ಹಾವೇರಿ :ಈ ಸರ್ಕಾರದಲ್ಲಿ ಏನೇ ಕೆಲಸವಾಗಬೇಕಾದರೂ ಲಂಚ ಕೊಡಬೇಕು. ಹೀಗಾಗಿ ಜನರೇ ಬಿಜೆಪಿಗೆ ಬೆಂಬಲ ಕೊಡುವ ಮುನ್ನ ಯೋಚಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬೊಮ್ಮಾಯಿ ಅವರೇ ನಿಮ್ಮ ಸರ್ಕಾರ ಎರಡು ತಿಂಗಳು ಮಾತ್ರ ಇರೋದು. ಎರಡು ತಿಂಗಳ ಬಳಿಕ ಈ ವೇದಿಕೆ ಮೇಲೆ ಕುಳಿತವರ ಸರ್ಕಾರವಿರುತ್ತೆ ಎಂದರು.
40 ಪರ್ಸೆಂಟ್ ಕಮಿಷನ್ ಕೊಡಲು ಬಿಜೆಪಿಗೆ ಬೆಂಬಲ ಕೊಡಬೇಕಾ..? ರಾಜ್ಯದಲ್ಲಿ ನಿರುದ್ಯೋಗ ಸೃಷ್ಠಿ ಮಾಡಿದ ಬಿಜೆಪಿಗೆ ಬೆಂಬಲ ಕೊಡಬೇಕಾ..?ಬಿಜೆಪಿಗೆ ಬೆಂಬಲ ಕೊಡುವ ಮುನ್ನ ಜನರು ಯೋಚಿಸಿ. ಏನೇ ಕೆಲಸ ಆಗಬೇಕಾದರೂ ಲಂಚ ಕೊಡಬೇಕು ಎಂದು ಕಿಡಿಕಾರಿದರು.ಕಲಬುರ್ಗಿಯಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ನೀಡಿದ್ದಾರೆ. ತಾಂಡಾಗಳನ್ನ ಕಂದಾಯ ಗ್ರಾಮ ಮಾಡಿದ್ದು ನಮ್ಮ ಸರ್ಕಾರ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಹಾವೇರಿ ಜಿಲ್ಲೆ ಶಾಸಕರು ಕಾಂಗ್ರೆಸ್ ಬರುವುದಕ್ಕೆ ಸಿದ್ದರಾಗಿದ್ದಾರೆ. ಸಮಯ ಬರಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಡಿ.ಕೆ .ಶಿವಕುಮಾರ್ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


