ಕೊರಟಗೆರೆ: ಒಂದೇ ವಾರದಲ್ಲಿ ಎರಡು ಚಿರತೆಗಳು ಸೆರೆ ಪಟ್ಟಣದ ಜನರ ನಿದ್ದೆ ಕೆಡಿಸಿದ್ದ ಚಿರತೆ ಇಂದು ಮುಂಜಾನೆ ಪಟ್ಟಣದ ಬಸವನ ಬೆಟ್ಟ ಸಮೀಪ ಇರುವ ಗಂಗಾಧರೇಶ್ವರ ಕೆರೆಯ ಹಿಂಭಾಗದಲ್ಲಿ ತಿಮ್ಮಣ್ಣ ಎನ್ನುವರ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಂತಹ ಬೋನಿಗೆ ಬಿದ್ದಿದೆ.
ಚಿರತೆಯನ್ನು ನೋಡಲು ಪಟ್ಟಣದ ಜನರು ತಂಡೋಪ ತಂಡವಾಗಿ ಬರುತ್ತಿರುವುದನ್ನು ಕಂಡು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ದೂರದಿಂದಲೇ ಚಿರತೆಯನ್ನು ನೋಡಿ ತೆರಳುವಂತೆ ಮನವಿ ಮಾಡಿಕೊಂಡರು.
ಇನ್ನು ನಾಲ್ಕು ಚಿರತೆ ಇದೆ. ಅವುಗಳನ್ನೂ ಹಿಡಿದು ಸ್ಥಳಾಂತರ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಇದೇ ವೇಳೆ ಮನವಿ ಮಾಡಿಕೊಂಡರು. ಅನೇಕ ಬಾರಿ ಗ್ರಾಮಗಳಿಗೆ ನುಗ್ಗುತ್ತಿರುವ ಚಿರತೆಗಳಿಂದಾಗಿ ಜನರು ಮೂಕ ಪ್ರಾಣಿಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಅಳವತ್ತುಕೊಂಡರು.
ಚಿರತೆ ಬೂನಿಗೆ ಬಿದ್ದಿರುವ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಚಿರತೆಯನ್ನು ಹಿಡಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆಯಾದರೂ, ಇನ್ನಷ್ಟು ಚಿರತೆಗಳಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy