nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

    September 29, 2025

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದುಳಿದ ಸಮುದಾಯಗಳು ಶಿಕ್ಷಣ, ಸಂಘಟನೆ, ಹೋರಾಟ ಮೂಲಕ ಮುಖ್ಯ ವಾಹಿನಿಗೆ ಬರಲು ಸಾಧ್ಯ: ಡಾ.ಬಸವ ರಮಾನಂದ ಸ್ವಾಮೀಜಿ
    ತಿಪಟೂರು January 3, 2023

    ಹಿಂದುಳಿದ ಸಮುದಾಯಗಳು ಶಿಕ್ಷಣ, ಸಂಘಟನೆ, ಹೋರಾಟ ಮೂಲಕ ಮುಖ್ಯ ವಾಹಿನಿಗೆ ಬರಲು ಸಾಧ್ಯ: ಡಾ.ಬಸವ ರಮಾನಂದ ಸ್ವಾಮೀಜಿ

    By adminJanuary 3, 2023No Comments3 Mins Read
    thepatur

    ತಿಪಟೂರು: ಹಿಂದುಳಿದ ಸಮುದಾಯಗಳು ಶಿಕ್ಷಣ, ಸಂಘಟನೆ, ಹೋರಾಟ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ, ಸಂಘಟನೆ ಇಲ್ಲದೆ, ಶಕ್ತಿ ಇಲ್ಲ ಎಂದು ದಾಬಸಪೇಟೆ ಹೆಗ್ಗುಂದದ ಶ್ರೀ ಹೊನಕಲ್ಲು ಮಲ್ಲೇಶ್ವರ ಪೀಠಾಧ್ಯಕ್ಷರಾದ ಡಾ.ಬಸವ ರಮಾನಂದ ಸ್ವಾಮೀಜಿ ಹೇಳಿದರು.

    ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದ ಶ್ರೀಗಳು, ಸಂಘಟನೆ ಎಂಬುದು ಜೇನುಗೂಡಿನಂತೆ ಇರಬೇಕು, ಶಿಕ್ಷಣದಲ್ಲಿ ಪ್ರಜ್ಞಾವಂತರಾದರೆ ಅಭಿವೃದ್ಧಿ ಹೊಂದಲು ಸಾಧ್ಯ, ಆತ್ಮಶಕ್ತಿ ಕುಗ್ಗಿಸಿಕೊಳ್ಳದೆ ಹೋರಾಟ ಮಾಡುವ ಮನೋಭಾವ ನಮ್ಮಲ್ಲಿ ಬರಬೇಕು, ಚುನಾವಣೆ ಸಂದರ್ಭದಲ್ಲಿ ನಾವು ಹಾಕುವ ಮತಕ್ಕೆ ಶಕ್ತಿ ಬಹಳಷ್ಟು ಇದೆ, ನಮ್ಮ ಸಮಸ್ಯೆ ಕೇಳುವ ಯೋಗ್ಯರಿಗೆ ಮತ ಹಾಕಬೇಕು, ಯಾವುದೇ ಮೂಲಭೂತ ಸಮಸ್ಯೆ ಇದ್ದರೂ ಕೂಡ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಪ್ರಶ್ನಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ಕಲ್ಪತರು ನಾಡಿನಲ್ಲಿ ಕೆ.ಟಿ.ಶಾಂತಕುಮಾರ್ ಅವರು ಜನ ನಾಯಕರಾಗಿ ಜನ ಸೇವೆಯ ಮೂಲಕ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ, ಈ ತಾಲೂಕಿನ ಮನೆ ಮಗನಂತಾಗಿರುವ ಕೆ.ಟಿ.ಶಾಂತಕುಮಾರ್ ಅವರಿಗೆ ಇನ್ನಷ್ಟು ಕೆಲಸ ಮಾಡಲು ಶಕ್ತಿ ತುಂಬಬೇಕು ಎಂದರು.


