nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಲಿಜ ಸಂಕಲ್ಪ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ
    ಕೊರಟಗೆರೆ January 25, 2023

    ಬಲಿಜ ಸಂಕಲ್ಪ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ

    By adminJanuary 25, 2023No Comments2 Mins Read
    balija sankalpa

    Provided by
    Provided by

    ಕೊರಟಗೆರೆ: ಬಲಿಜ ಸಮುದಾಯಕ್ಕೆ ಪೂರ್ಣ ಪ್ರಮಾಣದಲ್ಲಿ 2ಎ ಮೀಸಲಾತಿ ಸ್ವೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಜ.27 ರಂದು ಶುಕ್ರವಾರ ಬೆಂಗಳೂರಿನ ಗಾಂಧಿನಗರದ ಪ್ರೀಡಂ ಪಾರ್ಕ್ನಲ್ಲಿ ನಡೆಯುವ ಬೃಹತ್ ಸಂಕಲ್ಪ ಪ್ರತಿಭಟನೆ ಕಾರ್ಯಕ್ರಮದಲ್ಲಿ ತಾಲೂಕಿನ ಬಲಿಜ ಸಮುದಾಯದ ಪ್ರತಿಯೊಬ್ಬರು ಭಾಗವಹಿಸುವಂತೆ ತಾಲೂಕು ಬಲಿಜ ಸಂಘದ ಅಧ್ಯಕ್ಷ ಎನ್.ಪದ್ಮನಾಭ್ ಮನವಿ ಮಾಡಿದ್ದಾರೆ.

    ಕಾಮಧೇನು ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪುರ್ವಭಾವಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲಿನಿಂದ ಬಲಿಜ ಸಮುದಾಯ ಶೇ. 28% ರಷ್ಟು ಇದ್ದ ವೀಸಲಾತಿಯನ್ನು 1994 ರಲ್ಲಿ ಯಾವುದೇ ಸೂಚನೆ ಹಾಗೂ ಸಮಿತಿಯ ವರದಿಯ ಶಿಫಾರಸ್ಸು ಇಲ್ಲದೆ ತೆಗೆದು ರಾಜಕೀಯ ಮತ್ತು ಉದ್ಯೋಗಕ್ಕೆ ಕೇವಲ ಶೇ. 4% ರಷ್ಟು ಮೀಸಲಾತಿ ಇರುವ 3ಎ ಗೆ ಸೇರಿಸಿದ್ದು, ಇದನ್ನು ಪ್ರತಿಭಟಿಸಿ ಕಳೆದ 28 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಮೀಸಲಾತಿ ನೀಡದೆ ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ, ಸತತ ಹೋಟದ ಫಲವಾಗಿ ಕೇವಲ ವಿದ್ಯಾಬ್ಯಾಸಕ್ಕಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ 2ಎ ಮೀಸಲಾತಿ ಸೌಲಭ್ಯ ನೀಡಲಾಗಿದೆ ಅದರೆ ಪೂರ್ಣಪ್ರಮಾಣದ 2ಎ ಮೀಸಲಾತಿ ಗಾಗಿ ಅನೇಕ ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗದ ಕಾರಣದಿಂದ ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಎಂ.ಆರ್.ಜಯರಾಮ್ ಮತ್ತು ಎಂ.ಆರ್.ಸೀತಾರಾಮ್ ನೇತೃತ್ವದಲ್ಲಿ ಜ.27 ರಂದು ಶುಕ್ರವಾರ ಬೆಂಗಳೂರಿನ ಗಾಂಧಿನಗರದ ಪ್ರೀಡಂ ಪಾರ್ಕ್ನಲ್ಲಿ ನಡೆಯುವ ಬೃಹತ್ ಸಂಕಲ್ಪ ಪ್ರತಿಭಟನೆ ನಡೆಯುತ್ತಿದ್ದು ಪ್ರತಿಯೊಬ್ಬ ಬಲಿಜ ಬಾಂಧವರು ಭಾಗವಹಿಸುವಂತೆ ಮನವಿ ಮಾಡಿದರು.

