nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025
    Facebook Twitter Instagram
    ಟ್ರೆಂಡಿಂಗ್
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    • ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
    • ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ಕ್ಷೇತ್ರದ ಅಭಿವೃದ್ದಿಗೆ 2573.67 ಕೋಟಿ ಅನುದಾನ ಬಳಕೆ: ಡಾ.ಜಿ.ಪರಮೇಶ್ವರ್
    ಕೊರಟಗೆರೆ February 7, 2023

    ಕೊರಟಗೆರೆ ಕ್ಷೇತ್ರದ ಅಭಿವೃದ್ದಿಗೆ 2573.67 ಕೋಟಿ ಅನುದಾನ ಬಳಕೆ: ಡಾ.ಜಿ.ಪರಮೇಶ್ವರ್

    By adminFebruary 7, 2023No Comments3 Mins Read
    g parameshwar

    ಕೊರಟಗೆರೆ: ಕಳೆದ ಐದು ವರ್ಷಗಳಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಕುಡಿಯುವ ನೀರು, ರಸ್ತೆ, ಆರೋಗ್ಯ,ವಸತಿ ನಿರ್ಮಾಣ ಹಾಗೂ ಎತ್ತಿನ ಹೊಳೆ ಯೊಜನೆಯೂ ಸೇರಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ 2573.67 ಕೋಟಿ ರೂ.ಗಳ ಅನುದಾನದ ತಂದು 4080 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮಾಜಿ ಡಿಸಿಎಂ ಹಾಗೂ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    ಇಂದು ತಮ್ಮ ಐದು ವರ್ಷಗಳ ಸಾಧನೆಯ ದಾಖಲೆಗಳನ್ನು ಒಳಗೊಂಡ ಹೆಜ್ಜೆ ಗುರುತು ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು,ಇದರಲ್ಲಿ ವಸತಿ ಯೋಜನೆಗಾಗಿ 95.75 ಕೋಟಿ, ಗಂಗಾ ಕಲ್ಯಾಣಕ್ಕೆ 1.53 ಕೋಟಿ, ಸಾಲ ಸೌಲಭ್ಯಕ್ಕೆ5.76 ಕೋಟಿ, ಇತರೆ ಇಲಾಖೆಗಳಿಂದ 95.21 ಕೋಟಿ ನೀಡಲಾಗಿದೆ. ಇದುವರೆಗೂ 19,501 ಜನರಿಗೆ ಸರಕಾರದ ಸೌಲಭ್ಯಗಳು ದೊರೆತಿವೆ. ಎತ್ತಿನ ಹೊಳೆ ಯೋಜನೆಯಡಿ 7 ಕಾಮಗಾರಿಗಳನ್ನು ಕೈಗೊಂಡು 1279.31 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ, ಪ್ರತಿ ಗ್ರಾಮಕ್ಕೂ ಒಂದಿಲೊಂದು ಯೋಜನೆಯ ಮೂಲಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಸಾಧನೆಯ ಪುಸ್ತಕವನ್ನು ಪ್ರತಿ ಮನೆಗೆ ತಲುಪಿಸುವ ಕೆಲಸವನ್ನು ಮಾಡಲಿದ್ದೇನೆ ಎಂದರು.


    Provided by
    Provided by

    2018ರ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಸೇರಿ ಮೈತ್ರಿ ಸರಕಾರ ರಚಿಸಲಾಯಿತು. ಕೊರಟಗೆರೆ ಜನರ ಆಶೀರ್ವಾದದಿಂದ ಸದರಿ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಂತಹ ಉನ್ನತ ಹುದ್ದೆಯಲ್ಲಿ ಕೆಲಸ ಮಾಡುವಂತಹ ಸೌಭಾಗ್ಯವನ್ನು ಕೊರಟಗೆರೆ ಕ್ಷೇತ್ರದ ಜನತೆ ಒದಗಿಸಿಕೊಟ್ಟರು. ಅದಕ್ಕಾಗಿ ಕೊರಟಗೆರೆ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ.

    ಸಾಧ್ಯವಾದಷ್ಟು ಮಟ್ಟಿಗೆ ಜನರ ನಿರೀಕ್ಷೆಗೆ ಅನುಗುಣವಾಗಿ ಸರಕಾರದಿಂದ ಅನುದಾನ ತಂದು, ಜನರಿಗೆ ಮೂಲಭೂತ ಸೌಕರ್ಯ ಸೇರಿದಂತೆ ಸರಕಾರದ ಸವಲತ್ತು ಒದಗಿಸಲು ಶಕ್ತಿ ಮೀರಿ ಶ್ರಮಿಸಿರುವುದಾಗಿ ಡಾ.ಜಿ.ಪರಮೇಶ್ವರ್ ನುಡಿದರು.

    ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ಏಕಲವ್ಯ ಶಾಲೆ, ಮುರಾರ್ಜಿ ದೇಸಾಯಿ,ಇಂದಿರಾಗಾಂಧಿ ವಸತಿಶಾಲೆ,ಅಂಬೇಡ್ಕರ್ ವಸತಿ ಶಾಲೆಯ ಮೂಲಕ ಸಾವಿರಾರು ಜನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಿದ್ದೇನೆ.ನಮ್ಮ ತಾಲೂಕಿನ ಏಕಲವ್ಯ ಶಾಲೆಯಲ್ಲಿ ಕಲಿತ ನಾಲ್ವರು ಮಕ್ಕಳು ಐಐಟಿಗೆ ವ್ಯಾಸಾಂಗ ಮಾಡಲು ಆಯ್ಕೆಯಾಗಿರುವುದು ಸಂತೋಷದ ವಿಚಾರವಾಗಿದೆ.ಜನರಿಗೆ ಮನೆ ಬಾಗಿಲಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸಲು ಸುಮಾರು 12.50 ಕೋಟಿ ವೆಚ್ಚದಲ್ಲಿ ತೋವಿನಕೆರೆ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಲಾಗಿದೆ.ಇದರ ಜೊತೆಗೆ ಪಟ್ಟಣದಲ್ಲಿ ತಾಯಿ ಮತ್ತು ಮಗು ಆಸ್ಪತ್ರೆ ತೆರೆಯಲು ಪ್ರಸ್ತಾವನೆ ಸಲ್ಲಿಸಿದ್ದು,ಮಂಜೂರಾತಿಯ ಹಂತದಲ್ಲಿದೆ.ಶುದ್ದ ಕುಡಿಯುವ ನೀರು ಒದಗಿಸಲು ಜಲಜೀವನ್ ಮೀಷನ್ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಕುಡಿಯುವ ನೀರಿನ ಲಭ್ಯತೆಗಾಗಿ ಎತ್ತಿನಹೊಳೆ ಯೋಜನೆಯ ಮೂಲಕ ಕ್ಷೇತ್ರದ ಸುಮಾರು 190 ಕೆರೆಗಳನ್ನು ತುಂಬಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಡಾ.ಜಿ.ಪರಮೇಶ್ವರ್ ನುಡಿದರು.

    ಎಲ್ಲರಿಗೂ ಸೂರು ಒದಗಿಸುವ ಉದ್ದೇಶದಿಂದ ವಸತಿ ಸಚಿವರೊಂದಿಗೆ ಮಾತನಾಡಿ, ಸುಮಾರು 10 ಸಾವಿರ ಮನೆಗಳನ್ನು ಈ ಹಿಂದೆಯೇ ಮಂಜೂರು ಮಾಡಿಸಲಾಗಿತ್ತು. ಮತ್ತೆ ಹೆಚ್ಚುವರಿಯಾಗಿ 5,000 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ಹೆಚ್ಚುವರಿ ಮನೆಗಳನ್ನು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಂಡಿದ್ದೇನೆ.

    ನಾನು ಹೈ.ಫೈ,ವೈಟ್ ಕಾಲರ್ ರಾಜಕಾರಣಿ ಎಂಬ ವಿರೋಧಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ತಲೆ ಕಡೆಸಿಕೊಳ್ಳದೆ, ವಿದ್ಯಾವಂತನಾಗಿ,ಜನರೊಂದಿಗೆ ಸದಾಕಾಲ ಬೆರತು ಕೆಲಸ ಮಾಡುತ್ತಾ ಬಂದಿದ್ದು,ನನ್ನ ಐದು ವರ್ಷಗಳ ರಿಪೊರ್ಟ್ ಕಾರ್ಡನ್ನು ಇಂದು ಜನರ ಮುಂದಿಟ್ಟಿದ್ದೇನೆ.ಪ್ರತಿ ಗ್ರಾ.ಪ.ವಾರು ಹೆಜ್ಜೆಯ ಗುರುತು ಕಿರು ಹೊತ್ತಿಗೆ ತಯಾರಾಗಿದ್ದು, ಪ್ರತಿ ಮನೆಗೂ ತಲುಪಿಸುವ ಕೆಲಸವನ್ನು ಮಾಡಲಿದ್ದೇನೆ ಎಂದು ಡಾ.ಜಿ.ಪರಮೇಶ್ವರ್ ಸ್ಪಷ್ಟ ಪಡಿಸಿದರು.