    Provided by
    Provided by
    Provided by

    ಕುಪ್ಪೂರು ತಮ್ಮಡಿ ಹಳ್ಳಿಯ ಸುಕ್ಷೇತ್ರ ಅಧ್ಯಕ್ಷರಾದ ಡಾ.ಅಭಿನವ ಮಲ್ಲಿಕಾರ್ಜುನ ದೇಶಿ ಕೇಂದ್ರ ಮಹಾಸ್ವಾಮಿಜಿ ಮಾತನಾಡಿ, ಜೀವನ ಸಾರ್ಥಕವಾಗಲು ಮನುಷ್ಯನಾದವನು ನಿಸ್ವಾರ್ಥ ಸೇವೆ ಮಾಡಬೇಕು. ತಾಲೂಕಿನಲ್ಲಿ ಮೂಲಸೌಕರ್ಯದಿಂದ ವಂಚಿತರಾದವರಿಗೆ ಕೆ.ಟಿ. ಶಾಂತಕುಮಾರ್ ರವರು ಆಶ್ರಯದಾತರಾಗಿದ್ದಾರೆ. ನಿಜವಾದ ನಾಯಕ ಲಕ್ಷಣದ ವ್ಯಕ್ತಿತ್ವ ಶಾಂತಕುಮಾರ್ ಅವರಲ್ಲಿ ಇದೆ ಎಂದರು.

    ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಪ್ರಸನ್ನನಾಥ ಮಹಾಸ್ವಾಮೀಜಿ ಮಾತನಾಡಿ, ಕಲ್ಪತರು ನಾಡಿನಲ್ಲಿ ಸಮಾಜಮುಖಿ ಕಾರ್ಯದಲ್ಲಿ ಬಹಳ ವರ್ಷಗಳಿಂದ ರೈತಾಪಿ ವರ್ಗ ಸೇರಿದಂತೆ, ಬಡ ಮಕ್ಕಳಿಗೆ ಅನೇಕ ಸಹಾಯ ಸಹಕಾರವನ್ನುಶಾಂತಕುಮಾರ್ ಅವರು ಮಾಡಿರುವುದನ್ನು ನಾವು ಕೇಳಿದ್ದೇವೆ. ಕರೋನಾ ಸಂದರ್ಭದಲ್ಲಿ ಶಾಂತಕುಮಾರ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳು ಜನತೆ ಮರೆತಿಲ್ಲ. ಮಕ್ಕಳಿಗೆ ಪಠ್ಯಪುಸ್ತಕ, ಪ್ರತಿಭಾ ಪುರಸ್ಕಾರ ಮತ್ತಿತರ ಸಮಾಜಮುಖಿ ಕಾರ್ಯ ಶಾಂತಕುಮಾರ್ ರವರು ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

    ತಾಲೂಕು ಕುರುಬ ಸಮಾಜದ ಅಧ್ಯಕ್ಷ ಚಂದ್ರೇಗೌಡ ಮಾತನಾಡಿ, ಸಣ್ಣಪುಟ್ಟ ಸಮುದಾಯಗಳ ಭವನಗಳ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಸರ್ಕಾರದಿಂದ ಹಣ ನೀಡಲು ಮೀನಾ ಮೇಷ ಎಣಿಸುತ್ತಾರೆ. ಅಹಿಂದ ಸಮಾಜ ಒಗ್ಗೂಡಬೇಕು ಎಂದರು.

    ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿ ಗೆಲುವು ಪಡೆಯಬೇಕಾದರೆ ಹಿಂದುಳಿದ ವರ್ಗಗಳ ಮತ ನಿರ್ಣಾಯಕ ಪಾತ್ರ ವಹಿಸುತ್ತದೆ. ಹಿಂದುಳಿದ ಸಮಾಜಗಳು ಒಗ್ಗೂಡ ಬೇಕು, ಸಂಘಟನೆ ಬಲವಾದರೆ ಏನನ್ನು ಬೇಕಾದರೂ ಪಡೆಯಲು ಸಾಧ್ಯ, ತಾಲೂಕಿನ ಜನಪ್ರತಿನಿಧಿಗಳು ಹಿಂದುಳಿದ ಸಮುದಾಯಕ್ಕೆ ಕೇವಲ ಆಶ್ವಾಸನೆ ನೀಡಿದ್ದು ಬಿಟ್ಟರೆ, ಸಮುದಾಯಗಳ ಅಭಿವೃದ್ಧಿಗೆ ಯಾವುದೇ ನೆರವು ಇದುವರೆಗೂ ನೀಡಿಲ್ಲ, ಕೇವಲ ಗುದ್ದಲಿ ಪೂಜೆ ನೆಪದಲ್ಲಿ ಚುನಾವಣೆ ಸಂದರ್ಭದಲ್ಲಿ ಜನಪ್ರತಿನಿಧಿಗಳು ಗಿಮಿಕ್ ಮಾಡಿದ್ದು ಬಿಟ್ಟರೆ, ಹಿಂದುಳಿದ ವರ್ಗದ ಸಮುದಾಯಗಳ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲ, ತಾಲೂಕಿನ ನೂರಾರು ಶಾಲೆಗಳು ಇಂದಿಗೂ ಕೂಡ ಶಿಥಿಲಾವಸ್ಥೆಯಲ್ಲಿವೆ, ಆದರೆ ಶಿಕ್ಷಣ ಮಂತ್ರಿಗಳಿಗೆ ಯಾವುದು ಗಮನಕ್ಕೆ ಬರುತ್ತಿಲ್ಲವೇ? ಕಳೆದ ಹಲವಾರು ವರ್ಷಗಳಿಂದ ನಾನು ತಾಲೂಕಿನ ಜನತೆಯ ಜೊತೆ ನಿರಂತರವಾಗಿ ಜೊತೆಯಾಗಿ ಇದ್ದೇನೆ, ಬಡತನದಲ್ಲಿ ಹುಟ್ಟಿದ ನನಗೆ ಕಷ್ಟ ಅಂದರೆ ಏನು ಎಂದು ತಿಳಿದಿದೆ, ಈ ತಾಲೂಕಿನಲ್ಲಿ ಸಾವಿರಾರು ನೊಂದ ಕುಟುಂಬಗಳು ಇವೆ, ತಾಲೂಕಿನ ಹೊಂದಾಣಿಕೆ ರಾಜಕಾರಣದಿಂದಾಗಿ ಬಡವರಿಗೆ ನ್ಯಾಯ ದೊರಕುತ್ತಿಲ್ಲ, ತಾಲೂಕಿನ ಜನರು ನನಗೆ ಶಕ್ತಿ ತುಂಬಿದರೆ ದಿನದ 24 ಗಂಟೆ ನಾನು ಸೇವೆ ಮಾಡಲು ಸಿದ್ದನಾಗಿದ್ದೇನೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಒಂದು ಅವಕಾಶ ತಾಲೂಕಿನ ಜನತೆ ನೀಡಬೇಕು ಎಂದರು.

    ಇದೇ ಸಂದರ್ಭದಲ್ಲಿ ತಾಲೂಕಿನ ಹಿಂದುಳಿದ ಸಮುದಾಯ ಭವನಗಳ ನಿರ್ಮಾಣಕ್ಕೆ ಕೆ.ಟಿ.ಶಾಂತಕುಮಾರ್ ವೈಯಕ್ತಿಕವಾಗಿ ಧನಸಹಾಯ ನೀಡಿದರು, ಅಲ್ಲದೆ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಿಂದುಳಿದ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ವಿಕಲಾಂಗ ಮಕ್ಕಳಿಗೆ ಸಹಾಯ ನೀಡಿದರು, ಕಾರ್ಯಕ್ರಮದಲ್ಲಿ ಹಿಂದುಳಿದ ಸಮುದಾಯದ ಮುಖಂಡರಾದ ಶಿವಪುರದ ಸಿದ್ದರಾಮಯ್ಯ, ಲಿಂಗಯ್ಯ, ನಿಜಲಿಂಗಪ್ಪ ,ನಾಗರಾಜು, ಬಾಲರಾಜು, ಪ್ರಕಾಶ್, ಪರಮೇಶ ಆಚಾರ್, ಚಂದ್ರಣ್ಣ, ಲೋಕೇಶ್, ಉಗ್ರಯ್ಯ ಸೇರಿದಂತೆ, ಅಪಾರ ಸಂಖ್ಯೆಯಲ್ಲಿ ಹಿಂದುಳಿದ ಸಮುದಾಯದ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

    ವರದಿ: ಆನಂದ್, ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು | ವಿಪ್ ಉಲ್ಲಂಘಿಸಿ ಅಡ್ಡ ಮತದಾನ: ನಾಲ್ವರು ನಗರ ಸಭಾ ಸದಸ್ಯರು ಅನರ್ಹ

    September 26, 2025

    ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ

    September 20, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

    September 29, 2025

    ತುಮಕೂರು: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ತರಗತಿ ಬಹಿಷ್ಕಾರಿಸಿದರು. ಎಐಡಿಎಸ್‌ ಒ ನೇತೃತ್ವದಲ್ಲಿ…

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.