ಕೊರಟಗೆರೆ: ಪ್ರತಿ ತಿಂಗಳ ಮೊದಲನೇ ಶನಿವಾರ ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ತಾಲ್ಲೂಕು ಕಚೇರಿಯ ಆವರಣದಲ್ಲಿ ನೂತನ ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ ಕಚೇರಿ ಆವರಣದಲ್ಲಿ ಕಸ ಕಡ್ಡಿ ಇನ್ನಿತರೆ ತ್ಯಾಜ್ಯ ವಸ್ತುಗಳನ್ನ ಸ್ವಚ್ಛತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಆದೇಶದಂತೆ ತುಮಕೂರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಮೊದಲನೇ ಶನಿವಾರ ಸ್ವಚ್ಛತಾ ದಿನವನ್ನಾಗಿ ಆಚರಿಸಿ ಕಚೇರಿ ಆವರಣವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಉದ್ದೇಶ ತುಂಬಾ ಚೆನ್ನಾಗಿದೆ. ಮೊದಲು ನಾವಿರುವ ಜಾಗ ಸ್ವಚ್ಛತೆಯಿದ ಇರಬೇಕು. ನಮ್ಮ ನಮ್ಮ ಇಲಾಖೆ ಕಚೇರಿಗಳನ್ನ ಸ್ವಚ್ಛವಾಗಿ ಇರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಆದ್ದರಿಂದ ನಾನು ಬಂದ ಮೊದಲನೇ ದಿನವೇ ಕಚೇರಿಯನ್ನು ಗಮನಿಸಿದೆ . ನಮ್ಮ ಇಲಾಖೆಯ ಸಿಬ್ಬಂದಿ ಗೂ ತುಂಬಾ ಸ್ವಚ್ಛತೆಯಿಂದ ಕಾಪಾಡಿಕೊಂಡಿದ್ದಾರೆ. ಕಚೇರಿ ಆವರಣದಲ್ಲಿ ಮಾತ್ರ ಸ್ವಲ್ಪ ಕಸ ಕಡ್ಡಿ ಇದ್ದಿದ್ದರಿಂದ ಅದನ್ನು ಕೂಡ ಇಂದು ಸ್ವಚ್ಛತೆಯ ಕಾರ್ಯಕ್ರಮದ ಅಡಿಯಲ್ಲಿ ಸ್ವಚ್ಛಗೊಳಿಸಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ಕಚೇರಿಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು, ಪಟ್ಟಣ ಪಂಚಾಯ್ತಿಯ ಆರೋಗ್ಯ ಅಧಿಕಾರಿ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy