nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾವೇರಿ, ಉಡುಪಿ ಹಾಗೂ ರಾಯಚೂರಿನಲ್ಲಿ ಜವಳಿ ಪಾರ್ಕ್ ಉದ್ಯಮಕ್ಕೆ ಸರ್ಕಾರದ ಅನುಮತಿ
    ರಾಜ್ಯ ಸುದ್ದಿ December 28, 2022

    ಹಾವೇರಿ, ಉಡುಪಿ ಹಾಗೂ ರಾಯಚೂರಿನಲ್ಲಿ ಜವಳಿ ಪಾರ್ಕ್ ಉದ್ಯಮಕ್ಕೆ ಸರ್ಕಾರದ ಅನುಮತಿ

    By adminDecember 28, 2022No Comments2 Mins Read
    javalli

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಯಡಿ ರಾಜ್ಯದ 6 ಕಡೆ ಜವಳಿ ಪಾರ್ಕ್ ಈಗಾಗಲೇ ನಿರ್ಮಿಸಲಾಗಿದೆ. ಹಾವೇರಿ, ಉಡುಪಿ ಹಾಗೂ ರಾಯಚೂರಿನಲ್ಲೂ ಸಹ ಜವಳಿ ಪಾರ್ಕ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.

    ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಕೆ.ಎಸ್.ನವೀನ್ ಹಾಗೂ ಚನ್ನರಾಜ್ ಬಸವರಾಜ್ ಹಟ್ಟಿಹೊಳಿ ಅವರ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.ರಾಜ್ಯ ಸರ್ಕಾರ 2019ರಲ್ಲಿ ನೂತನ ಜವಳಿ ಹಾಗೂ ಸಿದ್ಧಉಡುಪು ನೀತಿಯನ್ನು ಜಾರಿಗೊಳಿಸಿದೆ. ಇದರ ಅನ್ವಯ ಪ್ರತ್ಯೇಕ ಉದ್ಯಮಿ ಅಥವಾ ಎಸ್.ಪಿ.ವಿಗಳು 15 ಎಕರೆ ಜಾಗ ಹೊಂದಿ ಜವಳಿ ಪಾರ್ಕ್ ಸ್ಥಾಪಿಸಲು ಮುಂದಾದರೆ ಸರ್ಕಾರದಿಂದ ಸಹಾಯ ನೀಡಲಾಗುವುದು ಎಂದರು.


    Provided by
    Provided by

    ಶಾಸಕ ಕೆ.ಎಸ್. ನವೀನ್ ಮಾತನಾಡಿ ಜಾಗತಿಕವಾಗಿ ಪಾಕಿಸ್ತಾನ ಹಾಗೂ ಚೈನಾ ಬಂಡವಾಳ ಹೂಡಿಕೆದಾರರ ವಿಶ್ವಾಸ ಕಳೆದುಕೊಂಡಿವೆ. ಮುಂದಿನ ದಿನಗಳಲ್ಲಿ ಭಾರತ ಸಿದ್ಧ ಉಡುಪು ತಯಾರಿಕೆ ಕೇಂದ್ರವಾಗಿ ಜಗತ್ತಿಗೆ ಹೊರಹೊಮ್ಮಲಿದೆ. ರಾಜ್ಯ ಸರ್ಕಾರ ಇದಕ್ಕೆ ಸಿದ್ದವಾಗಿದ್ದು, ರಾಜ್ಯದಲ್ಲಿ ಜವಳಿ ಉದ್ಯಮಕ್ಕೆ ಬೆಂಬಲ ನೀಡಬೇಕು.ಬೆಂಗಳೂರಿನಲ್ಲಿ ಹೆಚ್ಚಿನ ಗಾರ್ಮೆಂಟ್ಸ್ ಕಾರ್ಖಾನೆಗಳು ನೆಲೆಗೊಂಡಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಗಾರ್ಮೆಂಟ್ಸ್ ಉದ್ಯೋಗ ಅರಿಸಿ ಲಕ್ಷಾಂತರ ಜನ ವಲಸೆ ಹೋಗುತ್ತಿದ್ದಾರೆ.

    ಇದನ್ನು ತಪ್ಪಿಸಲು ಸರ್ಕಾರ ಪ್ರತಿ ತಾಲೂಕು ಹಂತಲ್ಲಿಯೂ ಗಾರ್ಮೆಂಟ್ಸ್ ತೆರೆಯಲು ನೆರವು ನೀಡಬೇಕು. ಜವಳಿ ಪಾರ್ಕ್ ಸ್ಥಾಪನೆಯ ಉದ್ದೇಶದಿಂದ ಸರ್ಕಾರದ ನೆರವು ಪಡೆದುಕೊಂಡು ಖಾಸಗಿ ವ್ಯಕ್ತಿಗಳು ಉದ್ದಿಮೆ ಸ್ಥಾಪಿಸದೆ ರಿಯಲ್ ಎಸ್ಟೇಟ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದಾರೆ. ಇವರಿಗೆ ಕಡಿವಾಣ ಹಾಕಬೇಕು ಎಂದು ಸಚಿವರಲ್ಲಿ ಕೋರಿಕೊಂಡರು.ಜವಳಿ ಪಾರ್ಕ್ ಹೆಸರಿನಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿರುವ ಹಾಗೂ ಉದ್ಯೋಗ ನೀಡದಿರುವ ಉದ್ದಿಮೆದಾರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಚಿವ ಶಂಕರ್ ಪಾಟೀಲ್ ಮುನೇನಕೋಪ್ಪ ಭರವಸೆ ನೀಡಿದರು.

