nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025
    Facebook Twitter Instagram
    ಟ್ರೆಂಡಿಂಗ್
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    • ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
    • ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ತಿ ಆಸೆಗೆ ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಮೊಮ್ಮಗನಿಗೆ ಶಾಕ್ ನೀಡಿದ ಅಧಿಕಾರಿಗಳು
    ಕೊರಟಗೆರೆ January 31, 2023

    ಆಸ್ತಿ ಆಸೆಗೆ ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಮೊಮ್ಮಗನಿಗೆ ಶಾಕ್ ನೀಡಿದ ಅಧಿಕಾರಿಗಳು

    By adminJanuary 31, 2023No Comments2 Mins Read
    koratagere

    ಕೊರಟಗೆರೆ : ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಎನ್ನುವ ವೃದ್ದೆಯನ್ನು ತನ್ನ ಮೊಮ್ಮಗನೇ ಮನೆಯಿಂದ ಹೊರ ಹಾಕಿದ್ದ ದಾರುಣ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ  ಮಧುಗಿರಿ ಉಪ ವಿಭಾಗಾಧಿಕಾರಿಗಳ ಆದೇಶದಂತೆ ಕೊರಟಗೆರೆ ತಹಶೀಲ್ದಾರ್ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಿರಿಯ ನಾಗರಿಕರ ಹಕ್ಕು ಕಾಯ್ದೆ ಅಡಿಯಲ್ಲಿ ಸುಮಾರು 80 ವಯಸ್ಸಿನ ಕಾವಲಮ್ಮ ವೃದ್ದೆಗೆ ತಾನು ವಾಸಿಸುತ್ತಿದ್ದ ಮನೆಯನ್ನು ಹಿಂದಿರುಗಿಸಿ ಕೊಟ್ಟಿರುವ ಘಟನೆ ನಡೆದಿದೆ.

    ಘಟನೆಯ ಬಗ್ಗೆ ತಹಶೀಲ್ದಾರ್ ನರಸಿಂಹಮೂರ್ತಿ ಮಾತನಾಡಿ, ಉಪವಿಭಾಗಾಧಿಕಾರಿಗಳ ಆದೇಶದಂತೆ ಪಟ್ಟಣದ ಮೂರನೇ ವಾರ್ಡಿನ ಕಾವಲಮ್ಮ ಲೇಟ್ ರಾಮಯ್ಯ ಎನ್ನುವವರನ್ನು ಮಾರುತಿ ಎನ್ನುವವರು ಬಲವಂತದಿಂದ ಮನೆಯಿಂದ ಹೊರ ಹಾಕಿದ್ದ ದೂರಿನ ಅನ್ವಯ ಮೇಲಾಧಿಕಾರಿಗಳ ಆದೇಶದಂತೆ ಸ್ಥಳಕ್ಕೆ ಭೇಟಿ ನೀಡಿ   ವಯೋವೃದ್ದೆಯಾದ ಕಾವಲಮ್ಮನಿಗೆ ಇವರ ಮುಂದಿನ ಜೀವನವನ್ನು ಮನದಲ್ಲಿಟ್ಟುಕೊಂಡು ಕಾವಲಮ್ಮನಿಗೆ ಮನೆಯನ್ನು ಅಧಿಕಾರಿಗಳ ಸಮಕ್ಷಮದಲ್ಲಿ ಹಿಂತಿರುಗಿಸಲಾಯಿತು. ವಯೋವೃದ್ದೆಯಾದ ಕಾವಲಮ್ಮ ಇನ್ನು ಮುಂದೆ ಸಂತೋಷದಿಂದ ತನ್ನ ಮನೆಯಲ್ಲಿ ವಾಸಿಸಬಹುದು ಎಂದು ತಿಳಿಸಿದರು.


