ಚಿಕ್ಕನಾಯಕನಹಳ್ಳಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರ ಕುರಿತು ಲಘುವಾಗಿ ಮಾತನಾಡುವುದನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ನಿಲ್ಲಿಸದಿದ್ದರೆ, ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಾಲ್ಲೂಕು ಒಕ್ಕಲಿಗ ಸಮುದಾಯ ಎಚ್ಚರಿಕೆ ನೀಡಿದೆ.
ಪಟ್ಟಣದಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಮಾಜದ ಅಧ್ಯಕ್ಷ ಹರ್ಷ ದೇವೇಗೌಡರು ದೇಶದ ಪ್ರಧಾನಿ ಹುದ್ದೆ ಏರಿ ನಾಡಿಗೆ ಅನೇಕ ಕೊಡುಗೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ದೇವೇಗೌಡರ ಕುಟುಂಬ ಲೂಟಿ ಹೊಡೆದಿದ್ದರೆ, ಅಧಿಕಾರದಲ್ಲಿದ್ದರೂ ಯಾಕೆ ಬಿಜೆಪಿ ಸರ್ಕಾರ ತನಿಖೆ ನಡೆಸಿ ಶಿಸ್ತು ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಅವರನ್ನು ಇಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮಾಧುಸ್ವಾಮಿ ಅವರು ಯಾರನ್ನೂ ಬೆಳೆಸಿಲ್ಲ, ಹೇಳಿದನ್ನು ಕೇಳುವವರನ್ನು ಜೊತೆಗೆ ಇಟ್ಟುಕೊಂಡಿದ್ದಾರೆ. ವಿದ್ಯಾವಂತರು ಅವರ ಜೊತೆಯಲ್ಲಿಲ್ಲ ಒಕ್ಕಲಿಗರು 40 ಸಾವಿರ ಜನ ಸಂಖ್ಯೆ ಕ್ಷೇತ್ರದಲ್ಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮಾಧುಸ್ವಾಮಿಯನ್ನು 3ನೇ ಸ್ಥಾನಕ್ಕೆ ಇಳಿಸುವುದಾಗಿ ಅವರು ಎಚ್ಚರಿಕೆ ನೀಡಿದರು.
ಈ ವೇಳೆ ಸಮುದಾಯದ ಗೌರವಾಧ್ಯಕ್ಷ ರಾಮಚಂದ್ರಯ್ಯ, ತಾಲೂಕು ಒಕ್ಕಲಿಗ ಸಮುದಾಯದ ನಿರಂಜನ ಮೂರ್ತಿ, ನಿಂಗರಾಜು, ಚಂದ್ರಣ್ಣ, ಕುಮಾರಯ್ಯ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1