    ಕೋವಿಡ್ ಮೃತ ಪಟ್ಟ ನೇಕಾರರರ ಕುಟುಂಬದವರಿಗೆ ರೂ.2 ಲಕ್ಷ ಪರಿಹಾರ:

    ಸರ್ಕಾರ ಕೋವಿಡ್‍ನಲ್ಲಿ ಮೃತಪಟ್ಟ ನೇಕಾರರ ಕುಟುಂಬದವರ ನೆರವಿಗೆ ನಿಂತಿದೆ. ಮೃತರ ಪರಿಹಾರ್ಥವಾಗಿ ರೂ.2 ಲಕ್ಷವನ್ನು ಅವಲಂಬಿತರ ಖಾತೆ ಜಮೆ ಮಾಡಲಾಗಿದೆ ಎಂದು ಸಚಿವ ಶಂಕರ್ ಪಾಟೀಲ್ ಮುನೇನಕೋಪ್ಪ ಹೇಳಿದರು.2019-20 ನೇ ಸಾಲಿನ 4ನೇ ರಾಷ್ಟ್ರೀಯ ಗಣತಿಯ ಅನುಸಾರ ರಾಜ್ಯದಲ್ಲಿ 54250 ಕೈಮಗ್ಗ ನೇಕಾರರು ಇದ್ದಾರೆ. ರಾಜ್ಯ ಸರ್ಕಾರ ಕೈಗೊಂಡ ವಿದ್ಯುತ್ ಮಗ್ಗ ನೇಕಾರರ ಗಣತಿಯಲ್ಲಿ ಡಿ.16 ಅಂತ್ಯದ ವೇಳೆಗೆ 97133 ವಿದ್ಯುತ್ ಕೈಮಗ್ಗ ನೇಕಾರರು ಇದ್ದಾರೆ.

    ಕೈಮಗ್ಗಕ್ಕೆ ಉತ್ತೇಜನ ನೀಡಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಪ್ರತಿ ವರ್ಷ ನೇಕಾರರಿಗೆ ರೂ.5000 ಹಣ ನೇರವಾಗಿ ಖಾತೆ ಜಮೆ ಮಾಡಲಾಗುವುದು.ಅಗತ್ಯ ಸಲಕರಣೆ ಖರೀದಿಗೆ ಶೇ.50 ರಷ್ಟು ಸಹಾಯಧನ, ಕಚ್ಚಾ ಮಾಲು ಖರೀದಿಗೆ ಕೈಮಗ್ಗ ಸಹಕಾರಿ ಸಂಘಗಳಿಗೆ ರೂ.15 ಸಹಾಯಧನ, ಸಹಕಾರಿ ಬ್ಯಾಂಕುಗಳ ಮೂಲಕ ಶೇ.1 ರಿಂದ 3ರ ವರೆಗಿನ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗಿದೆ. ಕೈಮಗ್ಗ ಅಭಿವೃದ್ದಿಗಾಗಿ ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಜವಳಿ ಸೌಲಭ್ಯ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ ಎಂದರು.

    ಶಾಸಕ ಚನ್ನರಾಜ್ ಬಸವರಾಜ್ ಹಟ್ಟಿಹೊಳಿ ಮಾತನಾಡಿ, ರಾಜ್ಯದ ಕೈಮಗ್ಗ ನೇಕಾರರಿಗೆ ತಮಿಳುನಾಡು ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ವಿದ್ಯುತ್ ಬಿಲ್ ಪಾವತಿ ಮೇಲಿನ ಸಹಾಯ ಧನ ವಿತರಣೆ ಬದಲಿಗೆ, ರಿಯಾಯಿತಿ ದರದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.ಬೆಳಗಾವಿಯ ಸಾಲಿಗ್ರಾಮದಲ್ಲಿ ಶೇ.90ಕ್ಕೂ ಹೆಚ್ಚು ಕುಟುಂಬಗಳು ನೇಕಾರಿಯಲ್ಲಿ ತೊಡಗಿವೆ. ಹಲವು ವರ್ಷಗಳ ಅವಧಿಯಲ್ಲಿ ಸುಮಾರು 25 ರಿಂದ 30 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಸರ್ಕಾರ ವಿಶೇಷ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.