    ನನ್ನ ಇದುವರೆಗಿನ ಕಾರ್ಯಕ್ರಮಗಳಲ್ಲದೆ ಮುಂದೆಯೂ ಕೊರಟಗೆರೆ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಚಿಂತನೆ ನಡೆಸಿದ್ದು,ಕಲಾವಿದರೇ ಹೆಚ್ಚಾಗಿರುವ ಈ ಊರಿನಲ್ಲಿ ಒಂದು ಸಾಂಸ್ಕೃತಿಕ ಭವನ ನಿರ್ಮಾಣದ ಗುರಿ ಇದೆ.ಅಲ್ಲದೆ ತೋಟಗಾರಿಕಾ ಕ್ಷೇತ್ರದಲ್ಲಿ ತೋಟಗಾರಿಕಾ ಪಿತಾಮಹ ಡಾ.ಎಂ.ಹೆಚ್.ಮರಿಗೌಡರ ಹೆಸರಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಯ ಗುರಿ ಹೊಂದಲಾಗಿದೆ.ಸಾಂಸ್ಕೃತಿಕ ಭವನಕ್ಕೆ ನಾನು ಡಿ.ಸಿ.ಎಂ. ಆಗಿದ್ದಾಗ ಸುಮಾರು ೧೬ ಕೋಟಿ ರೂ ವೆಚ್ಚದ ಯೋಜನೆ ಸಿದ್ದಪಡಿಸಿ, ಜಾಗವನ್ನು ಗುರುತಿಸಲಾಗಿತ್ತು.ಸರಕಾರದ ಬದಲಾವಣೆಯಿಂದ ಅದು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಅದು ಕೈಗೂಡಲಿದೆ ಎಂಬ ವಿಶ್ವಾಸವನ್ನು ಡಾ.ಜಿ.ಪರಮೇಶ್ವರ್ ವ್ಯಕ್ತಪಡಿಸಿದರು.

    ರಾಜ್ಯಸರಕಾರದ ಇತ್ತೀಚಿನ ನಡವಳಿಕೆಯನ್ನು ಗಮನಿಸಿದರೆ ಆರ್ಥಿಕವಾಗಿ ದಿವಾಳಿಯಾಗಿರುವ ಸೂಚನೆಗಳು ಕಂಡು ಬರುತ್ತಿದೆ.ಶಾಲಾ ಮಕ್ಕಳಿಗೆ ಶೂ, ಸಮವಸ್ತ್ರ ಪುಸ್ತಕಗಳನ್ನು ನೀಡಿಲ್ಲ. ಹೈಕೋರ್ಟ್ ಸಹ ಇವರ ನಡವಳಿಕೆಗೆ ಛೀಮಾರಿ ಹಾಕಿದೆ.

    ತುಮಕೂರು ವಿವಿಗೆ ಅನುದಾನ ನೀಡಿಲ್ಲ. ಎಸ್ಸಿಪಿ ಮತ್ತು ಟಿ.ಎಸ್ಪಿ ಅನುದಾನದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಿಸಿರುವುದನ್ನು ಬಿಟ್ಟರೆ, ಬೇರೆ ಕಟ್ಟಡ ಇದುವರೆಗೂ ತಲೆ ಎತ್ತಿಲ್ಲ.ತುಮಕೂರು ರಾಯದುರ್ಗ, ತುಮಕೂರು-ದಾವಣಗೆರೆ ರೈಲ್ವೆ ಯೋಜನೆ ನೆನೆಗುದಿಗೆ ಬಿದ್ದಿವೆ. ಇದಕ್ಕೆ ಹಣಕಾಸಿನ ಕೊರತೆಯೇ ಕಾರಣ. ಸರಕಾರ ಈ ಸಾಲಿನ ಬಜೆಟ್‌ನಲ್ಲಿ ಈ ಎಲ್ಲಾ ಯೋಜನೆಗಳಿಗೆ ಹೆಚ್ಚುವರಿ ಹಣ ಮಂಜೂರು ಮಾಡಬೇಕು, ಹಾಗೆಯೇ ಸರಕಾರದ ಹಣಕಾಸಿನ ಪರಿಸ್ಥಿತಿಯ ಬಗ್ಗೆ ಜನರಿಗೆ ತಿಳಿಸಬೇಕೆಂದು ಡಾ.ಜಿ.ಪರಮೇಶ್ವರ್ ಆಗ್ರಹಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ತುಮಕೂರು: ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ…

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.