nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಸಿಸುವವನನ್ನೇ ಮನೆಯೊಡೆಯನನ್ನಾಗಿ ಮಾಡಿದ್ದು ನಾವು: ಸಿದ್ದರಾಮಯ್ಯ
    ರಾಜ್ಯ ಸುದ್ದಿ January 22, 2023

    ವಾಸಿಸುವವನನ್ನೇ ಮನೆಯೊಡೆಯನನ್ನಾಗಿ ಮಾಡಿದ್ದು ನಾವು: ಸಿದ್ದರಾಮಯ್ಯ

    By adminJanuary 22, 2023No Comments2 Mins Read
    siddaramaiha

    ಹಾಸನ: ನಾನು ಈ ಹಿಂದೆ ಅನೇಕ ಕಾರ್ಯಕ್ರಮಗಳಿಗೆ ಹಾಸನ ಜಿಲ್ಲೆಗೆ ಆಗಮಿಸಿದ್ದೆ, ಆದರೆ ಇಂದು ಜನರಲ್ಲಿರುವ ಉತ್ಸಾಹ ಈ ಹಿಂದೆ ಕಂಡಿರಲಿಲ್ಲ. ಇದನ್ನು ನೋಡಿದರೆ ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಗೊತ್ತಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

    ಹಾಸನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ “ಪ್ರಜಾಧ್ವನಿ” ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು,  ರಾಜ್ಯದ ಬಿಜೆಪಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಸರ್ಕಾರ ನಾಡಿನ ಬಡವರು, ದಲಿತರು, ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ. ಹಾಸನ ಅತಿ ಹೆಚ್ಚು ರೈತರನ್ನು ಹೊಂದಿರುವ ಜಿಲ್ಲೆ. 2022ರ ಒಳಗಡೆ ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇವೆ ಎಂದು 2016ರಲ್ಲಿ ನರೇಂದ್ರ ಮೋದಿ ಅವರು ರೈತರಲ್ಲಿ ಭ್ರಮೆಯನ್ನು ಹುಟ್ಟಿಸಿದ್ದರು. ಇದನ್ನು ಹೇಳುತ್ತ ಹೇಳುತ್ತಲೇ 3 ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದರು. ದೆಹಲಿಯ ಹೊರವಲಯದಲ್ಲಿ ದೇಶದ ರೈತರು ಅನೇಕ ದಿನಗಳ ಕಾಲ ಹೋರಾಟ ಮಾಡಿದರು, ಮೊದಮೊದಲು ಮೋದಿ ಅವರು ಕ್ಯಾರೇ ಎನ್ನಲಿಲ್ಲ, ಕೊನೆಗೆ ಹೋರಾಟದ ಕಾವು ಜಾಸ್ತಿಯಾದ ಮೇಲೆ ಬೇರೆ ದಾರಿಯಿಲ್ಲದೆ 3 ಮಾರಕ ಕಾಯ್ದೆಗಳನ್ನು ವಾಪಾಸು ಪಡೆದರು. ರಾಜ್ಯದಲ್ಲಿ ಕೂಡ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದರು, ದೇವರಾಜ ಅರಸು ಅವರ ಕಾಲದಲ್ಲಿ ಉಳುವವನೆ ಭೂಮಿಯ ಒಡೆಯ ಎಂದು ಮಾಡಿದ್ದರು, ಈ ಸರ್ಕಾರ ಭೂಸುಧಾರಣಾ ಕಾಯ್ದೆಯ ಸೆಕ್ಷನ್‌ 79(ಎ), (ಬಿ), (ಸಿ) ಗಳನ್ನು ತೆಗೆದುಹಾಕಿ ಉಳ್ಳವನನ್ನು ಭೂಒಡೆಯನನ್ನಾಗಿ ಮಾಡಿದ್ದಾರೆ. ಇದರಿಂದ ಸಣ್ಣ ಮತ್ತು ಮಧ್ಯಮ ಹಿಡುವಳಿ ಹೊಂದಿರುವ ರೈತರು ನಾಶವಾಗುತ್ತಿದ್ದಾರೆ ಎಂದರು.

    2018ರ ಪ್ರಣಾಳಿಕೆಯಲ್ಲಿ ಬಿಜೆಪಿ ತಾವು ಅಧಿಕಾರಕ್ಕೆ ಬಂದರೆ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳಲ್ಲಿರುವ ರೈತರ 1 ಲಕ್ಷದ ವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಒಂದು ರೂಪಾಯಿ ಆದ್ರೂ ಸಾಲ ಮನ್ನಾ ಮಾಡಿದ್ದಾರ? ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ 78,000 ಕೋಟಿ ರೂ. ಮೊತ್ತದ ರೈತರ ಸಾಲವನ್ನು ಮನ್ನಾ ಮಾಡಿದ್ದರು. ಮೋದಿ ಅವರು ಪ್ರಧಾನಿಯಾಗಿ 9 ವರ್ಷವಾಗುತ್ತಾ ಬಂತು ಒಂದು ರೂಪಾಯಿಯಾದ್ರೂ ರೈತರ ಸಾಲ ಮನ್ನಾ ಮಾಡಿದ್ರಾ?

    ರೈತರ ಸಾಲಮನ್ನಾ ಮಾಡುತ್ತೇವೆ ಎಂಬ ಭರವಸೆಯನ್ನು ನೀಡದ ಹೊರತಾಗಿ ಕೂಡ ಬರಗಾಲ ಬಂದು ರೈತರು ಸಂಕಷ್ಟದಲ್ಲಿದ್ದಾರೆ ಎಂಬ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಿರುವಾಗ ಸಹಕಾರಿ ಬ್ಯಾಂಕುಗಳಲ್ಲಿನ 22 ಲಕ್ಷದ 27 ಸಾವಿರ ರೈತರ 50,000 ರೂ. ವರೆಗಿನ ಒಟ್ಟು 8,165 ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದೆ ಎಂದರು.

    ಹಟ್ಟಿಗಳಲ್ಲಿ, ತಾಂಡಗಳಲ್ಲಿ, ಮಜರೆಗಳಲ್ಲಿ ವಾಸಮಾಡುವ ದಾಖಲೆ ರಹಿತ ಜನನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡುವ ಕಾನೂನನ್ನು ಜಾರಿ ಮಾಡಿದವರು ನಾವು. ದೇವರಾಜ ಅರಸು ಅವರ ರೀತಿಯಲ್ಲೆ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ವಾಸಿಸುವವನನ್ನೇ ಮನೆಯೊಡೆಯನನ್ನಾಗಿ ಮಾಡಿದ್ದು ನಾವು. ಅವರಿಗೆ ಈಗ ಹಕ್ಕುಪತ್ರ ಕೊಡಲು ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನದ ಕುರಿತು ಕರ್ನಾಟಕ ಸರ್ಕಾರವು ಸುಪ್ರೀಂ…

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.