಾರ ಉಲ್ಲಂಘನೆ ಮಾಡುವಲ್ಲಿ ಭಾಗಿಯಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.