nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್ ನ ವಿಶೇಷತೆಗಳೇನು?
    ರಾಜ್ಯ ಸುದ್ದಿ February 17, 2023

    ಸಿಎಂ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್ ನ ವಿಶೇಷತೆಗಳೇನು?

    By adminFebruary 17, 2023No Comments2 Mins Read
    basavraj bommay

    Provided by
    Provided by

    ಕೃಷಿ ವಲಯವನ್ನು ಉತ್ತೇಜಿಸುವ ಸಲುವಾಗಿಯೇ, ಶೂನ್ಯ ಬಡ್ಡಿ ಕೃಷಿ ಸಾಲದ ಮಿತಿಯನ್ನು ರೂ.3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ. 56 ಲಕ್ಷ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರೂ.180 ಕೋಟಿ ವೆಚ್ಚದಲ್ಲಿ “ಜೀವನ್ ಜ್ಯೋತಿ ಯೋಜನೆಯನ್ನು” ಜಾರಿಗೊಳಿಸಲಾಗುತ್ತಿದೆ.

    “ಸಹಸ್ರ ಸರೋವರ” ಕಾರ್ಯಕ್ರಮದಡಿ ರಾಜ್ಯದಲ್ಲಿ 1 ಸಾವಿರ ಸರೋವರಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಇದು ಕೃಷಿ ವಲಯದ ನೀರಾವರಿ ಯೋಜನೆಗಳಿಗೆ ಅನುಕೂಲವಾಗುತ್ತದೆ.

    ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ “ಭೂ ಸಿರಿ ಯೋಜನೆಯಡಿ” 10 ಸಾವಿರ ರೂಪಾಯಿಗಳ ಧನ ಸಹಾಯವನ್ನು ಒದಗಿಸಲಾಗುವುದು ಒಟ್ಟಾರೆಯಾಗಿ ಕೃಷಿ ಮತ್ತು ಅದಕ್ಕೆ ಪೂರಕ ಚಟುವಟಿಗಳ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 39031 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ.

    “ಅಮೃತ್ ಸ್ವಾಭಿಮಾನಿ ಕುರಿಗಾಹಿ ಯೋಜನೆ” ಅಡಿಯಲ್ಲಿ 20 ಸಾವಿರ ಫಲಾನುಭವಿಗಳಿಗೆ 355 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ.


    Provided by
    Provided by

    ಕೇಂದ್ರ ಪುರಸ್ಕೃತ ಅಮೃತ್-2.0 ಯೋಜನೆ ಅಡಿಯಲ್ಲಿ ರಾಜ್ಯದ 287 ನಗರ ಪ್ರದೇಶಗಳಲ್ಲಿ ಒಟ್ಟಾರೆ 9230 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನೀರು ಸರಬರಾಜು, ಜಲಮೂಲಗಳ ಸಂರಕ್ಷಣೆ ಮತ್ತು ಪುನಶ್ಚೇತನಕ್ಕೆ ನೀಡಲಾಗಿದೆ.

    ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2023-24ನೇ ಸಾಲಿನಲ್ಲಿ 185 ನಗರ ಮತ್ತು ಪಟ್ಟಣಗಳಲ್ಲಿ 6820 ಕೋಟಿ ರೂಪಾಯಿಗಳ ವೆಚ್ಚದಲ್ಲಿ 7.21 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗುವುದು.

    ರಾಜ್ಯದ 5188 ಪೌರಕಾರ್ಮಿಕರಿಗೆ ಗೃಹ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ 3733 ಮನೆಗಳ ನಿರ್ಮಾಣ ಕಾರ್ಯ ಮುಗಿದಿದೆ.

    “ಪೌರ ಆಸರೆ ಯೋಜನೆ” ಅಡಿಯಲ್ಲಿ 5000 ವಸತಿರಹಿತ ಪೌರ ನೌಕರರುಗಳಿಗೆ 300 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ.

    ಸ್ಮಾರ್ಟ್ ಸಿಟಿ ಅಭಿಯಾನದಡಿಯಲ್ಲಿ ರಾಜ್ಯದ 7 ನಗರಗಳು ಆಯ್ಕೆಯಾಗಿದ್ದು, ಇದುವರೆಗೂ 5900 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, 4157 ಕೋಟಿ ರೂಪಾಯಿಗಳ ಮೊತ್ತದ 506 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ 3395 ಕೋಟಿ ರೂಪಾಯಿ ಮೊತ್ತದ 143 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.

    ಬೀದರ್ ಮತ್ತು ರಾಯಚೂರು ನಗರಸಭೆಗಳನ್ನು ಮಹಾನಗರ ಪಾಲಿಕೆಯನ್ನಾಗಿ ಉನ್ನತೀಕರಿಸುವ ಬಗ್ಗೆ ಮಾನದಂಡವನ್ನು ಪರಿಶೀಲಿಸಲಾಗುವುದು.

    ಹೀಗೆ ನಗರಾಭಿವೃದ್ಧಿ ಇಲಾಖೆಗೆ ಒಟ್ಟಾರೆಯಾಗಿ 17938 ಕೋಟಿ ರೂಪಾಯಿಗಳನ್ನು ನೀಡಲಾಗಿದ್ದು, ಬೆಂಗಳೂರು ಮತ್ತು ಇತರ ನಗರಗಳಿಗೆ ತಾರತಮ್ಯ ರಹಿತವಾದ ಅಭಿವೃದ್ಧಿ ಕಾರ್ಯಗಳು ನಡೆಯಲು ಈ ಬಜೆಟ್ ನಲ್ಲಿ ಉತ್ತೇಜಿಸಲಾಗಿದೆ.

    ಕೃಷಿ, ಆರೋಗ್ಯ, ಶಿಕ್ಷಣ, ಉದ್ಯೋಗ ಸೃಷ್ಠಿ, ಎಲ್ಲಾ ಸಮಾಜಗಳ ಅಭಿವೃದ್ಧಿಗೆ ಉತ್ತೇಜಿಸುವ ಉದ್ದೇಶದಿಂದ ಸಮಾನತೆಯ ಕಲ್ಪನೆಯನ್ನು ಇಟ್ಟುಕೊಂಡು ಅದನ್ನು ನೈಜವಾಗಿ ಅನುಷ್ಠಾನಕ್ಕೆ ತರಲು ಉದ್ದೇಶಿಸಿರುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ರವರು 2023-24ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದಾರೆ.

    ಎರಡನೇ ಬಾರಿಗೆ ಆಯವ್ಯಯವನ್ನು ಮಂಡಿಸಿರುವ ಶ್ರೀ ಬಸವರಾಜ ಎಸ್. ಬೊಮ್ಮಾಯಿ ರವರು ಸರ್ವೋದಯ ಮತ್ತು ಸರ್ವರ ಕ್ಷೇಮ ಮತ್ತು ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು, ಅದನ್ನು ಜಾರಿಗೊಳಿಸುವ ಉದ್ದೇಶದಿಂದಲೇ 2023-24ನೇ ಸಾಲಿನ ಆಯವ್ಯಯ ಮಹತ್ವವೆನಿಸಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಔರಾದ್: ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾದ ಹಿನ್ನೆಲೆಯಲ್ಲಿ, ತಾಲೂಕು ಅಧಿಕಾರಿಗಳು ಹಾಗೂ ಗ್ರಾಮ…

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.