nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿ ಅಭಿವೃದ್ಧಿಗೆ ಎಫ್ಒಎಬಿ ಕಾರ್ಯ ಪ್ರಶಂಸನೀಯ:ರವಿಶಂಕರ ಗುರೂಜಿ
    ಜಿಲ್ಲಾ ಸುದ್ದಿ February 8, 2023

    ಬೆಳಗಾವಿ ಅಭಿವೃದ್ಧಿಗೆ ಎಫ್ಒಎಬಿ ಕಾರ್ಯ ಪ್ರಶಂಸನೀಯ:ರವಿಶಂಕರ ಗುರೂಜಿ

    By adminFebruary 8, 2023No Comments3 Mins Read
    ravishankar guruji

    Provided by
    Provided by

    ಬೆಳಗಾವಿ: ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳೆಲ್ಲ ಬೆಳಗಾವಿಯ ಅಭಿವೃದ್ಧಿಗಾಗಿ ಒಗ್ಗೂಡಿರುವುದು ಅತ್ಯಂತ ಒಳ್ಳೆಯ ಬೆಳವಣಿಗೆ ಎಂದು ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ ಗುರೂಜಿ ಪ್ರಶಂಸಿಸಿದ್ದಾರೆ.

    ಮಂಗಳವಾರ ಇಲ್ಲಿಯ ಕೆಎಲ್ಇ ಸಂಸ್ಥೆಯ ಶತಮಾನೋತ್ಸವ ಸಭಾಭವನದಲ್ಲಿ ಫೆಡರೇಶನ್ ಆಫ್ ಅಸೋಸಿಯೇಶನ್ಸ್ ಆಫ್ ಬೆಳಗಾವಿ (ಎಫ್ಒಎಬಿ) ಲೋಗೋ ಲೋಕಾರ್ಪಣೆಗೊಳಿಸಿ ಅವರು ಆಶಿರ್ವಚನ ನೀಡುತ್ತಿದ್ದರು. ಬೆಳಗಾವಿ ಎಂದರೆ ಒಂದು ಮೂಲೆಯಲ್ಲಿರುವ ಪ್ರದೇಶ, ಬೇಡದ ಕಾರಣಕ್ಕೆ ಸುದ್ದಿಯಲ್ಲಿರುವ ಪ್ರದೇಶ ಎನ್ನುವ ಭಾವನೆ ಹೊರಗಡೆ ಇದೆ. ಆದರೆ ನಿಜ ಸ್ಥಿತಿ ಆ ರೀತಿಯ ಇಲ್ಲ. ಇಲ್ಲಿ ಉದ್ಯಮ ಸ್ನೇಹಿ ವಾತಾವರಣವಿದೆ. ಇಲ್ಲಿನ ಉದ್ಯಮಿಗಳು ಹಾಗೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರೆಲ್ಲ ಸೇರಿ ಇಂತಹ ಒಂದು ಸಂಘಟನೆ ಕಟ್ಟಿಕೊಂಡು ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಮಾಜದ ಉನ್ನತಿಗೆ ಇಂತಹ ಪ್ರಯತ್ನ ಶ್ಲಾಘನೀಯ ಎಂದು ಅವರು ಹೇಳಿದರು.

    ಬೆಳಗಾವಿಯ ಇತಿಹಾಸ, ಬೆಳಗಾವಿಯ ಅಂತರ್ ಶಕ್ತಿಗಳನ್ನೆಲ್ಲ ತಿಳಿದು ನಿಜವಾಗಿ ಸಂತೋಷವಾಗಿದೆ. ಇಷ್ಟೊಂದು ಉದ್ಯಮಿಗಳು ಇಲ್ಲಿಯ ನೆಲದಲ್ಲಿ ತಯಾರಾಗಿದ್ದಾರೆ ಎನ್ನುವುದೇ ಖುಷಿ ನೀಡುವ ಸಂಗತಿ. ಎಫ್ಒಎಬಿ ಬೆಳಗಾವಿಯನ್ನು ಉನ್ನತ್ಯಕ್ಕೇರಿಸಲು ಮಾಡುತ್ತಿರುವ ಕೆಲಸ ಮೆಚ್ಚುವಂತದ್ದು ಎಂದು ರವಿಶಂಕರ ಗುರೂಜಿ ಹೇಳಿದರು.