    Provided by
    Provided by

    koratagere

    ತನ್ನ ಮನೆಗೆ ಮರಳಿ ಬಂದ ಅಜ್ಜಿ ಕಾವಲಮ್ಮ ಮಾತನಾಡಿ.. ಯಾವಾಗಲೂ ತನ್ನ ಮೊಮ್ಮಗ  ಮಾರುತಿ ನನಗೆ ಬಹಳ ತೊಂದರೆ ಕೊಟ್ಟು ಸದಾ ಹಿಂಸೆ ಕೊಡುತ್ತಿದ್ದ ನನ್ನ ಗಂಡ ನಾನು ಕಷ್ಟಪಟ್ಟು ಕೂಲಿ ನಾಲಿ ಮಾಡಿ ಕಟ್ಟಿಕೊಡ ಮನೆಯಿಂದ ನನ್ನನ್ನೇ ಹೊರಹಾಕಿದ ಎಷ್ಟು ಬಾರಿ ಹೇಳಿದರೂ ಕೇಳುತ್ತಿರಲಿಲ್ಲ. ಇದೀಗ ಅಧಿಕಾರಿಗಳು ಬಂದು ನನ್ನ ಮನೆಯನ್ನು ನನಗೆ ಹಿಂತಿರುಗಿಸಿ ಕೊಟ್ಟಿದ್ದಾರೆ ತುಂಬಾ ಸಂತೋಷವಾಗಿದೆ. ನನ್ನ ಮುಂದಿನ ಜೀವನವನ್ನು ಸಂತೋಷದಿಂದ ನನ್ನ ಮನೆಯಲ್ಲಿ ನಡೆಸುತ್ತೇನೆ ಎಲ್ಲಾ ಅಧಿಕಾರಿಗಳಿಗೂ ಧನ್ಯವಾದ ಎಂದು ತಿಳಿಸಿದರು.

    ಅಜ್ಜಿಯನ್ನೇ ಮನೆಯಿಂದ ಹೊರ ಹಾಕಿದ ಪಾಪಿ ಮೊಮ್ಮಗ:

    ತನ್ನ ಪೋಕರಿತನಕ್ಕೆ ಪುಂಡಾಟಿಕೆಗೆ  ಅಜ್ಜಿ ಪ್ರತಿನಿತ್ಯ ಮೊಮ್ಮಗನಿಗೆ ಅಡ್ಡ ಬರುತ್ತಿದ್ದಳು ಎನ್ನುವ ಕಾರಣಕ್ಕೆ  ಅಜ್ಜಿಯನ್ನೆ ಮನೆಯಿಂದ ಹೊರ ಹಾಕಿದರೆ ಮೊಮ್ಮಗ ತಾನು ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದ. ಆದರೆ ಇಂತಹ ಪುಂಡರಿಗೆ ಕಾನೂನು ಎನು ಎನ್ನುವುದು ತಿಳಿದಿರುವುದಿಲ್ಲ.

    ಆದರೆ ಇಂದು ಆತನಿಗೆ ಕಾನೂನು ತಿಳಿಯುವಂತೆ ಮಾಡಿದ ಕೊರಟಗೆರೆಯ ಅಧಿಕಾರಿಗಳು ವಯೋವೃದ್ಧರ  ಕಾನೂನಿನ ಮನೆ ಕಳೆದುಕೊಂಡ ಅಜ್ಜಿಗೆ ಮರಳಿ ದೊರಕಿಸಿಕೊಟ್ಟಿದ್ದಾರೆ. ವಯೋವೃದ್ಧಿಗೆ ನ್ಯಾಯ ಸಿಕ್ಕಿರುವ  ಸಂತೋಷವನ್ನು ತಹಶೀಲ್ದಾರ್  ನರಸಿಂಹಮೂರ್ತಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಎಎಸ್ ಐ  ಧರ್ಮೇಗೌಡ ಸೇರಿದಂತೆ ಇತರ ಅಧಿಕಾರಿಗಳು ಮಾಧ್ಯಮದವರೊಂದಿಗೆ ಹಂಚಿಕೊಂಡರು.

    ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳಾದ  ಎ ಎಸ್ ಐ ಧರ್ಮೆಗೌಡ ಸಿಬ್ಬಂದಿ ಮಲ್ಲೇಶ್  ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಾದ ಆರ್ ಐ ಪ್ರತಾಪ್, ಪವನ್ ಕುಮಾರ್, ಬಸವರಾಜ್, ರಾಘವೇಂದ್ರ, ದೊಡ್ಡೇಗೌಡ  ಸೇರಿದಂತೆ  ಸ್ಥಳೀಯ ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ತುಮಕೂರು: ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ…

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.