nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025
    Facebook Twitter Instagram
    ಟ್ರೆಂಡಿಂಗ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    • ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಜಮೀನು ಖಾತೆ ಆರೋಪ
    ಜಿಲ್ಲಾ ಸುದ್ದಿ December 21, 2022

    ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಜಮೀನು ಖಾತೆ ಆರೋಪ

    By adminDecember 21, 2022No Comments2 Mins Read
    nakali dakale

    ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಜಮೀನು ಖಾತೆ ಮಾಡಿಸಿದ ಆರೋಪದ ಮೇಲೆ ತಹಶೀಲ್ದಾರ್, ಗ್ರಾಮಲೆಕ್ಕಿಗ ಹಾಗೂ ರೆವಿನ್ಯೂ ಇನ್ಸ್ ಪೆಕ್ಟರ್ ಸೇರಿ ಐವರ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಅನಿವಾಸಿ ಭಾರತೀಯ ರವಿ ಎಂಬುವವರ ತಂದೆಗೆ ಸೇರಿದ್ದ 1.08 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡ ಆರೋಪದ ಮೇಲೆ ಮೈಸೂರು ತಾಲ್ಲೂಕು ವರುಣಾ ಹೋಬಳಿಯ ದೇವೇಗೌಡನಹುಂಡಿ ಗ್ರಾಮದ ನಿವಾಸಿ ಮರೀಗೌಡ, ಶಿವರಾಂ ಹಾಗೂ ಇವರಿಗೆ ಸಹಕರಿಸಿದ ಗ್ರಾಮಲೆಕ್ಕಿಗ ಮಹೇಶ್, ರೆವಿನ್ಯೂ ಇನ್ಸ್ ಪೆಕ್ಟರ್ ಹಾಗೂ ತಹಶೀಲ್ದಾರ್ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ .

    ಈ ಸಂಬಂಧ ವರುಣಾ ಪೊಲೀಸ್ ಠಾಣೆಗೆ ದೂರು ನೀಡಿದ್ಧ ರವಿ ಅವರು, ನಾನು ಅನಿವಾಸಿ ಭಾರತೀಯನಾಗಿದ್ದು ವೃತ್ತಿ ನಿಮಿತ್ತ ಸೌದಿ ಅರೇಬಿಯಾದಲ್ಲಿ, ನೆಲೆಸಿದ್ದೇನೆ. ಮೈಸೂರು ತಾಲ್ಲೂಕು ವರುಣ ಹೋಬಳಿ ಯಡಕೊಳ ದಾಖಲೆ ದೇವೆಗೌಡನಹುಂಡಿ ಗ್ರಾಮದಲ್ಲಿ, ನಮ್ಮ ಪೂರ್ವಜರ ಜಮೀನಿದ್ದು, ಅದು ಸರ್ವೆ ನಂಬರ್ 368/2 ಜಾಗದಲಿ.. 1.08 (ಒಂದು ಎಕರೆ ಎಂಟು ಗುಂಟೆ) ನಮ್ಮ ತಂದೆಯವರಿಗೆ ಸೇರಿದೆ. ಇದಕ್ಕೆ ಪೂರಕವಾಗಿ 1994 ರ ನನ್ನ ತಾತಾನವರಾದ ಚಿಕ್ಕಮಾದೇಗೌಡ ರವರ ಇಬ್ಬರೂ ಹೆಂಡತಿಯರ ಪೈಕಿ ಮಗನಾದ ನನ್ನ ತಂದೆ ದಿವಗಂತ ಮಹದೇವ ರವರಿಗೆ 1.08 ಗುಂಟೆ ಹಾಗೂ ಅವರ ಎರಡನೆ ಹೆಂಡತಿಯಾದ ಬೀರಮ್ಮ ರವರಿಗೆ 1.08 ಗುಂಟೆ ಸಮಪಾಲಾಗಿ ವಿಭಾಗ ಮಾಡಲಾಗಿತ್ತು.


    Provided by
    Provided by

    2014 ರಲ್ಲಿ ನನ್ನ ತಾತಾನ ಎರಡನೇ ಹೆಂಡತಿಯ ಮಕ್ಕಳಾದ ಮರಿಗೌಡ ಮತ್ತು ಶಿವರಾಮ್‌ ರವರು ನಕಲಿ ದಾಖಲೆ ಸೃಷ್ಟಿಸಿ ಸುಳ್ಳು ಸಾಕ್ಷಿಯನ್ನು ಒದಗಿಸಿ ಖಾತೆ ಮಾಡಿಸಿಕೊಂಡಿದ್ದಾರೆ. ಇದಕ್ಕೆ ಈ ಹಂತದಲ್ಲಿ ಅಂದು ಕರ್ತವ್ಯನಿರತರಾದ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಮಹೇಶ ಜೊತೆಗೆ ಆ ಅವಧಿಯಲ್ಲಿ ಕರ್ತವ್ಯದಲಿದ್ದ ಕಂದಾಯ ನೀರಿಕ್ಷಕರು ( ಆರ್ ಐ), ತಹಶೀಲ್ದಾರ್ ಈ ಮೂವರು ಜೊತೆಗೂಡಿ ಶಿವರಾಮ ಹಾಗೂ ಮರಿಗೌಡರಿಗೆ ಸಹಕರಿಸುವ ದುರುದ್ದೇಶದಿಂದ ಪರಿಪೂರ್ಣವಾಗಿ ಪರಿಶೀಲನೆ ನಡೆಸದೆ ನಕಲಿ ದಾಖಲೆ ಹಾಗೂ ಸುಳ್ಳು ಸಾಕ್ಷಿ ಸೃಷ್ಟಿಸಿರುವುದಕ್ಕೆ ಜವಾಬ್ದಾರರಾಗಿದ್ದಾರೆ. ಹಾಗಾಗಿ ಇವರುಗಳ ವಿರುದ್ಧ ನಕಲಿ ದಾಖಲೆ ಸೃಷ್ಟಿ, ಸುಳು ಸಾಕ್ಷಿ ಸೃಷ್ಟಿ, ವಂಚನೆ ಹಾಗೂ ಅಧಿಕಾರ ದುರ್ಬಳಕೆ ಪ್ರಕರಣ ದಾಖಲಿಸಬೇಕೆಂದು ಮನವಿ ಮಾಡಿದ್ದರು.

    ಜೊತೆಗೆ ನಮಗೆ ಸೇರಿದ 1.08 ಗುಂಟೆ ಜಮೀನು ಅವರ ಹೆಸರಿನಲ್ಲಿ ( ಬೀರಮ್ಮ) ಶಿವರಾಮ ಮತ್ತು ಮರಿಗೌಡ ರವರ ತಾಯಿಗೆ ಖಾತೆಯಾಗಿದ್ದು, ಈ ವಂಚನೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ರವಿ ಮನವಿ ಮಾಡಿದ್ದರು. ದೂರನ್ನು ಆಧರಿಸಿ ಐವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಪಾವಗಡ: ಆಗ್ನೆಯ ಪದವೀಧರರ ಕ್ಷೇತ್ರ ವ್ಯಾಪ್ತಿಯ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಮತ್ತು ದಾವಣಗೆರೆ (ಹರಿಹರ, ಜಗಳೂರು ದಾವಣಗೆರೆ ತಾಲೂಕುಗಳು)…

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.