    ರಾಜಕಾರಣಿಗಳು ತಮ್ಮ ಅವಧಿ ಪೂರ್ತಿ ಆರೋಪ ಪ್ರತ್ಯಾರೋಪ, ಜಗಳ ಮಾಡುವುದನ್ನು ನಿಲ್ಲಿಸಬೇಕು. ಇದರಿಂದ ಸಮಾಜದಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗುತ್ತಿದೆ. ಕೊನೆಯ 6 ತಿಂಗಳು ರಾಜಕೀಯ ಮಾಡಲಿ. ಆದರೆ ಉಳಿದ ಅವಧಿಯನ್ನು ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಅವರು ಕರೆ ನೀಡಿದರು.


    Provided by
    Provided by

    ಬೆಳಗಾವಿ ಸೇರಿದಂತೆ ಎಲ್ಲೆಡೆ ಜನರಲ್ಲಿ ಖಿನ್ನತೆ ಹೆಚ್ಚಾಗುತ್ತಿದೆ. ಮಾದಕ ವಸ್ತುಗಳ ಸೇವನೆ ಅತಿಯಾಗುತ್ತಿದೆ. ಕೋವಿಡ್ ನಂತರದ ದಿನಗಳಲ್ಲಿ ಪ್ರತಿ 40 ಸೆಕೆಂಡ್ ಗೆ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಲ್ಲಿ ಊಹಿಸಲು ಅಸಾಧ್ಯವಾದ ಮಟ್ಟಿಗೆ ಖಿನ್ನತೆ ಕಾಡುತ್ತಿದೆ. ಇದಕ್ಕೆಲ್ಲ ಕಡಿವಾಣ ಹಾಕುವ ಕೆಲಸ ಆಗಬೇಕಿದೆ. ಮಕ್ಕಳನ್ನು ಒಂದೆಡೆ ಸೇರಿಸುವ ಕೆಲಸ ಮಾಡುವುದಾದರೆ 6 ದಿನಗಳ ಶಿಬಿರ ಸಂಘಟಿಸುವ ಜವಾಬ್ದಾರಿಯನ್ನು ಆರ್ಟ್ ಆಫ್ ಲಿವಿಂಗ್ ತೆಗೆದುಕೊಳ್ಳುತ್ತದೆ ಎಂದು ರವಿಶಂಕರ ಗುರೂಜಿ ತಿಳಿಸಿದರು.

    ಮೆಡಿಟೇಶನ್ ಸಮಾಜದ ಇಂದಿನ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ದುರದೃಷ್ಟವೆಂದರೆ ಇದಕ್ಕೆ ಜಾತಿ ಬಣ್ಣ ನೀಡಲಾಗುತ್ತಿದೆ. ಇದು ನಿಜವಾಗಿ ಜೀವನದ ಒಂದು ಭಾಗವಾಗಬೇಕಿದೆ. ಒತ್ತಡ, ಉದ್ವೇಗ ನಿವಾರಣೆಯಾದರೆ ಮನುಷ್ಯ ನೆಮ್ಮದಿ ಕಾಣುತ್ತಾನೆ. ಮೆಡಿಟೇಶನ್ ಮತ್ತು ಆಯುರ್ವೇದಗಳ ಕುರಿತು ಇರುವ ಪೂರ್ವಾಗ್ರಹ ಪೀಡಿತ ಭಾವನೆ ಹೊಗಲಾಡಿಸಬೇಕಿದೆ.

    ಚೀನಾ ದೇಶವು ಅಮೆರಿಕದ ನೆರವಿನಿಂದ ಕೃತಕವಾಗಿ ವೈರಸ್ ಸಿದ್ಧಪಡಿಸಿ ಬಿಟ್ಟಿತು. ಅದು ಜಗತ್ತನ್ನೇ ಹಾಳುಮಾಡುವ ಕೃತ್ಯ. ಜನಸಂಖ್ಯೆ ನಿಯಂತ್ರಣಕ್ಕೆ ಇಂಥ ಕೃತ್ಯ ಮಾಡಬಾರದು. ಆದರೆ ಭಾರತೀಯರಾದ ನಾವು ಮಾತ್ರ ಆಂಟಿವೈರಸ್ ಲಸಿಕೆ ಕಂಡುಹಿಡಿದು ಜಗತ್ತಿಗೆ ನಮ್ಮ ಸಾಮರ್ಥ್ಯ ತೊರಿದೆವು. ವ್ಯಾಕ್ಸಿನೇಶನ್ ನಿಂದ ಕೇವಲ ಶೇ.60ರಷ್ಟು ಪರಿಹಾರವಿರುವಾಗ ನಮ್ಮಲ್ಲಿ 18 ಗಿಡಮೂಲಿಕೆಗಳಿಂದ ತಯಾರಿಸಲಾಗಿರುವ ಔಷಧ ನೂರಕ್ಕೆ ನೂರರಷ್ಟು ಕೋವಿಡ್ ಗೆ ಪರಿಹಾರ ನೀಡುತ್ತದೆ ಎನ್ನುವುದು ಸಾಬೀತಾಗಿದೆ ಎಂದು ವಿವರಿಸಿದರು.