    ತಾಲೂಕು ಬಲಿಜ ಸಂಘದ ಪತ್ರಿಕಾ ವಕ್ತಾರ ಹಾಗೂ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ, ಸುಮಾರು ವರ್ಷಗಳಿಂದ ಬಲಿಜ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುಲಾಗುತ್ತಿದೆ, ರಾಜ್ಯದಲ್ಲಿ ಪ್ರಬಲ ಸಮುದಾಯಗಳಿಗೆ ಸರ್ಕಾರ ಎ.ಬಿ.ಸಿ.ಡಿ. ಎಂಬ ಹೊಸ ಮೀಸಲಾತಿಯ ಸೌಲಬ್ಯವನ್ನು ಕಲ್ಪಿಸಲು ಹೊರಟ್ಟಿದ್ದು ಆದರೆ ಹಿಂದುಳಿದ ದ್ವನಿಯಿಲ್ಲದ ಬಲಿಜ ಜನಾಂಗದ ಕೂಗಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಬಲಿಜ ಸಮುದಾಯ ರಾಜ್ಯದ 54 ವಿಧಾನ ಸಭಾ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ.

    ಮೀಸಲಾತಿಯಲ್ಲಿ ಅನ್ಯಾಯವಾಗಿರುವ ಬಲಿಜ ಸಮುದಾಯಕ್ಕೆ ನ್ಯಾಯವದಗಿಸಿ ಕೊಡುವಂತೆ ಜ.27 ರಂದು ಸಂಕಲ್ಪ ಪ್ರತಿಭಟನೆಸುತ್ತಿದ್ದು ಸರ್ಕಾರ ನಮ್ಮ ಮನವಿಗೆ ಸ್ಪಂದಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಮೀಸಲಾತಿ ಕೂಡುವವರೆಗೂ ಉಗ್ರ ಹೋರಾಟದೊಂದಿಗೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ಅವರು ಬಲಿಜ ಸಮುದಾಯ ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕಾಗಿದೆ ಎಂದರು.


    Provided by
    Provided by

    ಜಿಲ್ಲಾ ಸಂಘದ ಪ್ರತಿನಿಧಿ ಹಾಗೂ ಮುಖಂಡ ಕೆ.ಎಲ್.ಆನಂದ್ ಮಾತನಾಡಿ, 2ಎ ಮೀಸಲಾತಿ ವಿಚಾರದಲ್ಲಿ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕು ಎಂದ ಅವರು ರಾಜ್ಯದಲ್ಲಿ ಬಲಿಜ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರ್ಕಾರ ಸರಿಪಡಿಸಬೇಕು, ತಪ್ಪಿದಲ್ಲಿ ಉಗ್ರಹೋರಾಟದ ಕ್ರಾಂತಿಕಾರಕ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕು ಎಂದರೆ ಪ್ರತಿಯೊಬ್ಬರೂ ಜ.27 ರಂದು ನಡೆಯುವ ಸಂಕಲ್ಪ ಸಭೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

    ತಾಲೂಕು ಪ್ರಧಾನ ಕಾರ್ಯದರ್ಶಿ ನವೀನ್ಕುಮಾರ್ ಮಾಹಿತಿ ನೀಡಿ 27 ರಂದು ಸಂಕಲ್ಪಯಾತ್ರೆಯಲ್ಲಿ ಬಾಗವಹಿಸುವ ಸಮುದಾಯದವರಿಗೆ ಕೊರಟಗೆರೆ ಯಿಂದ ವಾಹನದ ವ್ಯವಸ್ಥೆಮಾಡಲಾಗುತ್ತಿದ್ದು ಜ.25 ರಂದು ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಸಂಘದ ಖಜಾಂಜಿ ವೆಂಕಟೇಶ್, ಕಾರ್ಯದರ್ಶಿ ನವೀನ್ಕುಮಾರ್, ಸಹ ಕಾರ್ಯದರ್ಶಿ ಪ್ರೇಂಡ್ಸ್ ಗ್ರೂಪ್ ರವಿಕುಮಾರ್, ಯುವ ಬಲಿಜ ಸಂಘದ ಅಧ್ಯಕ್ಷ ಸಂಜಯ್, ಸಂಘದ ನಿರ್ದೇಶ ಕರುಗಳಾದ ಬೆನಕಾ ವೆಂಕಟೇಶ್, ಕೆ.ಬಿ.ಲೋಕೇಶ್, ದೇವರಾಜು, ಅಕ್ಕಿರಾಂಪುರ ಮಂಜುನಾಥ್, ಎಸ್.ಆರ್.ಟೈಲರ್ ಶ್ರೀನಿವಾಸ್, ವೆಂಕಟಾಚಲಿ, ದಯಾನಂದ್, ಡೈರಿ ಶ್ರೀನಿವಾಸ್, ಹನುಮೇನಹಳ್ಳಿ ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ. ಎಂ. ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.