ಬೆಳಗಾವಿ: ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿ ಹಿರಿಯ ಉಪ ನೋಂದಣಾಧಿಕಾರಿ, ಕಚೇರಿ ಸಹಾಯಕ ಹಾಗೂ ಮಧ್ಯವರ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಚಿಕ್ಕೋಡಿಯ ಹಿರಿಯ ಉಪ ನೋಂದಣಾಧಿಕಾರಿ ಜಿ.ಪಿ.ಶಿವರಾಜು, ಸಹಾಯಕ, ಕಂಪ್ಯೂಟರ್ ಆಪರೇಟರ್ ಹುಸೇನ್ ರೆಹಮಾನ್ಭಾಯಿ ಹಾಗೂ ಮಧ್ಯವರ್ತಿ ಸಂದೀಪ ಪಾಟೀಲ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಚಿಕ್ಕೋಡಿ ತಾಲೂಕಿನ ಡೋಣೆವಾಡ ಗ್ರಾಮದಲ್ಲಿ ಜಮೀನು ಖರೀದಿಸಿದ್ದ ರಾಜು ಪಾಶ್ಚಾಪುರೆ ಅವರು, ನೋಂದಣಿಗೆ ಎಲ್ಲ ಹಂತದ ಸರ್ಕಾರಿ ಶುಲ್ಕ ಪಾವತಿಸಿದ್ದರೂ, ಆದರೆ ಹೆಚ್ಚುವರಿಯಾಗಿ 30 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಅಧಿಕಾರಿಗಳಿಗೆ ರಾಜು ಪಾಶ್ಚಾಪುರೆ ಅವರು ದೂರು ನೀಡಿದ್ದರು.
ಈ ಹಿನ್ನೆಯಲ್ಲಿ ಎಸ್ಪಿ ಯಶೋಧಾ ವಂಟಗೋಡಿ ನೇತೃತ್ವದಲ್ಲಿ ಕಾರ್ಯಾಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಗಳನ್ನು ಬಂಧಿಸಿ 30 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