    ಇದಕ್ಕೂ ಮೊದಲು ಮಾತನಾಡಿದ ಬೆಳಗಾವಿ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಬೆಳಗಾವಿ ಅಭಿವೃದ್ಧಿಗೆ ಹಿನ್ನಡೆಯಾಗಿರುವ ಸಮಸ್ಯೆಗಳನ್ನು ಗುರುತಿಸುವ ಮತ್ತು ಎಫ್ಒಎಬಿ ಕೋರ್ ಕಮಿಟಿ ಆಗಾಗ ಸಭೆ ಸೇರಿ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಬೇಕು ಎಂದರು.

    ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಬೆಳಗಾವಿ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ತುರ್ತಾಗಿ ಪರಿಹಾರ ಕಂಡುಕೊಳ್ಳಬೇಕಾದ ವಿಷಯಗಳ ಪಟ್ಟಿ ಮಾಡಿ ಚರ್ಚಿಸುವ ಕೆಲಸವಾಗಬೇಕು ಎಂದರು.

    ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಡಾ.ವಿದ್ಯಾಶಂಕರ, ಬೆಳಗಾವಿ ಮೊದಲಿಗಿಂತ ಈಗ ಸಾಕಷ್ಟು ಬದಲಾಗಿದೆ. ಜನರಲ್ಲಿ ತಿಳಿವಳಿಕೆ ಮೂಡಿಸುವ ಮೂಲಕ ಇನ್ನಷ್ಟು ಬದಲಾವಣೆ ಸಾಧ್ಯವಿದೆ. ಮುಂದಿನ ದಿನಗಳಲ್ಲಿ ನಗರಕ್ಕೆ ಉತ್ತಮ ಭವಿಷ್ಯವಿದೆ. ಇಲ್ಲಿನ ಉದ್ಯಮಿಗಳ ಜೊತೆ ಚರ್ಚಿಸಿ, ಒಂದು ಬಂಡವಾಳ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗುವುದು ಎಂದರು.

    ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ನಿತಿನ್ ಗಂಗನೆ, ಬೆಳಗಾವಿ ಅತ್ಯಂತ ಸುಂದರ ನಗರವಾಗಿದ್ದು, ಎಲ್ಲರೂ ಕೈಜೋಡಿಸಿ ಅಭಿವೃದ್ಧಿಗೆ ಕೆಲಸ ಮಾಡೋಣ ಎಂದರು.

    ಕಮಾಂಡಂಟ್ ಎಮ್ಎಲ್ಐಆರ್ ಸಿ ಬ್ರಿಗೇಡಿಯರ್ ಜಾಯ್ ದೀಪ ಮುಖರ್ಜಿ, ಮಿಲ್ಟ್ರಿ ಕಮಾಂಡರ್ ಜೆಎಲ್ ವಿಂಗ್ ಮೇಜರ್ ವಿ ಕೆ ಗುರಂಗ್, ಎರ್ ಫೋರ್ಸ್ ಡೈರಕ್ಟರ್ ರಾಜೇಶ ಕುಮಾರ ಮೌರ್ಯ ಮೊದಲಾದವರು ಮಾತನಾಡಿದರು.

    ಎಫ್ಒಎಬಿ ಕೋ ಆರ್ಡಿನೇಟರ್ ಚೈತನ್ಯ ಕುಲಕರ್ಣಿ ಸ್ವಾಗತಿಸಿದರು. ಡಾ.ರಾಜೇಂದ್ರ ಬೆಳಗಾಂವ್ಕರ್ ಬೆಳಗಾವಿಯ ಸಮಗ್ರ ಪರಿಚಯ ನೀಡಿದರು. ಚೆಂಬರ್ ಆಫ್ ಕಾಮರ್ಸ್ ಚೇರಮನ್ ಹೇಮೇಂದ್ರ ಪೋರವಾಲ್ ರವಿಶಂಕರ ಗುರೂಜಿ ಅವರನ್ನು ಸನ್ಮಾನಿಸಿದರು. ಎಫ್ಒಎಬಿ ಸದಸ್ಯರಾಗಿರುವ 50ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಅಧ್ಯಕ್ಷ, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ತುಮಕೂರು: ಆಧುನಿಕ ಸಮಾಜದಲ್ಲೂ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಗರದ ಕೆಇಬಿ (KEB) ಇಂಜಿನಿಯರ್ಸ್…

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.