ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ (Sidlaghatta) ಕಾನೂನು ಮಾಪನ ಇಲಾಖೆ ಕಚೇರಿಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರಿಂದ ಲಂಚ ಪಡೆಯುತ್ತಿದ್ದ ವೇಳೆ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕಿ ಎಸ್.ಮಾಲಾ ಕಿರಣ್ ಅವರು, ₹ 8 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು ಮಂಗಳವಾರ ಹಣ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪ್ರತಿ ವರ್ಷ ಕಾನೂನು ಮಾಪನ ಇಲಾಖೆಯ (Legal Measurement Department) ಅಧಿಕಾರಿಗಳು ಪೆಟ್ರೋಲ್ ಬಂಕ್ ತಪಾಸಣೆ ಮಾಡಿ ಪ್ರಮಾಣ ಪತ್ರ ನೀಡುವರು. ಅದರಂತೆ ಶಿಡ್ಲಘಟ್ಟ ರಸ್ತೆಯ ಬಸವೇಶ್ವರ ಪೆಟ್ರೋಲ್ ಬಂಕ್ ಮಾಲೀಕ ಭಾಸ್ಕರ್ ಅವರು ಬಂಕ್ ತಪಾಸಣೆ ಮಾಡಿ ಸ್ಟಾಂಪಿಂಗ್ ಮಾಡುವಂತೆ ಜ.31ರಂದು ಕಾನೂನು ಮಾಪನ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು.
ಫೆ.6ರಂದು ಮಾಲಾ ಕಿರಣ್ ಪೆಟ್ರೋಲ್ ಬಂಕ್ಗೆ ಬಂದು ತಪಾಸಣೆ ಮಾಡಿ ಸ್ಟಾಂಪಿಂಗ್ ಮಾಡಿದ್ದರು. ಪೆಟ್ರೋಲ್ ಬಂಕ್ನಲ್ಲಿ ಎರಡು ಪಂಪ್ ಇದ್ದು ಇದಕ್ಕೆ ನಾಲ್ಕು ನಾಜಲ್ ಇವೆ. ಪ್ರತಿ ನಾಜಲ್ಗೆ ₹ 2 ಸಾವಿರಂತೆ ₹ 8 ಸಾವಿರ ಲಂಚಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದರು.
ಎಪಿಎಂಸಿ ಆವರಣದಲ್ಲಿರುವ ಕಾನೂನು ಮಾಪನ ಇಲಾಖೆ ಕಚೇರಿಯಲ್ಲಿಯೇ ಮಾಲಾ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


