nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸ RTO ಕಚೇರಿಗಳ ಸ್ಥಾಪನೆ ಇಲ್ಲ : ಸಚಿವ ಶ್ರೀರಾಮುಲು
    ರಾಜ್ಯ ಸುದ್ದಿ December 22, 2022

    ಹೊಸ RTO ಕಚೇರಿಗಳ ಸ್ಥಾಪನೆ ಇಲ್ಲ : ಸಚಿವ ಶ್ರೀರಾಮುಲು

    By adminDecember 22, 2022No Comments2 Mins Read
    sri ramulu

    ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬಹುತೇಕ ಕಡೆಗಳಲ್ಲಿ ಸಾರಿಗೆ ಶಿಬಿರಗಳನ್ನು ನಡೆಸುತ್ತಿದೆ.ಸುಮಾರು 30 ಸೇವೆಗಳನ್ನು ಆನ್‍ಲೈನ್ ಮೂಲಕವೇ ಒದಗಿಸಲಾಗುತ್ತಿದೆ.

    ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡದೇ ಸಂಪರ್ಕ ರಹಿತವಾಗಿ ಸೇವೆಗಳನ್ನು ಪಡೆಯುವ ಸೌಲಭ್ಯಗಳಿರುವುದರಿಂದ ರಾಜ್ಯದಲ್ಲಿ ಹೊಸದಾಗಿ ಪ್ರಾದೇಶಿಕ ಸಾರಿಗೆ (ಆರ್‍ಟಿಓ)ಕಚೇರಿಗಳನ್ನು ಸ್ಥಾಪಿಸುವುದಿಲ್ಲ ಎಂದು ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.


    Provided by
    Provided by

    ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಬೈಂದೂರು ಶಾಸಕ ಸುಕುಮಾರಶೆಟ್ಟಿ ಬಿ.ಎಂ.ಅವರ ಪ್ರಶ್ನೆಗೆ ಉತ್ತರಿಸುತ್ತ ಈ ಮಾಹಿತಿ ನೀಡಿದರು.ಉಡುಪಿ ಜಿಲ್ಲೆಯ ಕುಂದಾಪುರ , ಬೈಂದೂರು ತಾಲೂಕುಗಳು ಮತ್ತು ಸುತ್ತಮುತ್ತಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಕುಂದಾಪುರದಲ್ಲಿ ಪ್ರತಿ ಮಂಗಳವಾರ ಸಾರಿಗೆ ಶಿಬಿರ ನಡೆಯುತ್ತಿದೆ.ರಾಜ್ಯದ ಇತರೆಡೆಗಳಲ್ಲಿಯೂ ಅವಶ್ಯಕತೆಗೆ ಅನುಗುಣವಾಗಿ ನಿಯಮಿತವಾಗಿ ಸಾರಿಗೆ ಶಿಬಿರಗಳು ನಡೆಯುತ್ತಿವೆ.

    ಕುಂದಾಪುರದಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಸ್ಥಾಪಿಸಬೇಕೆಂಬ ಪ್ರಸ್ತಾವ ಸರ್ಕಾರದ ಗಮನಕ್ಕೆ ಬಂದಿದ್ದು,ಅಲ್ಲಿ ಕಚೇರಿ ಸ್ಥಾಪನೆಗೆ ಮಾನದಂಡಗಳು ಪೂರೈಕೆಯಾಗಿಲ್ಲ ಎಂಬ ಎಂದು ಉಡುಪಿ ಆರ್‍ಟಿಓ ವರದಿ ಸಲ್ಲಿಸಿದ್ದಾರೆ.

    ಹೊಸ ಆರ್‍ಟಿಓ ಅಥವಾ ಎಆರ್‍ಟಿಓ ಕಚೇರಿಗಳನ್ನು ತೆರೆಯಲು ನಿಗದಿಪಡಿಸಿರುವ ಮಾನದಂಡಗಳನ್ನು ಪರಿಷ್ಕರಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಅಪರ ಸಾರಿಗೆ ಆಯುಕ್ತರು ಹಾಗೂ ರಾಜ್ಯ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯು, ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಶಿಬಿರಗಳನ್ನು ನಡೆಸುತ್ತಿದೆ,ಸುಮಾರು 30 ಸೇವೆಗಳನ್ನು ಆನ್‍ಲೈನ್ ಸೇವೆಗಳನ್ನಾಗಿ ಮಾರ್ಪಡಿಸಲಾಗಿದೆ. ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡದೇ ಸಂಪರ್ಕರಹಿತವಾಗಿ ಸೇವೆಗಳನ್ನು ಪಡೆಯಲು ಅವಕಾಶಗಳಿರುವದರಿಂದ ಹೊಸ ಆರ್‍ಟಿಓ ಕಚೇರಿಗಳ ಸ್ಥಾಪನೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂಬ ಅಭಿಪ್ರಾಯ ನೀಡಿದೆ.

    ಸಾರ್ವಜನಿಕರಿಗೆ ವಾಹನ ಅನುಜ್ಞಾ ಪತ್ರ,ವಾಹನ ನೋಂದನಣೀಯ ಸ್ಮಾರ್ಟ್ ಕಾರ್ಡ್‍ಗಳನ್ನು ಅವರ ಮನೆಯ ವಿಳಾಸಗಳಿಗೆ ಅಂಚೆ ಮೂಲಕ ತಲುಪಿಸಲಾಗುತ್ತಿದೆ.ವಾಹನ-4,ಸಾರಥಿ-4 ಮತ್ತು ಇ-ಪೇಮೆಂಟ್ ಆಫ್ ಟ್ಯಾಕ್ಸ್‍ನಂತಹ ಆನ್‍ಲೈನ್ ಸೇವೆಗಳನ್ನು ರಾಜ್ಯದ ಎಲ್ಲಾ ಕಚೇರಿಗಳಲ್ಲಿ ಜಾರಿಗೊಳಿಸಲಾಗಿದೆ.

    ಕರ್ನಾಟಕ -1,ಬೆಂಗಳೂರು -1 ಮತ್ತು ಮೊಬೈಲ್-1 ಆ್ಯಪ್‍ಗಳ ಮೂಲಕವೂ ವಾಹನಗಳ ಮಾಹಿತಿ,ವಿವರಗಳನ್ನು ಪಡೆಯಬಹುದಾಗಿದೆ.ಇ-ಆಡಳಿತ ಇಲಾಖೆಯ ಗ್ರಾಮ ಒನ್ ಮತ್ತು ಜನಸೇವಕ ಯೋಜನೆಗಳಡಿಯೂ ಸಾರಿಗೆ ಇಲಾಖೆಯ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ.ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಸಾರಿಗೆ ಇಲಾಖೆಯಲ್ಲಿ ಯಾವುದೇ ಹೊಸ ಕಚೇರಿಗಳನ್ನು ಪ್ರಾರಂಭಿಸುವ ಅವಶ್ಯಕತೆ ಉದ್ಭವಿಸುವುದಿಲ್ಲ ಎಂದು ಸಚಿವ ಬಿ.ಶ್ರೀರಾಮುಲು ಸದನದಲ್ಲಿ ವಿವರಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.