ಕೊರಟಗೆರೆ: ತಾಲೂಕಿನ ಪೂರ್ವ ಕಾಲೇಜು ಮೈದಾನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹ ಅಭಿಯಾನದಲ್ಲಿ ಅಡಿಯಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಹಾಗೂ ಪರಿವಾರದ ಕಾಳಜಿ ಬಗ್ಗೆ ಹೇಗೆ ಇರಬೇಕು ಎನ್ನುವುದರ ಬಗ್ಗೆ ಕೊರಟಗೆರೆ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಮಂಜುಳಾ ಎಂ.ಎನ್. ವಿದ್ಯಾರ್ಥಿಗಳಿಗೆ ಜಾಗೃತಿಯ ಬಗ್ಗೆ ಮಾಹಿತಿ ತಿಳಿಸಿದರು.
ನಂತರ ಎ ಎಸ್ ಐ ಮಂಜುನಾಥ್ ಮಾತನಾಡಿ, ಶಾಲೆಗೆ ಬರುವಾಗ ಹಾಗೂ ಶಾಲೆಯಿಂದ ಹೊರಡುವಾಗ ಪಕ್ಕದಲ್ಲಿ ನಿರ್ಮಿಸಿರುವ ಫುಟ್ಪಾತ್ ಮೇಲೆ ವಿದ್ಯಾರ್ಥಿಗಳಾಗಲಿ ಸಾರ್ವಜನಿಕರಾಗಲಿ ಸಂಚರಿಸಬೇಕು. ಅದನ್ನು ಬಿಟ್ಟು ರಸ್ತೆಗೆ ಇಳಿಯುವುದು ಗುಂಪು ಗುಂಪಾಗಿ ಒಟ್ಟೊಟ್ಟಿಗೆ ಹೋಗುವುದು, ಶಾಲೆ ಬಿಟ್ಟ ತಕ್ಷಣ ರಸ್ತೆಗೆ ಓಡುವುದು ಯಾವುದನ್ನು ಮಾಡಬಾರದು. ಫುಟ್ಪಾತ್ ಮೇಲೆ ನಡೆದುಕೊಂಡು ತಮ್ಮ ಮನೆಗಳಿಗೆ ತೆರಳಬೇಕು ಇವೆಲ್ಲವೂ ಕೂಡ ತಮ್ಮ ಸುರಕ್ಷತೆಗಾಗಿ ಕಾನೂನು ನಿಯಮಗಳನ್ನ ಪಾಲಿಸಬೇಕು. ತಮ್ಮ ಜೀವವನ್ನು ಉಳಿಸಿಕೊಂಡು ಇತರರ ಜೀವವನ್ನು ಕಾಪಾಡುವುದೇ ನಮ್ಮ ನಿಮ್ಮೆಲ್ಲರ ಕರ್ತವ್ಯ ಇದುವೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಭಿಯಾನದ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಪೊಲೀಸ್ ಠಾಣಾ ಅಧಿಕಾರಿಗಳು ತಾಲೂಕು ಕಚೇರಿಯ ಅಧಿಕಾರಿಗಳು ಹಾಜರಿದ್ದರು.
ವರದಿ : ಮಂಜುಸ್ವಾಮಿ. ಎಂ. ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy