nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    • ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು
    ತುರುವೇಕೆರೆ February 8, 2023

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    By adminFebruary 8, 2023No Comments2 Mins Read
    turuvekere

    ತುರುವೇಕೆರೆ: ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನೆಪೆಡ್ ಮೂಲಕ ರಾಗಿ ಖರೀದಿ ಮಾಡಲು ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು ನಾಲ್ಕೈದು ದಿನಗಳಿಂದ ರಾಗಿ ಮಾರಾಟ ಮಾಡಲು ಬಂದಿದ್ದ ರೈತರು ಖರೀದಿ ಕೇಂದ್ರದಲ್ಲಿ ಖರೀದಿ ಪ್ರಕ್ರಿಯೆ ನಿಧಾನಗತಿಯಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಯುವಂತಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ತಾವು ತಂದಿದ್ದ ರಾಗಿ ತುಂಬಿದ ಟ್ರಾಕ್ಟರ್ ಗಳನ್ನು ರಸ್ತೆ ಬದಿಯ ಪಕ್ಕದಲ್ಲಿ ಸುಮಾರು ಎರಡರಿಂದ ಮೂರು ಕಿಲೋಮೀಟರ್ ದೂರದವರೆಗೆ ಸಾಲುಗಟ್ಟಿ ನಿಲ್ಲಿಸಲಾಗಿದೆ.

    ಇನ್ನು ಇದೇ ವೇಳೆಯಲ್ಲಿ ತಾಲೂಕು ಅಧ್ಯಕ್ಷರಾದ ರೈತ ಮುಖಂಡ ನಾಗೇಂದ್ರ ಅವರು ಮಾತನಾಡಿ, ಕೇವಲ ಮೂರು ರಾಗಿ ಖರೀದಿ ಕೇಂದ್ರಗಳಿ ಇಲ್ಲಿದ್ದು, ಇಲ್ಲಿ ಖರೀದಿ ಆಮೆ ಗತಿಯಲ್ಲಿ ಸಾಗುತ್ತಿದೆ. ತಾಲೂಕಿನಾದ್ಯಂತ ಹಳ್ಳಿಗಳಿಂದ ಬಂದಂತಹ ರೈತರುಗಳು ಬೇಸತ್ತು ಹೋಗಿದ್ದಾರೆ. ಒಟ್ಟಾರೆ ಈ ತಾಲೂಕಿನಲ್ಲಿ ಸುಮಾರು 13,602 ರೈತರು ನೋಂದಣಿ ಮಾಡಿಸಿದ್ದು, ಇಲ್ಲಿಯವರೆಗೆ ಕೇವಲ 980 ರೈತರಿಂದ ರಾಗಿ ಖರೀದಿ ಮಾಡಲಾಗಿದೆ ,ಏನೇ ಇರಲಿ ಆಹಾರ ಇಲಾಖೆಗೆ ಯಾವುದೇ ಮಂತ್ರಿ ಇಲ್ಲದಿರುವುದು ಈ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ,  ಜೊತೆಗೆ ಎಪಿಎಂಸಿಯಾಗಲಿ, ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಯಾಗಲಿ ರೈತರಿಗೆ ಸ್ಪಂದಿಸುತ್ತಿಲ್ಲ, ಇನ್ನು ನಾಲ್ಕೈದು ದಿನದಿಂದ ಪ್ರತಿನಿತ್ಯ ಒಬ್ಬ ರೈತರಿಗೆ ಊಟ, ಟ್ರ್ಯಾಕ್ಟರ್, ಬಾಡಿಗೆ, ಅಂತ ಹೇಳಿ ಸುಮಾರು 2,000 ಖರ್ಚು ಬರುತ್ತಿದ್ದು, ನಾಲ್ಕೈದು ದಿನಗಳಿಂದ ನಮ್ಮ ರೈತರುಗಳು ಸಂದಿಗ್ಧ ಪರಿಸ್ಥಿತಿಯಲ್ಲಿ ರಾಗಿ ಮಾರಾಟ ಮಾಡುವ ಹಾಗಾಗಿದೆ ಎಂದರು,


    Provided by
    Provided by

    ಇದೇ ವೇಳೆ ತಾಳಕೆರೆ ಗ್ರಾಮದ ರೈತ ಜವರೇಗೌಡ ಮಾತನಾಡಿ, ನಾವು ರಾಗಿ ಮಾರಾಟ ಮಾಡಲು ಬಂದು ಸುಮಾರು 6 ದಿವಸಗಳು ಕಳೆದಿವೆ, ಇನ್ನು ನಾವು ಬೆಳೆದಂತಹ ರಾಗಿಯನ್ನು ಮಾರಾಟ ಮಾಡಲು ನಮ್ಮಗಳ ಗ್ರಾಮದಿಂದ ಇಲ್ಲಿಯವರೆಗೆ 2,800 ಬಾಡಿಗೆ ಕೊಟ್ಟು ಟ್ರ್ಯಾಕ್ಟರ್ ಮೂಲಕ ರಾಗಿ ತುಂಬಿಕೊಂಡು ಬಂದಿದ್ದೇವೆ, ಇಲ್ಲಿ ನಾವುಗಳು ಬಂದು ಆರು ದಿವಸವಾಗಿದೆ. ಪ್ರತಿ ದಿನಕ್ಕೆ 500 ಟ್ರ್ಯಾಕ್ಟರ್ ಬಾಡಿಗೆ ಕೊಡಬೇಕು. ನಮ್ಮ ಊಟದ ಖರ್ಚು ನಿತ್ಯ 200 ರಿಂದ 300 ರೂ ಆಗಲಿದೆ ನಾವುಗಳು ಏನು ಮಾಡಬೇಕು ಎಂದು ಪ್ರಶ್ನಿಸಿದರು.

    turuvekere

    ರಾಗಿ ಖರೀದಿಗೆ ಸಂಬಂಧಪಟ್ಟಂತೆ ಯಾವೊಬ್ಬ ಅಧಿಕಾರಿಯು ರಾಗಿ ಕೇಂದ್ರದಲ್ಲಿ ವೇಗವಾಗಿ ಖರೀದಿ ನಡೆಸುತ್ತಿಲ್ಲ. ಕೇವಲ ಮೂರು ಕೇಂದ್ರಗಳಿದ್ದು ಇನ್ನು 200ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಜೊತೆಗೆ ರೈತರು ನಾವು ತಂದಿದ್ದ ರಾಗಿ ಬಿಸಿಲಿನಲ್ಲೇ ಒಣಗುತ್ತಿದ್ದೇವೆ. ನಮ್ಮ ಕಷ್ಟಗಳನ್ನು ಆಲಿಸುವರು ಯಾರು ಸ್ವಾಮಿ? ಎಂದು ಪ್ರಶ್ನಿಸಿದರು.

    ಇದಲ್ಲದೆ ಸರ್ಕಾರದಿಂದ ಕೊಡುವಂತ ಚೀಲದಲ್ಲಿ ನಾವು ತಂದಿದ್ದ ರಾಗಿಗಳನ್ನು  ತುಂಬಿಸುತ್ತಾರೆ. ಅದರಲ್ಲಿ ಅರ್ಧ ಕೆ.ಜಿ. ಎಷ್ಟು ಹೆಚ್ಚುವರಿ ರಾಗಿ ಚೀಲದಿಂದ ಹೊರಗೆ ಹೋಗುತ್ತದೆ ,ಪ್ರತಿ ಚೀಲಕ್ಕೆ ಅರ್ಧದಿಂದ ಒಂದು ಕೆಜಿಯಷ್ಟು ರಾಗಿ ಹೊರಗೆ ಹೋದರೆ ನಮ್ಮ ಗತಿ ಏನು,  ಸರ್ಕಾರದಿಂದ ಚೀಲ ಖರೀದಿಯಲ್ಲೋ ಅವ್ಯವಹಾರ ಮಾಡಿ ಗುಣಮಟ್ಟವಿಲ್ಲದ ಚೀಲಗಳಲ್ಲಿ ರಾಗಿ ತುಂಬಿಸಿ ರೈತರ ಹೊಟ್ಟೆಯ ಮೇಲೆ ಬರೆ ಹಾಕುತ್ತಿದ್ದಾರೆ ಸರಿಯಾದ ರೀತಿಯಲ್ಲಿ ಚೀಲ ದೊರಕಿಸಿ ಕೊಟ್ಟಿಲ್ಲ ಎಂದು ಆರೋಪಿಸಿದರು.

    ಇದೇ ಸಂದರ್ಭದಲ್ಲಿ , ರೈತರಾದ ಜವರೇಗೌಡ.ಶಶಿಧರ್ ಟಿ.ಎಸ್ ಈಶ್ವರಯ್ಯ ಕಡೆಹಳ್ಳಿ .ನಾಗೇಶ್ ಕೆ.ಶಿವು.ಶ್ರೀನಿವಾಸ ಕೆ ಟಿ ಕಣ್ಣತೂರು.ಇನ್ನು ಅನೇಕ ರೈತರು ಸ್ಥಳದಲ್ಲಿ ಇದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು

    October 25, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ತುಮಕೂರು: ನಗರದ ಸರಸ್ವತಿಪುರಂ ಬಡಾವಣೆಯಲ್ಲಿರುವ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ನ.21ರಂದು ಮತ್ತು 22 ರಂದು ಬೆಳಗ್ಗೆ…

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.